Homeಮುಖಪುಟಅಯೋಧ್ಯೆ: ಮಸೀದಿ ಧ್ವಂಸದ ಅಂಗವಾಗಿ ಶೌರ್ಯ ದಿನದ ಆಚರಣೆ ಇಲ್ಲ

ಅಯೋಧ್ಯೆ: ಮಸೀದಿ ಧ್ವಂಸದ ಅಂಗವಾಗಿ ಶೌರ್ಯ ದಿನದ ಆಚರಣೆ ಇಲ್ಲ

ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿರುವಾ‌ಗ, ಶೌರ್ಯ ದಿವಾಸ್ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ - ವಿಎಚ್‌ಪಿ

- Advertisement -
- Advertisement -

ಅಯೋಧ್ಯೆಯಲ್ಲಿ ಡಿಸೆಂಬರ್‌ 6ನ್ನು ಬಾಬ್ರಿ ಮಸೀದಿ ಧ್ವಂಸದ ದಿನದ ನೆನಪಿನಲ್ಲಿ ಪ್ರತಿವರ್ಷ ಕೆಲ ಹಿಂದೂ ಸಂಘಟನೆಗಳು ಆಚರಿಸುತ್ತಿದ್ದ ಶೌರ್ಯ ದಿನವನ್ನು ಈ ವರ್ಷ ಆಚರಿಸಿಲ್ಲ. ಇತ್ತೀಚೆಗೆ ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಮತ್ತು ಆ ಜಾಗದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ. 1992ರಲ್ಲಿ ಬಾಬ್ರಿ ಮಸೀದಿಯನ್ನು ಕರ ಸೇವಕರು ಧ್ವಂಸಗಳಿಸಿದ್ದರು.

ಹಿಂದೂಗಳ ಶೌರ್ಯ ದಿನ ಆಚರಣೆಗೆ ಪ್ರತಿಯಾಗಿ ಅಯೋಧ್ಯೆಯ ಮುಸ್ಲಿಮರು ಕಪ್ಪು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಮಸೀದಿ ಧ್ವಂಸ ದಿನ (ದುಃಖದ ದಿನ) ಎಂದು ಆಚರಿಸುತ್ತಿದ್ದರು. ಆದರೆ ಈ ಬಾರಿ ಆ ಆಚರಣೆ ಕೂಡ ನಡೆಸುತ್ತಿಲ್ಲ.

ಶ್ರೀ ರಾಮ್ ಜನ್ಮಭೂಮಿ ತೀರ್ತ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಮಹಂತ್ ನರ್ತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಮಹಂತ್ ಕಮಲ್ ನಯನ್ ದಾಸ್ ಭಾನುವಾರ “ಶೌರ್ಯ ದಿವಾಸ್” ಆಚರಿಸದಂತೆ ಹಿಂದೂಗಳಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರಕ್ಕಾಗಿ ಭೂಮಿ ಪೂಜೆಯು ನೆರವೇರಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿರ್ದೇಶನವನ್ನೇ ಮೀರಿದ ಸಿಬಿಐ ನ್ಯಾಯಾಲಯದ ಬಾಬ್ರಿ ತೀರ್ಪು

“ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿರುವಾ‌ಗ, ಶೌರ್ಯ ದಿವಾಸ್ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಈಗ, ರಾಮ್ ಮಂದಿರದ ಭೂಮಿ ಪೂಜೆ ಸಹ ನಡೆದಿದೆ ಮತ್ತು ರಾಮ್ ಮಂದಿರದ ಅಡಿಪಾಯದ ಕೆಲಸಗಳು ನಡೆಯುತ್ತಿವೆ ”ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಯ ಪ್ರಾದೇಶಿಕ ವಕ್ತಾರ ಶರದ್ ಶರ್ಮಾ ಹೇಳಿದ್ದಾರೆ.

“ಆದ್ದರಿಂದ, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಎಲ್ಲವನ್ನು ಮರೆತು ಮುಂದುವರಿಯಬೇಕು” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಮಸೀದಿ ಧ್ವಂಸ ದಿನವನ್ನು ಆಚರಿಸಲು ರಾಮ್ ಮಂದಿರ-ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ದಾವೆ ಹೂಡುವವರಲ್ಲಿ ಒಬ್ಬರಾದ ಹಾಜಿ ಮೆಹಬೂಬ್ ಅವರ ನಿವಾಸದಲ್ಲಿ ಒಂದು ದೊಡ್ಡ ಸಭೆ ಸೇರುತ್ತಿದ್ದರು. ಆದರೆ ಈ ಬಾರಿ ಯಾವುದೇ ಸಾಂಕೇತಿಕ ಪ್ರತಿಭಟನೆಗಳು ಕೂಡ ಅಯೋಧ್ಯೆಯಲ್ಲಿ ನಡೆದಿಲ್ಲ.

