Homeಚಳವಳಿಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಅಂಗೀಕರಿಸಿರುವ ರಾಜ್ಯ ಸರ್ಕಾದ ವಿರುದ್ಧ ಇಂದು ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸಿದ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ ರಾಜ್ಯಪಾಲ ವಾಜುಬಾಯಿ ವಾಲಾರವರು ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ ಮತ್ತು ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಐಕ್ಯ ಹೋರಾಟ ಸಮಿತಿ ತಿಳಿಸಿದೆ.

ಮಂಗಳವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಭೂಸುಧಾರಣಾ ತಿದ್ದಪಡಿ ಮಸೂದೆ 2020 ಅನ್ನು ಮಂಡಿಸಿತು. ಅದಕ್ಕೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 37 ಮತಗಳೊಂದಿಗೆ ಅಂಗೀಕಾರಗೊಂಡಿತ್ತು. ಇದರಿಂದ ಕ್ರೋಧಗೊಂಡ ಐಕ್ಯ ಹೋರಾಟ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿತ್ತು. ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಇಂದು ರಾಜಭವನ ಚಲೋ ನಡೆದಾಗ 20 ರೈತ ಮುಖಂಡರನ್ನು ರಾಜ್ಯಪಾಲರು ಮಾತುಕತೆಗೆ ಆಹ್ವಾನಿಸಿದ್ದರು.

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ರೈತ ಮುಖಂಡ ಕುರುಬುರು ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಐಕ್ಯಹೋರಾಟ ಸಮಿತಿಯ ಪರವಾಗಿ ಗುರುಪ್ರಸಾದ್ ಕೆರಗೋಡು ಮಾತನಾಡಿ “ಇಲ್ಲಿಗೆ ನಾವು ಗೆದ್ದಿದ್ದೇವೆ ಎಂದು ಸಂಭ್ರಮಿಸುವುದಿಲ್ಲ. ರಾಜ್ಯಪಾಲರು ಭರವಸೆ ನೀಡಿದರೂ ಸಹ ಮಸೂದೆ ವಾಪಸ್ ಹೋಗುವವರೆಗೂ ನಾವು ಹಿಂದೆ ಸರಿಯಬಾರದು. ಸೂಕ್ತ ರೀತಿಯಲ್ಲಿ ಹೋರಾಟವನ್ನು ಜಾರಿಯಲ್ಲಿಡಬೇಕು” ಎಂದು ತಿಳಿಸಿದ್ದಾರೆ.

ಹೋರಾಟವನ್ನು ಜಾರಿಯಲ್ಲಿಡಲು ಮತ್ತು ದೆಹಲಿಯಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ಸೂಚಿಸುವುದಾಗಿ ರೈತರು ಹಸಿರು ಪ್ರತಿಜ್ಞೆ ಕೈಗೊಂಡರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲೀಪಾಟೀಲ್, ಬಿ.ಆರ್ ಪಾಟೀಲ್, ಕುರುಬುರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ವಿ.ಗಾಯತ್ರಿ, ಮಾವಳ್ಳಿ ಶಂಕರ್, ಹಣ್ಣು ಮಾರಾಟಗಾರರ ಸಂಘದ ಸೈಯ್ಯದ್, ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಕೆ.ವಿ ಭಟ್, ನಂಜೇಗೌಡ, ನಾರಾಯಣಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದಾರೆ.

ಇಂದು ಸಾವಿರಾರು ಜನ ಬೆಳಿಗ್ಗೆಯಿಂದಲೇ ರಸ್ತೆಯಲ್ಲಿಯೇ ಕುಳಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸದನ ಬಹಿಷ್ಕರಿಸಿ ಕಾಂಗ್ರೆಸ್ ಮುಖಂಡರೊಡನೆ ವಿಧಾನಸೌಧದಿಂದ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ ನಡೆಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಇದನ್ನೂ ಓದಿ: ರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...