Homeಮುಖಪುಟತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

ತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

ತರ್ಕ ಅಥವಾ ಇತಿಹಾಸದ ಬಗ್ಗೆ ತಿಳುವಳಿಕೆ ಇಲ್ಲದಿದ್ದಾಗ ದ್ವೇಷ ಮತ್ತು ತಪ್ಪು ಮಾಹಿತಿಗಳು ಪ್ರವರ್ಧಮಾನಕ್ಕೆ ಬರುತ್ತವೆ. ಹಾಗಾಗಿ ಇಂದಿನ ಸಮಸ್ಯೆಗಳಿಗೆ ಮೊಘಲರನ್ನು ದೂಷಿಸಲಾಗುತ್ತಿದೆ.

- Advertisement -
- Advertisement -

ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದು ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಮಾರ್ಚ್ 3 ರಂದು ZEE5 ಓಟಿಟಿಯಲ್ಲಿ ಬಿಡುಗಡೆಯಾಗುತ್ತಿರುವ ‘ತಾಜ್ – ಡಿವೈಡೆಡ್ ಬೈ ಬ್ಲಡ್’ ವೆಬ್ ಸೀರಿಸ್ ನಲ್ಲಿ ಅವರು ರಾಜ ಅಕ್ಬರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಅವರನ್ನು ಮಾತಿಗೆಳೆದಿದೆ.

ಇಂದು ಏನೇ ತಪ್ಪುಗಳು ನಡೆದರೂ ಆ ಎಲ್ಲಾ ತಪ್ಪುಗಳಿಗೆ ಮೊಘಲರ ಆಡಳಿತವೇ ಕಾರಣ ಎಂದು ನಂಬುವ ಜನರಿರುವ ದೇಶವನ್ನು ನೀವು ಹೇಗೆ ನೋಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಜನರು ಅಕ್ಬರ್ ಮತ್ತು ನಾದರ್ ಶಾ ಅಥವಾ ಬಾಬರ್‌ನ ಮುತ್ತಜ್ಜ ತೈಮೂರ್‌ನಂತಹ ಆಕ್ರಮಣಕಾರರ ನಡುವಿನ ವ್ಯತ್ಯಾಸವನ್ನು ಹೇಳಲು ಸಾಧ್ಯವಿಲ್ಲ. ಇದೆಲ್ಲ ನೋಡಿದರೆ ನಗು ಬರುತ್ತದೆ, ಏಕೆಂದರೆ ಈ ಪ್ರಶ್ನೆಗಳೇ ಹಾಸ್ಯಾಸ್ಪದವಾಗಿವೆ” ಎಂದಿದ್ದಾರೆ.

”ಈ ದೇಶಕ್ಕೆ ಎಲ್ಲರೂ ಲೂಟಿ ಮಾಡಲು ಬಂದರು. ಆದರೆ ಮೊಘಲರು ಲೂಟಿ ಮಾಡಲು ಇಲ್ಲಿಗೆ ಬಂದಿಲ್ಲ. ಅವರು ಇದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಬಂದರು ಮತ್ತು ಅದನ್ನೇ ಅವರು ಮಾಡಿದರು. ಅವರ ಕೊಡುಗೆಯನ್ನು ಯಾರಾದರೂ ನಿರಾಕರಿಸಬಹುದೆ?” ಎಂದು ಶಾ ಪ್ರಶ್ನಿಸಿದ್ದಾರೆ.

ತರ್ಕ ಅಥವಾ ಇತಿಹಾಸದ ಬಗ್ಗೆ ತಿಳುವಳಿಕೆ ಇಲ್ಲದಿದ್ದಾಗ ದ್ವೇಷ ಮತ್ತು ತಪ್ಪು ಮಾಹಿತಿಗಳು ಪ್ರವರ್ಧಮಾನಕ್ಕೆ ಬರುತ್ತವೆ. ಹಾಗಾಗಿಯೆ ಬಹುಶಃ ಭಾರತದ ಒಂದಷ್ಟು ಜನರ ಗುಂಪು ಭೂತಕಾಲದ ಮೇಲೆ ಅದರಲ್ಲೂ ಮೊಘಲ್ ಸಾಮ್ರಾಜ್ಯವನ್ನು ದೂಷಿಸುತ್ತಿದೆ. ಇದು ನನಗೆ ಕೋಪಕ್ಕಿಂತ ಹೆಚ್ಚಾಗಿ ನಗು ತರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮೊಘಲರು ಕೇವಲ ದುಷ್ಕೃತ್ಯಗಳನ್ನೇ ನಡೆಸಿದ್ದಾರೆ ಎಂಬ ಕಲ್ಪನೆಯು ದೇಶದ ಇತಿಹಾಸದ ಬಗ್ಗೆ ತಿಳುವಳಿಕೆಯ ಕೊರತೆಯನ್ನು ತೋರಿಸುತ್ತದೆ. ಇತಿಹಾಸದ ಪುಸ್ತಕಗಳಲ್ಲಿ ಭಾರತದ ಸ್ಥಳೀಯ ಸಂಸ್ಕೃತಿಗಿಂತ ಮೊಘಲರ ವೈಭವೀಕರಣ ಮಾಡಿರುವುದು ನಿಜ. ಆದರೆ ಇತಿಹಾಸದಲ್ಲಿ ಮೊಘಲ್ ಕಾಲವನ್ನು ದುರಂತವೆಂದು ನಾವು ತಿರಸ್ಕರಿಸಬಾರದು ಎಂದು ಅವರು ಹೇಳಿದ್ದಾರೆ.

