Homeಕರ್ನಾಟಕಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ.

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ಕಾರ್ಯಕರ್ತೆಯರಿಗೆ ಐದು ತಿಂಗಳಾದರೂ ಗೌರವಧನ ಬಿಡುಗಡೆಯಾಗಿಲ್ಲ. ಹತ್ತು-ಹದಿನೈದು ವರ್ಷಗಳಿಂದ ದುಡಿಯುತ್ತಿರುವ ಕಾರ್ಯಕರ್ತೆಯರು ಇದೀಗ ಕೊರೊನಾ ಲಾಕ್‌ಡೌನ್‌ ನಡುವೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಯಾವುದೇ ಅಧಾಯದ ಮೂಲಗಳು ಇಲ್ಲದ ಅವರು ಇದೇ ವೃತ್ತಿಯನ್ನು ನಂಬಿ ಜೀವನ ದೂಡುತ್ತಿದ್ದು, ಗೌರವಧನ ಸಿಗದೆ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಬಂದಿದೆ.

ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ವೇಳೆ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಕೆಗೆ ಇವರನ್ನು ಗೌರವಧನದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಶಾಲೆಗಳು ಆರಂಭವಾಗುವ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ಬಿಸಿಯೂಟ ಕಾರ್ಯಕರ್ತೆಯರಿಗೆ ಸಂಜೆ 4 ಗಂಟೆಯವರೆಗೂ ಕೆಲಸವಿರುತ್ತದೆ.

ಯಾವುದೇ ಸರ್ಕಾರಿ ಶಾಲೆಗಳಲ್ಲಿ ಡಿ ಗ್ರೂಪ್ ನೌಕರರು ಇಲ್ಲ. ಹಾಗಾಗಿ ಬಿಸಿಯೂಟ ಮಾಡುವ ಮೊದಲು ಕೊಠಡಿಗಳು ಮತ್ತು ಆವರಣ ಸ್ವಚ್ಚಗೊಳಿಸುವ ಕೆಲಸವೂ ಬಿಸಿಯೂಟ ಕಾರ್ಯಕರ್ತೆಯರ ಮೇಲೆ ಬೀಳುತ್ತದೆ. ಕೈತೋಟಗಳನ್ನು ಆರೈಕೆ ಮಾಡುವ ಕೆಲಸವನ್ನು ನೋಡಿಕೊಳ್ಳಬೇಕಾಗುತ್ತದೆ. ಬಿಸಿಯೂಟ ಮಾಡಿ ಮಕ್ಕಳಿಗೆ ಊಟ ಬಡಿಸಿದ ಮೇಲೆ ಪಾತ್ರೆಗಳ ಶುಚಿಗೊಳಿಸುವುದು ನಂತರ ಶಾಲಾ ಕೈತೋಟದಲ್ಲಿ ಕೆಲಸ ಇರುತ್ತದೆ.

ದಿನದ ಸುಮಾರು ಆರು ಗಂಟೆಗಳನ್ನು ಶಾಲೆಯಲ್ಲೇ ಕಳೆಯಬೇಕಾಗುತ್ತದೆ. ಹಾಗಾಗಿ ಬಿಸಿಯೂಟದವರು ಬೇರೆ ಕೂಲಿ ಕೆಲಸಗಳಿಗೂ ಹೋಗಲು ಸಾಧ್ಯವಿಲ್ಲ. ಅಕ್ಷರದಾಸೋಹ ಯೋಜನೆಯಡಿ ಬರುವ ಮಾಸಿಕ 2600 ರೂ ಗೌರವಧನ ಹೊರತುಪಡಿಸಿ ಬೇರೆ ಹಣಕಾಸಿನ ಮೂಲಗಳು ಇಲ್ಲ. ಬರುವ ಕಡಿಮೆ ಗೌರವಧನದಲ್ಲಿ ಕುಟುಂಬವನ್ನು ನಿರ್ವಹಣೆ ಮಾಡಬೇಕಾಗಿದೆ.

ಕೊರೊನ ಸೋಂಕು ವ್ಯಾಪಕವಾಗಿ ಸಮುದಾಯದ ನಡುವೆ ಹರಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಶಾಲೆಗಳು ಆರಂಭವಾಗಿಲ್ಲ. ಕೋವಿಡ್-19 ಮತ್ತು ಲಾಕ್ ಡೌನ್‌ನಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತೆ ಮಾಡಿದೆ. ಐದು ತಿಂಗಳಿಂದ ಗೌರವಧನ ಸಿಕ್ಕಿಲ್ಲ. ಕೂಲಿಯೂ ಇಲ್ಲ, ಮನೆ ನಿರ್ವಹಣೆ ಮಾಡುವುದು ಕಷ್ಟವಾಗಿದೆ ಎಂದು ಬಿಸಿಯೂಟ ಮಹಿಳೆಯರು ನಾನುಗೌರಿ.ಕಾಂ ಜೊತೆ ನೋವು ತೋಡಿಕೊಂಡರು.

ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತ ಮಾತನಾಡಿ “ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೌರವಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಹಲವು ಮನವಿಗಳನ್ನು ನೀಡಿದ್ದೇವೆ. ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇವೆ. ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದೇವೆ. ಅವರೆಲ್ಲರೂ ಕೊಡುವ ಮಾತನಾಡುತ್ತಾರೆಯೇ ಹೊರತು ಕೊಟ್ಟಿಲ್ಲ. ಶಿಕ್ಷಣ ಸಚಿವರ ಜೊತೆ ಮಾತುಕತೆ ನಡೆಸಿದ್ದೇವೆ. ಕೊಡುವ ಭರವಸೆಗಳನ್ನು ನೀಡಿದರು. ಆದರೂ ಹಣ ಬಂದಿಲ್ಲ. ಹಾಗಾಗಿ ಆಗಸ್ಟ್ 11 ರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇವೆ. ನಿನ್ನೆ ಮತ್ತು ಇಂದು ರಜೆ ಇದ್ದರಿಂದ ಉಪವಾಸವನ್ನು ನಿಲ್ಲಿಸಿದ್ದೆವು. ಆಗಸ್ಟ್ 17ರಿಂದ ಮತ್ತೆ ಉಪವಾಸ ಕೂರುತ್ತೇವೆ ಎಂದು ಅವರು ಹೇಳಿದರು.

ಏಪ್ರಿಲ್ ತಿಂಗಳಿಂದಲೂ ಹಣ ಬಿಡುಗಡೆಯಾಗದೇ ಇರುವುದು ಬಡತನದಲ್ಲಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕಿಯರು ಕುಟುಂಬಗಳನ್ನು ಸಂಭಾಳಿಸುವುದು ಕಷ್ಟವಾಗಿದೆ. ಕೂಡಲೇ ಸರ್ಕಾರ ಗೌರವಧನ ಬಿಡುಗಡೆ ಮಾಡಬೇಕು. ಅವರ ಕುಟುಂಬಗಳನ್ನು ರಕ್ಷಣೆ ಮಾಡಬೇಕು ಎಂದು ಮಾಲಿನಿ ಮೆಸ್ತ ಆಗ್ರಹಿಸಿದರು.


ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...