Homeಮುಖಪುಟಅಯೋಧ್ಯೆ: ಮಸೀದಿ ಧ್ವಂಸದ ಅಂಗವಾಗಿ ಶೌರ್ಯ ದಿನದ ಆಚರಣೆ ಇಲ್ಲ

ಅಯೋಧ್ಯೆ: ಮಸೀದಿ ಧ್ವಂಸದ ಅಂಗವಾಗಿ ಶೌರ್ಯ ದಿನದ ಆಚರಣೆ ಇಲ್ಲ

ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿರುವಾ‌ಗ, ಶೌರ್ಯ ದಿವಾಸ್ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ - ವಿಎಚ್‌ಪಿ

- Advertisement -
- Advertisement -

ಅಯೋಧ್ಯೆಯಲ್ಲಿ ಡಿಸೆಂಬರ್‌ 6ನ್ನು ಬಾಬ್ರಿ ಮಸೀದಿ ಧ್ವಂಸದ ದಿನದ ನೆನಪಿನಲ್ಲಿ ಪ್ರತಿವರ್ಷ ಕೆಲ ಹಿಂದೂ ಸಂಘಟನೆಗಳು ಆಚರಿಸುತ್ತಿದ್ದ ಶೌರ್ಯ ದಿನವನ್ನು ಈ ವರ್ಷ ಆಚರಿಸಿಲ್ಲ. ಇತ್ತೀಚೆಗೆ ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಮತ್ತು ಆ ಜಾಗದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ. 1992ರಲ್ಲಿ ಬಾಬ್ರಿ ಮಸೀದಿಯನ್ನು ಕರ ಸೇವಕರು ಧ್ವಂಸಗಳಿಸಿದ್ದರು.

ಹಿಂದೂಗಳ ಶೌರ್ಯ ದಿನ ಆಚರಣೆಗೆ ಪ್ರತಿಯಾಗಿ ಅಯೋಧ್ಯೆಯ ಮುಸ್ಲಿಮರು ಕಪ್ಪು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಮಸೀದಿ ಧ್ವಂಸ ದಿನ (ದುಃಖದ ದಿನ) ಎಂದು ಆಚರಿಸುತ್ತಿದ್ದರು. ಆದರೆ ಈ ಬಾರಿ ಆ ಆಚರಣೆ ಕೂಡ ನಡೆಸುತ್ತಿಲ್ಲ.

ಶ್ರೀ ರಾಮ್ ಜನ್ಮಭೂಮಿ ತೀರ್ತ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಮಹಂತ್ ನರ್ತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಮಹಂತ್ ಕಮಲ್ ನಯನ್ ದಾಸ್ ಭಾನುವಾರ “ಶೌರ್ಯ ದಿವಾಸ್” ಆಚರಿಸದಂತೆ ಹಿಂದೂಗಳಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರಕ್ಕಾಗಿ ಭೂಮಿ ಪೂಜೆಯು ನೆರವೇರಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿರ್ದೇಶನವನ್ನೇ ಮೀರಿದ ಸಿಬಿಐ ನ್ಯಾಯಾಲಯದ ಬಾಬ್ರಿ ತೀರ್ಪು

“ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿರುವಾ‌ಗ, ಶೌರ್ಯ ದಿವಾಸ್ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಈಗ, ರಾಮ್ ಮಂದಿರದ ಭೂಮಿ ಪೂಜೆ ಸಹ ನಡೆದಿದೆ ಮತ್ತು ರಾಮ್ ಮಂದಿರದ ಅಡಿಪಾಯದ ಕೆಲಸಗಳು ನಡೆಯುತ್ತಿವೆ ”ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಯ ಪ್ರಾದೇಶಿಕ ವಕ್ತಾರ ಶರದ್ ಶರ್ಮಾ ಹೇಳಿದ್ದಾರೆ.

“ಆದ್ದರಿಂದ, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಎಲ್ಲವನ್ನು ಮರೆತು ಮುಂದುವರಿಯಬೇಕು” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಮಸೀದಿ ಧ್ವಂಸ ದಿನವನ್ನು ಆಚರಿಸಲು ರಾಮ್ ಮಂದಿರ-ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ದಾವೆ ಹೂಡುವವರಲ್ಲಿ ಒಬ್ಬರಾದ ಹಾಜಿ ಮೆಹಬೂಬ್ ಅವರ ನಿವಾಸದಲ್ಲಿ ಒಂದು ದೊಡ್ಡ ಸಭೆ ಸೇರುತ್ತಿದ್ದರು. ಆದರೆ ಈ ಬಾರಿ ಯಾವುದೇ ಸಾಂಕೇತಿಕ ಪ್ರತಿಭಟನೆಗಳು ಕೂಡ ಅಯೋಧ್ಯೆಯಲ್ಲಿ ನಡೆದಿಲ್ಲ.