”ದುರದೃಷ್ಟವಶಾತ್ ಶಾಲೆಯ ಇತಿಹಾಸದ ಪುಸ್ತಕಗಳಲ್ಲಿ ಮುಖ್ಯವಾಗಿ ಮೊಘಲರು ಅಥವಾ ಬ್ರಿಟಿಷರ ಬಗ್ಗೆ ಹೆಚ್ಚು ತಿಳಿಸಿಕೊಡಲಾಗುತ್ತದೆ. ನಮಗೆ ಲಾರ್ಡ್ ಹಾರ್ಡಿ, ಲಾರ್ಡ್ ಕಾರ್ನ್‌ವಾಲಿಸ್ ಮತ್ತು ಮೊಘಲ್ ಚಕ್ರವರ್ತಿಗಳ ಬಗ್ಗೆ ತಿಳಿದಿದೆ. ಆದರೆ ನಮಗೆ ಗುಪ್ತ ರಾಜವಂಶದ ಬಗ್ಗೆ ಅಥವಾ ಮೌರ್ಯ ಸಾಮ್ರಾಜ್ಯದ ಬಗ್ಗೆ ಅಥವಾ ವಿಜಯನಗರ ಸಾಮ್ರಾಜ್ಯದ ಬಗ್ಗೆ, ಅಜಂತಾ ಗುಹೆಗಳ ಇತಿಹಾಸ ಅಥವಾ ಈಶಾನ್ಯದ ಬಗ್ಗೆ ಹೆಚ್ಚು ತಿಳಿದಿಲ್ಲ. ನಾವು ಈ ಯಾವುದೇ ವಿಷಯಗಳನ್ನು ಓದಲಿಲ್ಲ ಏಕೆಂದರೆ ಇತಿಹಾಸವನ್ನು ಇಂಗ್ಲಿಷ್ ಅಥವಾ ಆಂಗ್ಲರು ಬರೆದಿದ್ದಾರೆ ಮತ್ತು ಇದು ನಿಜವಾಗಿಯೂ ಅನ್ಯಾಯವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಆದ್ದರಿಂದ ಜನರು ಹೇಳುತ್ತಿರುವುದು ಸ್ವಲ್ಪ ಮಟ್ಟಿಗೆ ನಿಜ. ಇತಿಹಾಸ ಪಠ್ಯದಲ್ಲಿ ಮೊಘಲರನ್ನು ವೈಭವೀಕರಿಸಲಾಗಿದೆ. ಆದರೆ ಅವರನ್ನು ವಿಲನ್ ಮಾಡುವ ಅಗತ್ಯವಿಲ್ಲ. ಮೊಘಲ್ ಸಾಮ್ರಾಜ್ಯವು ತುಂಬಾ ರಾಕ್ಷಸತನದಿಂದ ಕೂಡಿತ್ತು ಎಂದು ಅದನ್ನು ವಿರೋಧಿಸುವವರು, ಮೊಘಲರು ನಿರ್ಮಿಸಿದ ಸ್ಮಾರಕಗಳನ್ನು ಏಕೆ ಕೆಡವುವುದಿಲ್ಲ? ಅವರು ಮಾಡಿದ್ದೆಲ್ಲವೂ ಭಯಾನಕವಾಗಿದ್ದರೆ, ತಾಜ್ ಮಹಲ್ ಕೆಡವಿ, ಕೆಂಪು ಕೋಟೆಯನ್ನು ಕೆಡವಿ, ಕುತುಬ್ ಮಿನಾರ್‌ನ್ನು ಕೆಡವಿ. ಬದಲಿಗೆ ನಾವು ಕೆಂಪು ಕೋಟೆಯನ್ನು ಏಕೆ ಪವಿತ್ರವೆಂದು ಪರಿಗಣಿಸುತ್ತೇವೆ? ಇದನ್ನು ಮೊಘಲರು ನಿರ್ಮಿಸಿದರು. ನಾವು ಅವರನ್ನು ವೈಭವೀಕರಿಸುವ ಅಗತ್ಯವಿಲ್ಲ, ಆದರೆ ಅವರನ್ನು ನಿಂದಿಸುವ ಅಗತ್ಯವೂ ಇಲ್ಲ ಎಂದು ನಾಸಿರುದ್ದೀನ್ ಶಾ ಹೇಳಿದ್ದಾರೆ.

