Homeಕರ್ನಾಟಕಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ.

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ಕಾರ್ಯಕರ್ತೆಯರಿಗೆ ಐದು ತಿಂಗಳಾದರೂ ಗೌರವಧನ ಬಿಡುಗಡೆಯಾಗಿಲ್ಲ. ಹತ್ತು-ಹದಿನೈದು ವರ್ಷಗಳಿಂದ ದುಡಿಯುತ್ತಿರುವ ಕಾರ್ಯಕರ್ತೆಯರು ಇದೀಗ ಕೊರೊನಾ ಲಾಕ್‌ಡೌನ್‌ ನಡುವೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಯಾವುದೇ ಅಧಾಯದ ಮೂಲಗಳು ಇಲ್ಲದ ಅವರು ಇದೇ ವೃತ್ತಿಯನ್ನು ನಂಬಿ ಜೀವನ ದೂಡುತ್ತಿದ್ದು, ಗೌರವಧನ ಸಿಗದೆ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಬಂದಿದೆ.

ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ವೇಳೆ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಕೆಗೆ ಇವರನ್ನು ಗೌರವಧನದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಶಾಲೆಗಳು ಆರಂಭವಾಗುವ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ಬಿಸಿಯೂಟ ಕಾರ್ಯಕರ್ತೆಯರಿಗೆ ಸಂಜೆ 4 ಗಂಟೆಯವರೆಗೂ ಕೆಲಸವಿರುತ್ತದೆ.

ಯಾವುದೇ ಸರ್ಕಾರಿ ಶಾಲೆಗಳಲ್ಲಿ ಡಿ ಗ್ರೂಪ್ ನೌಕರರು ಇಲ್ಲ. ಹಾಗಾಗಿ ಬಿಸಿಯೂಟ ಮಾಡುವ ಮೊದಲು ಕೊಠಡಿಗಳು ಮತ್ತು ಆವರಣ ಸ್ವಚ್ಚಗೊಳಿಸುವ ಕೆಲಸವೂ ಬಿಸಿಯೂಟ ಕಾರ್ಯಕರ್ತೆಯರ ಮೇಲೆ ಬೀಳುತ್ತದೆ. ಕೈತೋಟಗಳನ್ನು ಆರೈಕೆ ಮಾಡುವ ಕೆಲಸವನ್ನು ನೋಡಿಕೊಳ್ಳಬೇಕಾಗುತ್ತದೆ. ಬಿಸಿಯೂಟ ಮಾಡಿ ಮಕ್ಕಳಿಗೆ ಊಟ ಬಡಿಸಿದ ಮೇಲೆ ಪಾತ್ರೆಗಳ ಶುಚಿಗೊಳಿಸುವುದು ನಂತರ ಶಾಲಾ ಕೈತೋಟದಲ್ಲಿ ಕೆಲಸ ಇರುತ್ತದೆ.

ದಿನದ ಸುಮಾರು ಆರು ಗಂಟೆಗಳನ್ನು ಶಾಲೆಯಲ್ಲೇ ಕಳೆಯಬೇಕಾಗುತ್ತದೆ. ಹಾಗಾಗಿ ಬಿಸಿಯೂಟದವರು ಬೇರೆ ಕೂಲಿ ಕೆಲಸಗಳಿಗೂ ಹೋಗಲು ಸಾಧ್ಯವಿಲ್ಲ. ಅಕ್ಷರದಾಸೋಹ ಯೋಜನೆಯಡಿ ಬರುವ ಮಾಸಿಕ 2600 ರೂ ಗೌರವಧನ ಹೊರತುಪಡಿಸಿ ಬೇರೆ ಹಣಕಾಸಿನ ಮೂಲಗಳು ಇಲ್ಲ. ಬರುವ ಕಡಿಮೆ ಗೌರವಧನದಲ್ಲಿ ಕುಟುಂಬವನ್ನು ನಿರ್ವಹಣೆ ಮಾಡಬೇಕಾಗಿದೆ.

ಕೊರೊನ ಸೋಂಕು ವ್ಯಾಪಕವಾಗಿ ಸಮುದಾಯದ ನಡುವೆ ಹರಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಶಾಲೆಗಳು ಆರಂಭವಾಗಿಲ್ಲ. ಕೋವಿಡ್-19 ಮತ್ತು ಲಾಕ್ ಡೌನ್‌ನಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತೆ ಮಾಡಿದೆ. ಐದು ತಿಂಗಳಿಂದ ಗೌರವಧನ ಸಿಕ್ಕಿಲ್ಲ. ಕೂಲಿಯೂ ಇಲ್ಲ, ಮನೆ ನಿರ್ವಹಣೆ ಮಾಡುವುದು ಕಷ್ಟವಾಗಿದೆ ಎಂದು ಬಿಸಿಯೂಟ ಮಹಿಳೆಯರು ನಾನುಗೌರಿ.ಕಾಂ ಜೊತೆ ನೋವು ತೋಡಿಕೊಂಡರು.

ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತ ಮಾತನಾಡಿ “ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೌರವಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಹಲವು ಮನವಿಗಳನ್ನು ನೀಡಿದ್ದೇವೆ. ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇವೆ. ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದೇವೆ. ಅವರೆಲ್ಲರೂ ಕೊಡುವ ಮಾತನಾಡುತ್ತಾರೆಯೇ ಹೊರತು ಕೊಟ್ಟಿಲ್ಲ. ಶಿಕ್ಷಣ ಸಚಿವರ ಜೊತೆ ಮಾತುಕತೆ ನಡೆಸಿದ್ದೇವೆ. ಕೊಡುವ ಭರವಸೆಗಳನ್ನು ನೀಡಿದರು. ಆದರೂ ಹಣ ಬಂದಿಲ್ಲ. ಹಾಗಾಗಿ ಆಗಸ್ಟ್ 11 ರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇವೆ. ನಿನ್ನೆ ಮತ್ತು ಇಂದು ರಜೆ ಇದ್ದರಿಂದ ಉಪವಾಸವನ್ನು ನಿಲ್ಲಿಸಿದ್ದೆವು. ಆಗಸ್ಟ್ 17ರಿಂದ ಮತ್ತೆ ಉಪವಾಸ ಕೂರುತ್ತೇವೆ ಎಂದು ಅವರು ಹೇಳಿದರು.

ಏಪ್ರಿಲ್ ತಿಂಗಳಿಂದಲೂ ಹಣ ಬಿಡುಗಡೆಯಾಗದೇ ಇರುವುದು ಬಡತನದಲ್ಲಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕಿಯರು ಕುಟುಂಬಗಳನ್ನು ಸಂಭಾಳಿಸುವುದು ಕಷ್ಟವಾಗಿದೆ. ಕೂಡಲೇ ಸರ್ಕಾರ ಗೌರವಧನ ಬಿಡುಗಡೆ ಮಾಡಬೇಕು. ಅವರ ಕುಟುಂಬಗಳನ್ನು ರಕ್ಷಣೆ ಮಾಡಬೇಕು ಎಂದು ಮಾಲಿನಿ ಮೆಸ್ತ ಆಗ್ರಹಿಸಿದರು.


ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...