Homeಮುಖಪುಟತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

ತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

ತರ್ಕ ಅಥವಾ ಇತಿಹಾಸದ ಬಗ್ಗೆ ತಿಳುವಳಿಕೆ ಇಲ್ಲದಿದ್ದಾಗ ದ್ವೇಷ ಮತ್ತು ತಪ್ಪು ಮಾಹಿತಿಗಳು ಪ್ರವರ್ಧಮಾನಕ್ಕೆ ಬರುತ್ತವೆ. ಹಾಗಾಗಿ ಇಂದಿನ ಸಮಸ್ಯೆಗಳಿಗೆ ಮೊಘಲರನ್ನು ದೂಷಿಸಲಾಗುತ್ತಿದೆ.

- Advertisement -
- Advertisement -

ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದು ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಮಾರ್ಚ್ 3 ರಂದು ZEE5 ಓಟಿಟಿಯಲ್ಲಿ ಬಿಡುಗಡೆಯಾಗುತ್ತಿರುವ ‘ತಾಜ್ – ಡಿವೈಡೆಡ್ ಬೈ ಬ್ಲಡ್’ ವೆಬ್ ಸೀರಿಸ್ ನಲ್ಲಿ ಅವರು ರಾಜ ಅಕ್ಬರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಅವರನ್ನು ಮಾತಿಗೆಳೆದಿದೆ.

ಇಂದು ಏನೇ ತಪ್ಪುಗಳು ನಡೆದರೂ ಆ ಎಲ್ಲಾ ತಪ್ಪುಗಳಿಗೆ ಮೊಘಲರ ಆಡಳಿತವೇ ಕಾರಣ ಎಂದು ನಂಬುವ ಜನರಿರುವ ದೇಶವನ್ನು ನೀವು ಹೇಗೆ ನೋಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಜನರು ಅಕ್ಬರ್ ಮತ್ತು ನಾದರ್ ಶಾ ಅಥವಾ ಬಾಬರ್‌ನ ಮುತ್ತಜ್ಜ ತೈಮೂರ್‌ನಂತಹ ಆಕ್ರಮಣಕಾರರ ನಡುವಿನ ವ್ಯತ್ಯಾಸವನ್ನು ಹೇಳಲು ಸಾಧ್ಯವಿಲ್ಲ. ಇದೆಲ್ಲ ನೋಡಿದರೆ ನಗು ಬರುತ್ತದೆ, ಏಕೆಂದರೆ ಈ ಪ್ರಶ್ನೆಗಳೇ ಹಾಸ್ಯಾಸ್ಪದವಾಗಿವೆ” ಎಂದಿದ್ದಾರೆ.

”ಈ ದೇಶಕ್ಕೆ ಎಲ್ಲರೂ ಲೂಟಿ ಮಾಡಲು ಬಂದರು. ಆದರೆ ಮೊಘಲರು ಲೂಟಿ ಮಾಡಲು ಇಲ್ಲಿಗೆ ಬಂದಿಲ್ಲ. ಅವರು ಇದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಬಂದರು ಮತ್ತು ಅದನ್ನೇ ಅವರು ಮಾಡಿದರು. ಅವರ ಕೊಡುಗೆಯನ್ನು ಯಾರಾದರೂ ನಿರಾಕರಿಸಬಹುದೆ?” ಎಂದು ಶಾ ಪ್ರಶ್ನಿಸಿದ್ದಾರೆ.

ತರ್ಕ ಅಥವಾ ಇತಿಹಾಸದ ಬಗ್ಗೆ ತಿಳುವಳಿಕೆ ಇಲ್ಲದಿದ್ದಾಗ ದ್ವೇಷ ಮತ್ತು ತಪ್ಪು ಮಾಹಿತಿಗಳು ಪ್ರವರ್ಧಮಾನಕ್ಕೆ ಬರುತ್ತವೆ. ಹಾಗಾಗಿಯೆ ಬಹುಶಃ ಭಾರತದ ಒಂದಷ್ಟು ಜನರ ಗುಂಪು ಭೂತಕಾಲದ ಮೇಲೆ ಅದರಲ್ಲೂ ಮೊಘಲ್ ಸಾಮ್ರಾಜ್ಯವನ್ನು ದೂಷಿಸುತ್ತಿದೆ. ಇದು ನನಗೆ ಕೋಪಕ್ಕಿಂತ ಹೆಚ್ಚಾಗಿ ನಗು ತರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮೊಘಲರು ಕೇವಲ ದುಷ್ಕೃತ್ಯಗಳನ್ನೇ ನಡೆಸಿದ್ದಾರೆ ಎಂಬ ಕಲ್ಪನೆಯು ದೇಶದ ಇತಿಹಾಸದ ಬಗ್ಗೆ ತಿಳುವಳಿಕೆಯ ಕೊರತೆಯನ್ನು ತೋರಿಸುತ್ತದೆ. ಇತಿಹಾಸದ ಪುಸ್ತಕಗಳಲ್ಲಿ ಭಾರತದ ಸ್ಥಳೀಯ ಸಂಸ್ಕೃತಿಗಿಂತ ಮೊಘಲರ ವೈಭವೀಕರಣ ಮಾಡಿರುವುದು ನಿಜ. ಆದರೆ ಇತಿಹಾಸದಲ್ಲಿ ಮೊಘಲ್ ಕಾಲವನ್ನು ದುರಂತವೆಂದು ನಾವು ತಿರಸ್ಕರಿಸಬಾರದು ಎಂದು ಅವರು ಹೇಳಿದ್ದಾರೆ.

