Homeಮುಖಪುಟಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

ಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

- Advertisement -
- Advertisement -

ಕೊರೊನಾ ಸೋಂಕಿತ ರೋಗಿಗಳಿಗೆ ಆಮ್ಲಜನಕ ನೀಡಲು ಸಾಧ್ಯವಾಗದೆ ದೇಶದ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಸಿಜನ್‌ಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ನಮ್ಮಲ್ಲಿ ಯಾವುದೇ ಕೊರೊನಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಯಾವುದೇ ಖಾಸಗಿ ಅಥವಾ ಸಾರ್ವಜನಿಕ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಲ್ಲ. ರಾಜ್ಯ ಸರ್ಕಾರವು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಆಕ್ಸಿಜನ್ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಕೊರೊನಾ ವೈರಸ್ ಸೋಂಕನ್ನು ಸಾಮಾನ್ಯ ವೈರಲ್ ಜ್ವರ ಎಂದು ತೆಗೆದುಕೊಳ್ಳುವುದು ದೊಡ್ಡ ತಪ್ಪು, ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

“ರಾಜ್ಯದಲ್ಲಿ ಯಾವುದೇ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಲ್ಲ, ಅದು ಖಾಸಗಿಯಾಗಿರಲಿ ಅಥವಾ ಸರ್ಕಾರವಾಗಿರಲಿ. ಸಮಸ್ಯೆ ಇರುವುದು ಬ್ಲ್ಯಾಕ್ ಮಾರ್ಕೆಟಿಂಗ್‌ನದ್ದು, ಇದನ್ನು ಸರ್ಕಾರ ಸರಿಯಾದ ಕ್ರಮದಲ್ಲಿ ನಿಭಾಯಿಸಲಿದೆ” ಎಂದಿದ್ದಾರೆ.

’ಐಐಟಿ ಕಾನ್ಪುರ್, ಐಐಎಂ ಲಕ್ನೋ ಮತ್ತು ಐಐಟಿ ಬಿಎಚ್‌ಯು ಸಹಯೋಗದೊಂದಿಗೆ ಆಮ್ಲಜನಕದ ಸರಿಯಾದ ಮೇಲ್ವಿಚಾರಣೆಗಾಗಿ ನಾವು ಆಮ್ಲಜನಕ ಲೆಕ್ಕಪರಿಶೋಧನೆಯನ್ನು ನಡೆಸಲಿದ್ದೇವೆ. ಆಮ್ಲಜನಕದ ಬೇಡಿಕೆ, ಪೂರೈಕೆ ಮತ್ತು ವಿತರಣೆಯ ನೇರ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ”ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಪ್ರತಿ ಕೊರೊನಾ ಸೋಂಕಿತ ರೋಗಿಗೆ ಆಮ್ಲಜನಕದ ಅಗತ್ಯವಿಲ್ಲ, ಈ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳಿಂದ ಸಹಕಾರವನ್ನು ನೀರಿಕ್ಷಿಸುತ್ತೇವೆ. ರಾಜ್ಯದಲ್ಲಿ ಆಸ್ಪತ್ರೆ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಕೆಲವು ಆರಂಭಿಕ ಸಮಸ್ಯೆಗಳಿವೆ. ಆದರೆ ಅವುಗಳನ್ನು ಶೀಘ್ರವಾಗಿ ನಿವಾರಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

“ಕೊರೊನಾವನ್ನು ಸಾಮಾನ್ಯ ವೈರಲ್ ಜ್ವರವಾಗಿ ತೆಗೆದುಕೊಳ್ಳುವುದು ದೊಡ್ಡ ತಪ್ಪು. ನಾನು ಕೂಡ ಅದರ ಸೋಂಕಿಗೆ ಒಳಗಾಗಿದ್ದೇನೆ. ಏಪ್ರಿಲ್ 13 ರಿಂದ ನಾನು ಕ್ವಾರಂಟೈನ್‌ನಲ್ಲಿದ್ದು ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸುತ್ತಿದ್ದೇನೆ. ಉತ್ತರ ಪ್ರದೇಶದ ಪರಿಸ್ಥಿತಿಯನ್ನು ಪರಿಶೀಲಿಸುವಾಗ, ಅದರ ಜನಸಂಖ್ಯೆ ಪ್ರಮಾಣ ಮತ್ತು ಜನಸಂಖ್ಯಾ ವೈವಿಧ್ಯತೆಯನ್ನು ಗಮನದಲ್ಲಿರಿಸಿಕೊಳ್ಳಬೇಕು” ಎಂದಿದ್ದಾರೆ.

ಕೊರೊನಾ ಎರಡನೇ ಅಲೆಯಲ್ಲಿ ಈ ಬಾರಿ ಸೋಂಕುಗಳ ಸಂಖ್ಯೆ ಕಳೆದ ಬಾರಿಗಿಂತ 30 ಪಟ್ಟು ಹೆಚ್ಚಾಗಿದೆ. ನಾವು ಸರ್ಕಾರಿ ಸಂಸ್ಥೆಗಳಲ್ಲಿ ಆಮ್ಲಜನಕ ಸ್ಥಾವರಗಳಿಗೆ ವ್ಯವಸ್ಥೆ ಮಾಡಿದ್ದೇವೆ. ಖಾಸಗಿ ಸಂಸ್ಥೆಗಳಲ್ಲಿ ಈ ವ್ಯವಸ್ಥೆಯ ಕೊರತೆ ಇತ್ತು. ಡಿಆರ್‌ಡಿಒನ ಇತ್ತೀಚಿನ ತಂತ್ರಜ್ಞಾನದ ಆಧಾರದ ಮೇಲೆ 18 ಸ್ಥಾವರಗಳು ಸೇರಿದಂತೆ 31 ಹೊಸ ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು, ಉತ್ತರಪ್ರದೇಶದಲ್ಲಿ ರೆಮ್‌ಡೆಸಿವಿರ್ ನಂತಹ ಔಷಧಿಗಳ ಕೊರತೆಯಿಲ್ಲ. ಎಲ್ಲರಿಗೂ ಉಚಿತ ವ್ಯಾಕ್ಸಿನೇಷನ್ ನೀಡಲಾಗುತ್ತದೆ. ಇದಕ್ಕಾಗಿ ಸುಮಾರು 8,000 ಕೇಂದ್ರಗಳನ್ನು ಸ್ಥಾಪಿಸಲಾಗಿದೆ, ಅಲ್ಲಿ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.


ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...