Homeಚಳವಳಿಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಅಂಗೀಕರಿಸಿರುವ ರಾಜ್ಯ ಸರ್ಕಾದ ವಿರುದ್ಧ ಇಂದು ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸಿದ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ ರಾಜ್ಯಪಾಲ ವಾಜುಬಾಯಿ ವಾಲಾರವರು ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ ಮತ್ತು ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಐಕ್ಯ ಹೋರಾಟ ಸಮಿತಿ ತಿಳಿಸಿದೆ.

ಮಂಗಳವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಭೂಸುಧಾರಣಾ ತಿದ್ದಪಡಿ ಮಸೂದೆ 2020 ಅನ್ನು ಮಂಡಿಸಿತು. ಅದಕ್ಕೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 37 ಮತಗಳೊಂದಿಗೆ ಅಂಗೀಕಾರಗೊಂಡಿತ್ತು. ಇದರಿಂದ ಕ್ರೋಧಗೊಂಡ ಐಕ್ಯ ಹೋರಾಟ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿತ್ತು. ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಇಂದು ರಾಜಭವನ ಚಲೋ ನಡೆದಾಗ 20 ರೈತ ಮುಖಂಡರನ್ನು ರಾಜ್ಯಪಾಲರು ಮಾತುಕತೆಗೆ ಆಹ್ವಾನಿಸಿದ್ದರು.

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ರೈತ ಮುಖಂಡ ಕುರುಬುರು ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಐಕ್ಯಹೋರಾಟ ಸಮಿತಿಯ ಪರವಾಗಿ ಗುರುಪ್ರಸಾದ್ ಕೆರಗೋಡು ಮಾತನಾಡಿ “ಇಲ್ಲಿಗೆ ನಾವು ಗೆದ್ದಿದ್ದೇವೆ ಎಂದು ಸಂಭ್ರಮಿಸುವುದಿಲ್ಲ. ರಾಜ್ಯಪಾಲರು ಭರವಸೆ ನೀಡಿದರೂ ಸಹ ಮಸೂದೆ ವಾಪಸ್ ಹೋಗುವವರೆಗೂ ನಾವು ಹಿಂದೆ ಸರಿಯಬಾರದು. ಸೂಕ್ತ ರೀತಿಯಲ್ಲಿ ಹೋರಾಟವನ್ನು ಜಾರಿಯಲ್ಲಿಡಬೇಕು” ಎಂದು ತಿಳಿಸಿದ್ದಾರೆ.

ಹೋರಾಟವನ್ನು ಜಾರಿಯಲ್ಲಿಡಲು ಮತ್ತು ದೆಹಲಿಯಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ಸೂಚಿಸುವುದಾಗಿ ರೈತರು ಹಸಿರು ಪ್ರತಿಜ್ಞೆ ಕೈಗೊಂಡರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲೀಪಾಟೀಲ್, ಬಿ.ಆರ್ ಪಾಟೀಲ್, ಕುರುಬುರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ವಿ.ಗಾಯತ್ರಿ, ಮಾವಳ್ಳಿ ಶಂಕರ್, ಹಣ್ಣು ಮಾರಾಟಗಾರರ ಸಂಘದ ಸೈಯ್ಯದ್, ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಕೆ.ವಿ ಭಟ್, ನಂಜೇಗೌಡ, ನಾರಾಯಣಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದಾರೆ.

ಇಂದು ಸಾವಿರಾರು ಜನ ಬೆಳಿಗ್ಗೆಯಿಂದಲೇ ರಸ್ತೆಯಲ್ಲಿಯೇ ಕುಳಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸದನ ಬಹಿಷ್ಕರಿಸಿ ಕಾಂಗ್ರೆಸ್ ಮುಖಂಡರೊಡನೆ ವಿಧಾನಸೌಧದಿಂದ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ ನಡೆಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಇದನ್ನೂ ಓದಿ: ರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...