”ದುರದೃಷ್ಟವಶಾತ್ ಶಾಲೆಯ ಇತಿಹಾಸದ ಪುಸ್ತಕಗಳಲ್ಲಿ ಮುಖ್ಯವಾಗಿ ಮೊಘಲರು ಅಥವಾ ಬ್ರಿಟಿಷರ ಬಗ್ಗೆ ಹೆಚ್ಚು ತಿಳಿಸಿಕೊಡಲಾಗುತ್ತದೆ. ನಮಗೆ ಲಾರ್ಡ್ ಹಾರ್ಡಿ, ಲಾರ್ಡ್ ಕಾರ್ನ್‌ವಾಲಿಸ್ ಮತ್ತು ಮೊಘಲ್ ಚಕ್ರವರ್ತಿಗಳ ಬಗ್ಗೆ ತಿಳಿದಿದೆ. ಆದರೆ ನಮಗೆ ಗುಪ್ತ ರಾಜವಂಶದ ಬಗ್ಗೆ ಅಥವಾ ಮೌರ್ಯ ಸಾಮ್ರಾಜ್ಯದ ಬಗ್ಗೆ ಅಥವಾ ವಿಜಯನಗರ ಸಾಮ್ರಾಜ್ಯದ ಬಗ್ಗೆ, ಅಜಂತಾ ಗುಹೆಗಳ ಇತಿಹಾಸ ಅಥವಾ ಈಶಾನ್ಯದ ಬಗ್ಗೆ ಹೆಚ್ಚು ತಿಳಿದಿಲ್ಲ. ನಾವು ಈ ಯಾವುದೇ ವಿಷಯಗಳನ್ನು ಓದಲಿಲ್ಲ ಏಕೆಂದರೆ ಇತಿಹಾಸವನ್ನು ಇಂಗ್ಲಿಷ್ ಅಥವಾ ಆಂಗ್ಲರು ಬರೆದಿದ್ದಾರೆ ಮತ್ತು ಇದು ನಿಜವಾಗಿಯೂ ಅನ್ಯಾಯವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಆದ್ದರಿಂದ ಜನರು ಹೇಳುತ್ತಿರುವುದು ಸ್ವಲ್ಪ ಮಟ್ಟಿಗೆ ನಿಜ. ಇತಿಹಾಸ ಪಠ್ಯದಲ್ಲಿ ಮೊಘಲರನ್ನು ವೈಭವೀಕರಿಸಲಾಗಿದೆ. ಆದರೆ ಅವರನ್ನು ವಿಲನ್ ಮಾಡುವ ಅಗತ್ಯವಿಲ್ಲ. ಮೊಘಲ್ ಸಾಮ್ರಾಜ್ಯವು ತುಂಬಾ ರಾಕ್ಷಸತನದಿಂದ ಕೂಡಿತ್ತು ಎಂದು ಅದನ್ನು ವಿರೋಧಿಸುವವರು, ಮೊಘಲರು ನಿರ್ಮಿಸಿದ ಸ್ಮಾರಕಗಳನ್ನು ಏಕೆ ಕೆಡವುವುದಿಲ್ಲ? ಅವರು ಮಾಡಿದ್ದೆಲ್ಲವೂ ಭಯಾನಕವಾಗಿದ್ದರೆ, ತಾಜ್ ಮಹಲ್ ಕೆಡವಿ, ಕೆಂಪು ಕೋಟೆಯನ್ನು ಕೆಡವಿ, ಕುತುಬ್ ಮಿನಾರ್‌ನ್ನು ಕೆಡವಿ. ಬದಲಿಗೆ ನಾವು ಕೆಂಪು ಕೋಟೆಯನ್ನು ಏಕೆ ಪವಿತ್ರವೆಂದು ಪರಿಗಣಿಸುತ್ತೇವೆ? ಇದನ್ನು ಮೊಘಲರು ನಿರ್ಮಿಸಿದರು. ನಾವು ಅವರನ್ನು ವೈಭವೀಕರಿಸುವ ಅಗತ್ಯವಿಲ್ಲ, ಆದರೆ ಅವರನ್ನು ನಿಂದಿಸುವ ಅಗತ್ಯವೂ ಇಲ್ಲ ಎಂದು ನಾಸಿರುದ್ದೀನ್ ಶಾ ಹೇಳಿದ್ದಾರೆ.

