Homeಕರ್ನಾಟಕಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ.

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ಕಾರ್ಯಕರ್ತೆಯರಿಗೆ ಐದು ತಿಂಗಳಾದರೂ ಗೌರವಧನ ಬಿಡುಗಡೆಯಾಗಿಲ್ಲ. ಹತ್ತು-ಹದಿನೈದು ವರ್ಷಗಳಿಂದ ದುಡಿಯುತ್ತಿರುವ ಕಾರ್ಯಕರ್ತೆಯರು ಇದೀಗ ಕೊರೊನಾ ಲಾಕ್‌ಡೌನ್‌ ನಡುವೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಯಾವುದೇ ಅಧಾಯದ ಮೂಲಗಳು ಇಲ್ಲದ ಅವರು ಇದೇ ವೃತ್ತಿಯನ್ನು ನಂಬಿ ಜೀವನ ದೂಡುತ್ತಿದ್ದು, ಗೌರವಧನ ಸಿಗದೆ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಬಂದಿದೆ.

ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ವೇಳೆ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಕೆಗೆ ಇವರನ್ನು ಗೌರವಧನದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಶಾಲೆಗಳು ಆರಂಭವಾಗುವ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ಬಿಸಿಯೂಟ ಕಾರ್ಯಕರ್ತೆಯರಿಗೆ ಸಂಜೆ 4 ಗಂಟೆಯವರೆಗೂ ಕೆಲಸವಿರುತ್ತದೆ.

ಯಾವುದೇ ಸರ್ಕಾರಿ ಶಾಲೆಗಳಲ್ಲಿ ಡಿ ಗ್ರೂಪ್ ನೌಕರರು ಇಲ್ಲ. ಹಾಗಾಗಿ ಬಿಸಿಯೂಟ ಮಾಡುವ ಮೊದಲು ಕೊಠಡಿಗಳು ಮತ್ತು ಆವರಣ ಸ್ವಚ್ಚಗೊಳಿಸುವ ಕೆಲಸವೂ ಬಿಸಿಯೂಟ ಕಾರ್ಯಕರ್ತೆಯರ ಮೇಲೆ ಬೀಳುತ್ತದೆ. ಕೈತೋಟಗಳನ್ನು ಆರೈಕೆ ಮಾಡುವ ಕೆಲಸವನ್ನು ನೋಡಿಕೊಳ್ಳಬೇಕಾಗುತ್ತದೆ. ಬಿಸಿಯೂಟ ಮಾಡಿ ಮಕ್ಕಳಿಗೆ ಊಟ ಬಡಿಸಿದ ಮೇಲೆ ಪಾತ್ರೆಗಳ ಶುಚಿಗೊಳಿಸುವುದು ನಂತರ ಶಾಲಾ ಕೈತೋಟದಲ್ಲಿ ಕೆಲಸ ಇರುತ್ತದೆ.

ದಿನದ ಸುಮಾರು ಆರು ಗಂಟೆಗಳನ್ನು ಶಾಲೆಯಲ್ಲೇ ಕಳೆಯಬೇಕಾಗುತ್ತದೆ. ಹಾಗಾಗಿ ಬಿಸಿಯೂಟದವರು ಬೇರೆ ಕೂಲಿ ಕೆಲಸಗಳಿಗೂ ಹೋಗಲು ಸಾಧ್ಯವಿಲ್ಲ. ಅಕ್ಷರದಾಸೋಹ ಯೋಜನೆಯಡಿ ಬರುವ ಮಾಸಿಕ 2600 ರೂ ಗೌರವಧನ ಹೊರತುಪಡಿಸಿ ಬೇರೆ ಹಣಕಾಸಿನ ಮೂಲಗಳು ಇಲ್ಲ. ಬರುವ ಕಡಿಮೆ ಗೌರವಧನದಲ್ಲಿ ಕುಟುಂಬವನ್ನು ನಿರ್ವಹಣೆ ಮಾಡಬೇಕಾಗಿದೆ.

ಕೊರೊನ ಸೋಂಕು ವ್ಯಾಪಕವಾಗಿ ಸಮುದಾಯದ ನಡುವೆ ಹರಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಶಾಲೆಗಳು ಆರಂಭವಾಗಿಲ್ಲ. ಕೋವಿಡ್-19 ಮತ್ತು ಲಾಕ್ ಡೌನ್‌ನಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತೆ ಮಾಡಿದೆ. ಐದು ತಿಂಗಳಿಂದ ಗೌರವಧನ ಸಿಕ್ಕಿಲ್ಲ. ಕೂಲಿಯೂ ಇಲ್ಲ, ಮನೆ ನಿರ್ವಹಣೆ ಮಾಡುವುದು ಕಷ್ಟವಾಗಿದೆ ಎಂದು ಬಿಸಿಯೂಟ ಮಹಿಳೆಯರು ನಾನುಗೌರಿ.ಕಾಂ ಜೊತೆ ನೋವು ತೋಡಿಕೊಂಡರು.

ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತ ಮಾತನಾಡಿ “ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೌರವಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಹಲವು ಮನವಿಗಳನ್ನು ನೀಡಿದ್ದೇವೆ. ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇವೆ. ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದೇವೆ. ಅವರೆಲ್ಲರೂ ಕೊಡುವ ಮಾತನಾಡುತ್ತಾರೆಯೇ ಹೊರತು ಕೊಟ್ಟಿಲ್ಲ. ಶಿಕ್ಷಣ ಸಚಿವರ ಜೊತೆ ಮಾತುಕತೆ ನಡೆಸಿದ್ದೇವೆ. ಕೊಡುವ ಭರವಸೆಗಳನ್ನು ನೀಡಿದರು. ಆದರೂ ಹಣ ಬಂದಿಲ್ಲ. ಹಾಗಾಗಿ ಆಗಸ್ಟ್ 11 ರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇವೆ. ನಿನ್ನೆ ಮತ್ತು ಇಂದು ರಜೆ ಇದ್ದರಿಂದ ಉಪವಾಸವನ್ನು ನಿಲ್ಲಿಸಿದ್ದೆವು. ಆಗಸ್ಟ್ 17ರಿಂದ ಮತ್ತೆ ಉಪವಾಸ ಕೂರುತ್ತೇವೆ ಎಂದು ಅವರು ಹೇಳಿದರು.

ಏಪ್ರಿಲ್ ತಿಂಗಳಿಂದಲೂ ಹಣ ಬಿಡುಗಡೆಯಾಗದೇ ಇರುವುದು ಬಡತನದಲ್ಲಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕಿಯರು ಕುಟುಂಬಗಳನ್ನು ಸಂಭಾಳಿಸುವುದು ಕಷ್ಟವಾಗಿದೆ. ಕೂಡಲೇ ಸರ್ಕಾರ ಗೌರವಧನ ಬಿಡುಗಡೆ ಮಾಡಬೇಕು. ಅವರ ಕುಟುಂಬಗಳನ್ನು ರಕ್ಷಣೆ ಮಾಡಬೇಕು ಎಂದು ಮಾಲಿನಿ ಮೆಸ್ತ ಆಗ್ರಹಿಸಿದರು.


ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...