ಈ ಕುರಿತು ಬೌದ್ಧಿಕ ಚರ್ಚೆಗೆ ಅವಕಾಶ ಇದೆಯೇ ಎಂಬ ಪ್ರಶ್ನೆಗೆ ನಾಸಿರುದ್ದೀನ್ ಶಾ ಖಂಡಿತ ಅಂತಹ ಪರಿಸ್ಥಿತಿ ಇಲ್ಲ. ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದಿದ್ದಾರೆ. ಮುಂದುವರಿದು “ಟಿಪ್ಪು ಸುಲ್ತಾನ್‌ ಆಂಗ್ಲರನ್ನು ಭಾರತದಿಂದ ಓಡಿಸಲು ತನ್ನ ಪ್ರಾಣವನ್ನೇ ಕೊಟ್ಟ ವ್ಯಕ್ತಿ. ಆದರೆ ಅಂತಹ ವ್ಯಕ್ತಿಯನ್ನೇ ಇಂದು ತುಚ್ಚೀಕರಿಸಲಾಗುತ್ತಿದೆ. ‘ನಿಮಗೆ ಟಿಪ್ಪು ಸುಲ್ತಾನ್ ಬೇಕಾ ಅಥವಾ ರಾಮ ಮಂದಿರ ಬೇಕೇ?’ ಎಂದು ಪ್ರಶ್ನಿಸುತ್ತಿದ್ದಾರೆ. ಇದು ಯಾವ ರೀತಿಯ ತರ್ಕ? ಈ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ನಾನು ಭಾವಿಸಿದ್ದೇನೆ, ಏಕೆಂದರೆ ಅವರು ಎಂದಿಗೂ ನನ್ನ ದೃಷ್ಟಿಕೋನದಲ್ಲಿ ಯೋಚಿಸಲು ಮತ್ತು ನಾನು ಅವರ ದೃಷ್ಟಿಕೋನದಲ್ಲಿ ಯೋಚಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಆಳುವ ಸರ್ಕಾರದ ಮಂತ್ರಿಗಳು ನಿರಂತರವಾಗಿ ಮೊಘಲ್ ಯುಗವನ್ನು ನಿಂದಿಸುತ್ತಿದ್ದಾರೆ. ಮೊಘಲರ ಕಾಲದ ಹೆಸರುಗಳಿರುವ 40 ಹಳ್ಳಿಗಳ ಹೆಸರು ಬದಲಾಯಿಸಲು ಪ್ರಯತ್ನಿಸುವುದರಿಂದ ಹಿಡಿದು ಇತ್ತಿಚೇಗೆ ರಾಷ್ಟ್ರಪತಿ ಭವನದಲ್ಲಿರುವ ಐತಿಹಾಸಿಕ ಮೊಘಲ್ ಉದ್ಯಾನವನ್ನು ‘ಅಮೃತ್ ಉದ್ಯಾನ್’ ಎಂದು ಮರುನಾಮಕರಣ ಮಾಡುವವರೆಗೆ ಇತಿಹಾಸವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಕಳೆದ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ, ಕಾಶಿ, ಕೇದಾರನಾಥ ಮತ್ತು ಬದರಿನಾಥ್ ಅಭಿವೃದ್ಧಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸುವವರು ಚುನಾವಣೆ ಎದುರಿಸುತ್ತಿದ್ದಾರೆ. ಇಬ್ಬರಲ್ಲಿ ಯಾರನ್ನು ಆರಿಸುತ್ತೀರಿ” ಎಂದು ಪ್ರಶ್ನಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ನಾಸಿರುದ್ದೀನ್ ಶಾರವರ ಮೇಲಿನ ಮಾತುಗಳು ಬಹಳ ಮಹತ್ವ ಪಡೆಯುತ್ತವೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌

ಇದನ್ನೂ ಓದಿ: ಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...