ಈ ಕುರಿತು ಬೌದ್ಧಿಕ ಚರ್ಚೆಗೆ ಅವಕಾಶ ಇದೆಯೇ ಎಂಬ ಪ್ರಶ್ನೆಗೆ ನಾಸಿರುದ್ದೀನ್ ಶಾ ಖಂಡಿತ ಅಂತಹ ಪರಿಸ್ಥಿತಿ ಇಲ್ಲ. ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದಿದ್ದಾರೆ. ಮುಂದುವರಿದು “ಟಿಪ್ಪು ಸುಲ್ತಾನ್‌ ಆಂಗ್ಲರನ್ನು ಭಾರತದಿಂದ ಓಡಿಸಲು ತನ್ನ ಪ್ರಾಣವನ್ನೇ ಕೊಟ್ಟ ವ್ಯಕ್ತಿ. ಆದರೆ ಅಂತಹ ವ್ಯಕ್ತಿಯನ್ನೇ ಇಂದು ತುಚ್ಚೀಕರಿಸಲಾಗುತ್ತಿದೆ. ‘ನಿಮಗೆ ಟಿಪ್ಪು ಸುಲ್ತಾನ್ ಬೇಕಾ ಅಥವಾ ರಾಮ ಮಂದಿರ ಬೇಕೇ?’ ಎಂದು ಪ್ರಶ್ನಿಸುತ್ತಿದ್ದಾರೆ. ಇದು ಯಾವ ರೀತಿಯ ತರ್ಕ? ಈ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ನಾನು ಭಾವಿಸಿದ್ದೇನೆ, ಏಕೆಂದರೆ ಅವರು ಎಂದಿಗೂ ನನ್ನ ದೃಷ್ಟಿಕೋನದಲ್ಲಿ ಯೋಚಿಸಲು ಮತ್ತು ನಾನು ಅವರ ದೃಷ್ಟಿಕೋನದಲ್ಲಿ ಯೋಚಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಆಳುವ ಸರ್ಕಾರದ ಮಂತ್ರಿಗಳು ನಿರಂತರವಾಗಿ ಮೊಘಲ್ ಯುಗವನ್ನು ನಿಂದಿಸುತ್ತಿದ್ದಾರೆ. ಮೊಘಲರ ಕಾಲದ ಹೆಸರುಗಳಿರುವ 40 ಹಳ್ಳಿಗಳ ಹೆಸರು ಬದಲಾಯಿಸಲು ಪ್ರಯತ್ನಿಸುವುದರಿಂದ ಹಿಡಿದು ಇತ್ತಿಚೇಗೆ ರಾಷ್ಟ್ರಪತಿ ಭವನದಲ್ಲಿರುವ ಐತಿಹಾಸಿಕ ಮೊಘಲ್ ಉದ್ಯಾನವನ್ನು ‘ಅಮೃತ್ ಉದ್ಯಾನ್’ ಎಂದು ಮರುನಾಮಕರಣ ಮಾಡುವವರೆಗೆ ಇತಿಹಾಸವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಕಳೆದ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ, ಕಾಶಿ, ಕೇದಾರನಾಥ ಮತ್ತು ಬದರಿನಾಥ್ ಅಭಿವೃದ್ಧಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸುವವರು ಚುನಾವಣೆ ಎದುರಿಸುತ್ತಿದ್ದಾರೆ. ಇಬ್ಬರಲ್ಲಿ ಯಾರನ್ನು ಆರಿಸುತ್ತೀರಿ” ಎಂದು ಪ್ರಶ್ನಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ನಾಸಿರುದ್ದೀನ್ ಶಾರವರ ಮೇಲಿನ ಮಾತುಗಳು ಬಹಳ ಮಹತ್ವ ಪಡೆಯುತ್ತವೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌

ಇದನ್ನೂ ಓದಿ: ಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...