Homeಮುಖಪುಟಅಯೋಧ್ಯೆ: ಮಸೀದಿ ಧ್ವಂಸದ ಅಂಗವಾಗಿ ಶೌರ್ಯ ದಿನದ ಆಚರಣೆ ಇಲ್ಲ

ಅಯೋಧ್ಯೆ: ಮಸೀದಿ ಧ್ವಂಸದ ಅಂಗವಾಗಿ ಶೌರ್ಯ ದಿನದ ಆಚರಣೆ ಇಲ್ಲ

ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿರುವಾ‌ಗ, ಶೌರ್ಯ ದಿವಾಸ್ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ - ವಿಎಚ್‌ಪಿ

- Advertisement -
- Advertisement -

ಅಯೋಧ್ಯೆಯಲ್ಲಿ ಡಿಸೆಂಬರ್‌ 6ನ್ನು ಬಾಬ್ರಿ ಮಸೀದಿ ಧ್ವಂಸದ ದಿನದ ನೆನಪಿನಲ್ಲಿ ಪ್ರತಿವರ್ಷ ಕೆಲ ಹಿಂದೂ ಸಂಘಟನೆಗಳು ಆಚರಿಸುತ್ತಿದ್ದ ಶೌರ್ಯ ದಿನವನ್ನು ಈ ವರ್ಷ ಆಚರಿಸಿಲ್ಲ. ಇತ್ತೀಚೆಗೆ ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಮತ್ತು ಆ ಜಾಗದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ. 1992ರಲ್ಲಿ ಬಾಬ್ರಿ ಮಸೀದಿಯನ್ನು ಕರ ಸೇವಕರು ಧ್ವಂಸಗಳಿಸಿದ್ದರು.

ಹಿಂದೂಗಳ ಶೌರ್ಯ ದಿನ ಆಚರಣೆಗೆ ಪ್ರತಿಯಾಗಿ ಅಯೋಧ್ಯೆಯ ಮುಸ್ಲಿಮರು ಕಪ್ಪು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಮಸೀದಿ ಧ್ವಂಸ ದಿನ (ದುಃಖದ ದಿನ) ಎಂದು ಆಚರಿಸುತ್ತಿದ್ದರು. ಆದರೆ ಈ ಬಾರಿ ಆ ಆಚರಣೆ ಕೂಡ ನಡೆಸುತ್ತಿಲ್ಲ.

ಶ್ರೀ ರಾಮ್ ಜನ್ಮಭೂಮಿ ತೀರ್ತ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಮಹಂತ್ ನರ್ತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಮಹಂತ್ ಕಮಲ್ ನಯನ್ ದಾಸ್ ಭಾನುವಾರ “ಶೌರ್ಯ ದಿವಾಸ್” ಆಚರಿಸದಂತೆ ಹಿಂದೂಗಳಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರಕ್ಕಾಗಿ ಭೂಮಿ ಪೂಜೆಯು ನೆರವೇರಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿರ್ದೇಶನವನ್ನೇ ಮೀರಿದ ಸಿಬಿಐ ನ್ಯಾಯಾಲಯದ ಬಾಬ್ರಿ ತೀರ್ಪು

“ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿರುವಾ‌ಗ, ಶೌರ್ಯ ದಿವಾಸ್ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಈಗ, ರಾಮ್ ಮಂದಿರದ ಭೂಮಿ ಪೂಜೆ ಸಹ ನಡೆದಿದೆ ಮತ್ತು ರಾಮ್ ಮಂದಿರದ ಅಡಿಪಾಯದ ಕೆಲಸಗಳು ನಡೆಯುತ್ತಿವೆ ”ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಯ ಪ್ರಾದೇಶಿಕ ವಕ್ತಾರ ಶರದ್ ಶರ್ಮಾ ಹೇಳಿದ್ದಾರೆ.

“ಆದ್ದರಿಂದ, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಎಲ್ಲವನ್ನು ಮರೆತು ಮುಂದುವರಿಯಬೇಕು” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಮಸೀದಿ ಧ್ವಂಸ ದಿನವನ್ನು ಆಚರಿಸಲು ರಾಮ್ ಮಂದಿರ-ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ದಾವೆ ಹೂಡುವವರಲ್ಲಿ ಒಬ್ಬರಾದ ಹಾಜಿ ಮೆಹಬೂಬ್ ಅವರ ನಿವಾಸದಲ್ಲಿ ಒಂದು ದೊಡ್ಡ ಸಭೆ ಸೇರುತ್ತಿದ್ದರು. ಆದರೆ ಈ ಬಾರಿ ಯಾವುದೇ ಸಾಂಕೇತಿಕ ಪ್ರತಿಭಟನೆಗಳು ಕೂಡ ಅಯೋಧ್ಯೆಯಲ್ಲಿ ನಡೆದಿಲ್ಲ.

