Homeಚಳವಳಿದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ ಗ್ರಾಮದ ದಲಿತ ಮುಖಂಡರು ಮತ್ತು ಸಮಾಜ ಪರಿವರ್ತನೆ ಸಂಘಟನೆಯ ಮುಖಂಡರಾದ ಚೆಲುವರಾಜುರವರ ಪ್ರಶ್ನಿಸಿ ಪ್ರತಿಭಟಿಸಿದ ನಂತರವಷ್ಟೇ ಪೊಲೀಸರು ಗ್ರಾಮಕ್ಕೆ ಆಗಮಿಸಿದ್ದರಿಂದ ದಲಿತರಿಗೆ ಕ್ಷೌರ ಮಾಡಲಾಗಿದೆ.

ದಲಿತ ಮುಖಂಡರಾದ ಚೆಲುವರಾಜುರವರು ಕಣಿವೆಕೊಪ್ಪಲು ಗ್ರಾಮದಲ್ಲಿ ಆರಂಭವಾಗಿರುವ ಸ್ನೇಹಜೀವಿ ಮೆನ್ಸ್ ಬ್ಯೂಟಿ ಪಾರ್ಲರ್‌ನಲ್ಲಿ ಏಕೆ ದಲಿತರಿಗೆ ಕಟಿಂಗ್, ಸೇವಿಂಗ್ ಮಾಡುವುದಿಲ್ಲ, ನಿಮಗೆ ಸಮಸ್ಯೆಯೇನು? ಅವರು ದುಡ್ಡು ಕೊಡುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹಿಂದೆಯಿಂದಲೂ ಮಾಡಿಲ್ಲ. ಹಾಗಾಗಿ ಈಗಲೂ ಮಾಡುವುದಿಲ್ಲ ಎಂದು ಕ್ಷೌರದ ಅಂಗಡಿಯ ಮಾಲೀಕ ಕುಮಾರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಸಂವಿಧಾನದ ಅಡಿಯಲ್ಲಿ ಈ ದೇಶ ನಡೆಯುತ್ತಿದೆ ಮತ್ತು ಸಂವಿಧಾನವು ಎಲ್ಲಾ ರೀತಿಯ ಅಸ್ಪೃಶ್ಯತೆಯನ್ನು ನಿಷೇಧಿಸಿದೆ. ನಾವೆಲ್ಲರೂ ಸರ್ವ ಸಮಾನರಾಗಿದ್ದು ನೀವು ಸಾರ್ವಜನಿಕ ಸೇವೆ ನೀಡುವಾಗ ತಾರತಮ್ಯ ಮಾಡುವಂತಿಲ್ಲ ಎಂದು ಚೆಲುವರಾಜುರವರು ತಾಕೀತು ಮಾಡಿದ್ದಾರೆ.

ಇಂದು ಬೆಳಿಗ್ಗೆಯಿಂದ ಇಬ್ಬರು ದಲಿತರಿಗೆ ನೀವು ಕ್ಷೌರ ಮಾಡಲು ನಿರಾಕರಿಸಿದ್ದೀರಿ. ಇದು ಕಾನೂನಿನ ಪ್ರಕಾರ ಅಪರಾಧವಾಗಿದೆ ಎಂದು ಚೆಲುವರಾಜುರವರು ಹೇಳಿದಾಗ ಅಲ್ಲೆ ಕ್ಷೌರ ಮಾಡಿಸಿಕೊಳ್ಳುತ್ತಿದ್ದ ಸವರ್ಣಿಯ ಜಾತಿಗೆ ಸೇರಿದವನೊಬ್ಬ ಹಿಂದೆ ಮಾಡಿಲ್ಲ, ಹೀಗಲೂ ಮಾಡುವುದಿಲ್ಲ ಎಂದು ಜೋರು ಮಾಡಿದ್ದಾರೆ. ತದನಂತರ ಚೆಲುವರಾಜುರವರು ದಲಿತ ಯುವಕರ ಜೊತೆ ಸೇರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಅಂಗಡಿ ಮಾಲೀಕನಿಗೆ ಬುದ್ದಿ ಹೇಳಿ ಅಲ್ಲಿಯೇ ದಲಿತ ಯುವಕರಿಗೆ ಕಟಿಂಗ್ ಸೇವಿಂಗ್ ಮಾಡಿಸಿದ್ದಾರೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿದ ಚೆಲುವರಾಜುರವರು “ಇಷ್ಟು ದಿನಗಳಾದರೂ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ಜಾತಿಪದ್ದತಿ ಜಾರಿಯಲ್ಲಿರುವುದು ದುರಂತ. ಜನ ಎಷ್ಟೇ ವಿದ್ಯಾವಂತರಾದರೂ ಜನ ಸಂವಿಧಾನವನ್ನು ಅರ್ಥ ಮಾಡಿಕೊಂಡಿಲ್ಲ, ಅಸ್ಪೃಶ್ಯತೆ ಆಚರಣೆ ನಿಲ್ಲಿಸಿಲ್ಲ. ಈ ದೇಶದ ಶೇ.95 ರಷ್ಟು ಹಳ್ಳಿಗಳ ಪರಿಸ್ಥಿತಿ ಇದೇ ರೀತಿಯಲ್ಲಿದೆ. ಹಾಗಾಗಿ ನಾವು ಹೋರಾಟ ಮಾಡುವುದು ಅನಿವಾರ್ಯವಾಗಿದೆ” ಎಂದರು.

ನಮ್ಮ ಹೋರಾಟದ ನಂತರ ಕೊನೆಗೂ ಸಣ್ಣ ಜಯ ಸಿಕ್ಕಿದೆ. ನಮ್ಮೂರಿನ ದಲಿತರಿಗೆ ಕ್ಷೌರ ಮಾಡಲಾಗಿದೆ. ಹಂತ ಹಂತವಾಗಿ ಎಲ್ಲಾ ರೀತಿಯ ಅಸ್ಪೃಶ್ಯತೆ ನಿರ್ಮೂಲನೆಗೆ ಹೋರಾಡುತ್ತೇವೆ ಎಂದಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲೆರೆ ಎಂಬ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಿದ ಏಕೈಕ ಕಾರಣಕ್ಕೆ ಸವಿತಾ ಸಮಾಜದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜರುಗಿತ್ತು. ಇದಕ್ಕೆ ವ್ಯಾಪಕ ವಿರೋಧ ಕೇಳಿಬಂದ ನಂತರ ತಹಶೀಲ್ದಾರ್‌ರವರು ಗ್ರಾಮಕ್ಕೆ ತೆರಳಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಂಡಿದ್ದರು.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.


ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...