ಮತ್ತೊಂದೆಡೆ, ವಿಎಚ್‌ಪಿ ನೇತೃತ್ವದ ಸಂಸ್ಥೆಗಳು ಈ ದಿನವನ್ನು ಶೌರ್ಯ ದಿನ ಎಂದು ಆಚರಿಸುತ್ತಿದ್ದವು. ಆದರೆ, ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಿದ್ದ ರಾಮ್ ಮಂದಿರದ ಭೂಮಿ ಪೂಜೆ ನಂತರ ಅದು ನಿಂತಿದೆ.

ಇದನ್ನೂ ಓದಿ: ಕಾಶ್ಶೀರ ರಾಜ್ಯ ನೆಲಸಮ ಮಾಡಿದ ವಾರ್ಷಿಕ ದಿನವೇ ಬಾಬ್ರಿ ಮಸೀದಿ ನೆಲಸಮವಾದ ಸ್ಥಳದಲ್ಲಿ ಮಂದಿರ ಶಿಲಾನ್ಯಾಸ ಕಾಕತಾಳೀಯವೆ?

“ಈ ವರ್ಷ ದುಖಃದ ದಿನ ಇರುವುದಿಲ್ಲ. ಯಾವುದೇ ಕಪ್ಪು ಧ್ವಜಗಳನ್ನು ಹಾರಿಸಲಾಗುವುದಿಲ್ಲ ಮತ್ತು ಮುಸ್ಲಿಮರು ಡಿಸೆಂಬರ್ 6 ರಂದು ತಮ್ಮ ಅಂಗಡಿಗಳನ್ನು ತೆರೆಯುತ್ತಾರೆ ”ಎಂದು ಹಾಜಿ ಮೆಹಬೂಬ್ ಹೇಳಿದರು. “ಡಿಸೆಂಬರ್ 6, 1992 ರಂದು ಹಿಂಸಾಚಾರದಲ್ಲಿ ಬಲಿಯಾದವರಿಗೆ ಟೆಡಿ ಬಜಾರ್ ಮಸೀದಿಯಲ್ಲಿ ಕುರಾನ್ ಪಠಣ ಮಾತ್ರ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ನಾವು ಹಿಂದಿನದನ್ನು ಮರೆತು ಮುಂದೆ ಸಾಗಲು ನಿರ್ಧರಿಸಿದ್ದೇವೆ ಮತ್ತು ಉತ್ತಮ ಭವಿಷ್ಯಕ್ಕಾಗಿ ಭೂತಕಾಲವನ್ನು ಮರೆಯಲು ದೇಶದಾದ್ಯಂತದ ಮುಸ್ಲಿಂ ಸಮುದಾಯಕ್ಕೆ ಸಂದೇಶವನ್ನು ತಲುಪಿಸಲು ನಿರ್ಧರಿಸಿದ್ದೇವೆ” ಎಂದು ಮೆಹಬೂಬ್ ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ದಶಕಗಳ ಹಳೆಯ ರಾಮ್ ಮಂದಿರ-ಬಾಬರಿ ಮಸೀದಿ ಪ್ರಕರಣವನ್ನು ರಾಮ್ ಮಂದಿರದ ಪರವಾಗಿ ತೀರ್ಪು ನೀಡುವ ಮೂಲಕ ಕೊನೆಗೊಳಿಸಿತು.

ಮತ್ತೆ, ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿಯ ಧ್ವಂಸಕ್ಕೆ ಕಾರಣವಾದ ಕ್ರಿಮಿನಲ್ ಸಂಚು ಹೂಡಿದ ಆರೋಪ ಹೊತ್ತಿದ್ದ ಎಲ್ಲಾ 32 ಮಂದಿಯನ್ನು ಸಿಬಿಐ ವಿಶೇಷ ನ್ಯಾಯಾಲಯವು ಆರೋಪ ಮುಕ್ತಗೊಳಿಸಿತು.


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...