Homeಚಳವಳಿಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಅಂಗೀಕರಿಸಿರುವ ರಾಜ್ಯ ಸರ್ಕಾದ ವಿರುದ್ಧ ಇಂದು ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸಿದ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ ರಾಜ್ಯಪಾಲ ವಾಜುಬಾಯಿ ವಾಲಾರವರು ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ ಮತ್ತು ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಐಕ್ಯ ಹೋರಾಟ ಸಮಿತಿ ತಿಳಿಸಿದೆ.

ಮಂಗಳವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಭೂಸುಧಾರಣಾ ತಿದ್ದಪಡಿ ಮಸೂದೆ 2020 ಅನ್ನು ಮಂಡಿಸಿತು. ಅದಕ್ಕೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 37 ಮತಗಳೊಂದಿಗೆ ಅಂಗೀಕಾರಗೊಂಡಿತ್ತು. ಇದರಿಂದ ಕ್ರೋಧಗೊಂಡ ಐಕ್ಯ ಹೋರಾಟ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿತ್ತು. ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಇಂದು ರಾಜಭವನ ಚಲೋ ನಡೆದಾಗ 20 ರೈತ ಮುಖಂಡರನ್ನು ರಾಜ್ಯಪಾಲರು ಮಾತುಕತೆಗೆ ಆಹ್ವಾನಿಸಿದ್ದರು.

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ರೈತ ಮುಖಂಡ ಕುರುಬುರು ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಐಕ್ಯಹೋರಾಟ ಸಮಿತಿಯ ಪರವಾಗಿ ಗುರುಪ್ರಸಾದ್ ಕೆರಗೋಡು ಮಾತನಾಡಿ “ಇಲ್ಲಿಗೆ ನಾವು ಗೆದ್ದಿದ್ದೇವೆ ಎಂದು ಸಂಭ್ರಮಿಸುವುದಿಲ್ಲ. ರಾಜ್ಯಪಾಲರು ಭರವಸೆ ನೀಡಿದರೂ ಸಹ ಮಸೂದೆ ವಾಪಸ್ ಹೋಗುವವರೆಗೂ ನಾವು ಹಿಂದೆ ಸರಿಯಬಾರದು. ಸೂಕ್ತ ರೀತಿಯಲ್ಲಿ ಹೋರಾಟವನ್ನು ಜಾರಿಯಲ್ಲಿಡಬೇಕು” ಎಂದು ತಿಳಿಸಿದ್ದಾರೆ.

ಹೋರಾಟವನ್ನು ಜಾರಿಯಲ್ಲಿಡಲು ಮತ್ತು ದೆಹಲಿಯಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ಸೂಚಿಸುವುದಾಗಿ ರೈತರು ಹಸಿರು ಪ್ರತಿಜ್ಞೆ ಕೈಗೊಂಡರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲೀಪಾಟೀಲ್, ಬಿ.ಆರ್ ಪಾಟೀಲ್, ಕುರುಬುರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ವಿ.ಗಾಯತ್ರಿ, ಮಾವಳ್ಳಿ ಶಂಕರ್, ಹಣ್ಣು ಮಾರಾಟಗಾರರ ಸಂಘದ ಸೈಯ್ಯದ್, ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಕೆ.ವಿ ಭಟ್, ನಂಜೇಗೌಡ, ನಾರಾಯಣಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದಾರೆ.

ಇಂದು ಸಾವಿರಾರು ಜನ ಬೆಳಿಗ್ಗೆಯಿಂದಲೇ ರಸ್ತೆಯಲ್ಲಿಯೇ ಕುಳಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸದನ ಬಹಿಷ್ಕರಿಸಿ ಕಾಂಗ್ರೆಸ್ ಮುಖಂಡರೊಡನೆ ವಿಧಾನಸೌಧದಿಂದ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ ನಡೆಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಇದನ್ನೂ ಓದಿ: ರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...