ಮತ್ತೊಂದೆಡೆ, ವಿಎಚ್‌ಪಿ ನೇತೃತ್ವದ ಸಂಸ್ಥೆಗಳು ಈ ದಿನವನ್ನು ಶೌರ್ಯ ದಿನ ಎಂದು ಆಚರಿಸುತ್ತಿದ್ದವು. ಆದರೆ, ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಿದ್ದ ರಾಮ್ ಮಂದಿರದ ಭೂಮಿ ಪೂಜೆ ನಂತರ ಅದು ನಿಂತಿದೆ.

ಇದನ್ನೂ ಓದಿ: ಕಾಶ್ಶೀರ ರಾಜ್ಯ ನೆಲಸಮ ಮಾಡಿದ ವಾರ್ಷಿಕ ದಿನವೇ ಬಾಬ್ರಿ ಮಸೀದಿ ನೆಲಸಮವಾದ ಸ್ಥಳದಲ್ಲಿ ಮಂದಿರ ಶಿಲಾನ್ಯಾಸ ಕಾಕತಾಳೀಯವೆ?

“ಈ ವರ್ಷ ದುಖಃದ ದಿನ ಇರುವುದಿಲ್ಲ. ಯಾವುದೇ ಕಪ್ಪು ಧ್ವಜಗಳನ್ನು ಹಾರಿಸಲಾಗುವುದಿಲ್ಲ ಮತ್ತು ಮುಸ್ಲಿಮರು ಡಿಸೆಂಬರ್ 6 ರಂದು ತಮ್ಮ ಅಂಗಡಿಗಳನ್ನು ತೆರೆಯುತ್ತಾರೆ ”ಎಂದು ಹಾಜಿ ಮೆಹಬೂಬ್ ಹೇಳಿದರು. “ಡಿಸೆಂಬರ್ 6, 1992 ರಂದು ಹಿಂಸಾಚಾರದಲ್ಲಿ ಬಲಿಯಾದವರಿಗೆ ಟೆಡಿ ಬಜಾರ್ ಮಸೀದಿಯಲ್ಲಿ ಕುರಾನ್ ಪಠಣ ಮಾತ್ರ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ನಾವು ಹಿಂದಿನದನ್ನು ಮರೆತು ಮುಂದೆ ಸಾಗಲು ನಿರ್ಧರಿಸಿದ್ದೇವೆ ಮತ್ತು ಉತ್ತಮ ಭವಿಷ್ಯಕ್ಕಾಗಿ ಭೂತಕಾಲವನ್ನು ಮರೆಯಲು ದೇಶದಾದ್ಯಂತದ ಮುಸ್ಲಿಂ ಸಮುದಾಯಕ್ಕೆ ಸಂದೇಶವನ್ನು ತಲುಪಿಸಲು ನಿರ್ಧರಿಸಿದ್ದೇವೆ” ಎಂದು ಮೆಹಬೂಬ್ ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ದಶಕಗಳ ಹಳೆಯ ರಾಮ್ ಮಂದಿರ-ಬಾಬರಿ ಮಸೀದಿ ಪ್ರಕರಣವನ್ನು ರಾಮ್ ಮಂದಿರದ ಪರವಾಗಿ ತೀರ್ಪು ನೀಡುವ ಮೂಲಕ ಕೊನೆಗೊಳಿಸಿತು.

ಮತ್ತೆ, ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿಯ ಧ್ವಂಸಕ್ಕೆ ಕಾರಣವಾದ ಕ್ರಿಮಿನಲ್ ಸಂಚು ಹೂಡಿದ ಆರೋಪ ಹೊತ್ತಿದ್ದ ಎಲ್ಲಾ 32 ಮಂದಿಯನ್ನು ಸಿಬಿಐ ವಿಶೇಷ ನ್ಯಾಯಾಲಯವು ಆರೋಪ ಮುಕ್ತಗೊಳಿಸಿತು.


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...