ಮತ್ತೊಂದೆಡೆ, ವಿಎಚ್‌ಪಿ ನೇತೃತ್ವದ ಸಂಸ್ಥೆಗಳು ಈ ದಿನವನ್ನು ಶೌರ್ಯ ದಿನ ಎಂದು ಆಚರಿಸುತ್ತಿದ್ದವು. ಆದರೆ, ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಿದ್ದ ರಾಮ್ ಮಂದಿರದ ಭೂಮಿ ಪೂಜೆ ನಂತರ ಅದು ನಿಂತಿದೆ.

ಇದನ್ನೂ ಓದಿ: ಕಾಶ್ಶೀರ ರಾಜ್ಯ ನೆಲಸಮ ಮಾಡಿದ ವಾರ್ಷಿಕ ದಿನವೇ ಬಾಬ್ರಿ ಮಸೀದಿ ನೆಲಸಮವಾದ ಸ್ಥಳದಲ್ಲಿ ಮಂದಿರ ಶಿಲಾನ್ಯಾಸ ಕಾಕತಾಳೀಯವೆ?

“ಈ ವರ್ಷ ದುಖಃದ ದಿನ ಇರುವುದಿಲ್ಲ. ಯಾವುದೇ ಕಪ್ಪು ಧ್ವಜಗಳನ್ನು ಹಾರಿಸಲಾಗುವುದಿಲ್ಲ ಮತ್ತು ಮುಸ್ಲಿಮರು ಡಿಸೆಂಬರ್ 6 ರಂದು ತಮ್ಮ ಅಂಗಡಿಗಳನ್ನು ತೆರೆಯುತ್ತಾರೆ ”ಎಂದು ಹಾಜಿ ಮೆಹಬೂಬ್ ಹೇಳಿದರು. “ಡಿಸೆಂಬರ್ 6, 1992 ರಂದು ಹಿಂಸಾಚಾರದಲ್ಲಿ ಬಲಿಯಾದವರಿಗೆ ಟೆಡಿ ಬಜಾರ್ ಮಸೀದಿಯಲ್ಲಿ ಕುರಾನ್ ಪಠಣ ಮಾತ್ರ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ನಾವು ಹಿಂದಿನದನ್ನು ಮರೆತು ಮುಂದೆ ಸಾಗಲು ನಿರ್ಧರಿಸಿದ್ದೇವೆ ಮತ್ತು ಉತ್ತಮ ಭವಿಷ್ಯಕ್ಕಾಗಿ ಭೂತಕಾಲವನ್ನು ಮರೆಯಲು ದೇಶದಾದ್ಯಂತದ ಮುಸ್ಲಿಂ ಸಮುದಾಯಕ್ಕೆ ಸಂದೇಶವನ್ನು ತಲುಪಿಸಲು ನಿರ್ಧರಿಸಿದ್ದೇವೆ” ಎಂದು ಮೆಹಬೂಬ್ ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ದಶಕಗಳ ಹಳೆಯ ರಾಮ್ ಮಂದಿರ-ಬಾಬರಿ ಮಸೀದಿ ಪ್ರಕರಣವನ್ನು ರಾಮ್ ಮಂದಿರದ ಪರವಾಗಿ ತೀರ್ಪು ನೀಡುವ ಮೂಲಕ ಕೊನೆಗೊಳಿಸಿತು.

ಮತ್ತೆ, ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿಯ ಧ್ವಂಸಕ್ಕೆ ಕಾರಣವಾದ ಕ್ರಿಮಿನಲ್ ಸಂಚು ಹೂಡಿದ ಆರೋಪ ಹೊತ್ತಿದ್ದ ಎಲ್ಲಾ 32 ಮಂದಿಯನ್ನು ಸಿಬಿಐ ವಿಶೇಷ ನ್ಯಾಯಾಲಯವು ಆರೋಪ ಮುಕ್ತಗೊಳಿಸಿತು.


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...