Homeಮುಖಪುಟರಾಮಸೇತು ಇದೆ ಎಂಬುದಕ್ಕೆ ದೃಢವಾದ ಪುರಾವೆಗಳಿಲ್ಲ: ಸಂಸತ್ತಿನಲ್ಲಿ ಮೋದಿ ಸರ್ಕಾರದ ಹೇಳಿಕೆ

ರಾಮಸೇತು ಇದೆ ಎಂಬುದಕ್ಕೆ ದೃಢವಾದ ಪುರಾವೆಗಳಿಲ್ಲ: ಸಂಸತ್ತಿನಲ್ಲಿ ಮೋದಿ ಸರ್ಕಾರದ ಹೇಳಿಕೆ

ಉಪಗ್ರಹ ಚಿತ್ರಗಳಲ್ಲಿ ದ್ವೀಪ-ಸುಣ್ಣದಕಲ್ಲುಗಳ ರಾಶಿ ಇರುವುದು ಕಂಡುಬರುತ್ತದೆ, ಆದರೆ ಅದು ಸೇತುವೆಯ ಅವಶೇಷಗಳು ಎಂದು ಹೇಳಲು ಸಾಧ್ಯವಿಲ್ಲ

- Advertisement -
- Advertisement -

ಭಾರತ ಮತ್ತು ಶ್ರೀಲಂಕಾ ನಡುವೆ ರಾಮಸೇತು ಇರುವುದರ ಕುರಿತು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಮೋದಿ ಸರ್ಕಾರ ಸಂಸತ್ತಿನಲ್ಲಿ ಹೇಳಿದೆ. ಉಪಗ್ರಹ ಚಿತ್ರಗಳಲ್ಲಿ ದ್ವೀಪ-ಸುಣ್ಣದಕಲ್ಲುಗಳ ರಾಶಿ ಇರುವುದು ಕಂಡುಬರುತ್ತದೆ. ಆದರೆ ಇದು ಸೇತುವೆಯ ಅವಶೇಷಗಳು ಎಂದು ಹೇಳಲು ಸಾಧ್ಯವಿಲ್ಲ ಎಂದು ಬಾಹ್ಯಾಕಾಶ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಗೆ ತಿಳಿಸಿದ್ದಾರೆ.

ಗುರುವಾರ ರಾಮಸೇತು ಕುರಿತು ಬಿಜೆಪಿ ಸಂಸದ ಕಾರ್ತಿಕೇಯ ಶರ್ಮಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ತಂತ್ರಜ್ಞಾನದ ಮೂಲಕ, ಉಪಗ್ರಹ ಚಿತ್ರಗಳ ಮೂಲಕ ಹಲವು ತುಂಡುಗಳು, ದ್ವೀಪ ಮತ್ತು ಒಂದು ರೀತಿಯ ಸುಣ್ಣದ ರಾಶಿಯನ್ನು ನಾವು ಸ್ವಲ್ಪ ಮಟ್ಟಿಗೆ ಗುರುತಿಸಲು ಸಾಧ್ಯವಾಯಿತು. ಇದು ಸೇತುವೆಯ ಭಾಗವೇ ಅಥವಾ ಅದರ ಅವಶೇಷಗಳು ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ಉತ್ತರಿಸಿದ್ದಾರೆ.

18 ಸಾವಿರ ವರ್ಷಗಳ ಇತಿಹಾಸದ ರಾಮ ಸೇತುವಿನ ಹುಡುಕಾಟದಲ್ಲಿ ಹಲವಾರು ಮಿತಿಗಳಿವೆ. ಉಪಗ್ರಹ ಚಿತ್ರಗಳನ್ನು ತೆಗೆಯಲಾಗಿದೆ. ಆಳವಿಲ್ಲದ ನೀರಿನಲ್ಲಿ ದ್ವೀಪ ಮತ್ತು ಸುಣ್ಣದ ಕಲ್ಲುಗಳು ಗೋಚರಿಸುತ್ತವೆ, ಆದರೆ ಇವು ರಾಮಸೇತುವಿನ ಅವಶೇಷಗಳು ಎಂದು ಹೇಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯುಪಿಎ ಸರಕಾರ ಈ ಹಿಂದೆ ಪರಿಸರವಾದಿ ಆರ್.ಕೆ. ಪಚೌರಿ ನೇತೃತ್ವದಲ್ಲಿ ಸೇತುಸಮುದ್ರಂ ಯೋಜನೆಗೆ ಪರ್ಯಾಯ ಜೋಡಣೆಯನ್ನು ಪರಿಶೀಲಿಸಲು ಸಮಿತಿಯೊಂದನ್ನು ನೇಮಿಸಿತ್ತು. ದ್ವೀಪಗಳ ಸರಪಳಿಯ ಮೂಲಕ ನ್ಯಾವಿಗೇಷನಲ್ ಮಾರ್ಗ ರಚಿಸಲು 83 ಕಿಮೀ ಜಾಗದಲ್ಲಿ ಅಗೆಯಲು ಮುಂದಾಗಿತ್ತು. ಆದರೆ ಬಿಜೆಪಿಯು ಹಿಂದಿನಿಂದಲೂ ಅಲ್ಲಿ ಶ್ರೀರಾಮ ನಿರ್ಮಿಸಿದ್ದ ರಾಮ ಸೇತುವೆ ಇದೆ. ಅದು 48 ಕಿ.ಮೀ ಉದ್ದವಾಗಿದೆ ಎಂದು ಪ್ರತಿಪಾದಿಸಿತ್ತು. ಅದನ್ನೆ ಮುಂದು ಮಾಡಿ ಯೋಜನೆಗೆ ವಿರೋಧ ವ್ಯಕ್ತಪಡಿಸಿತ್ತು.

ಸದ್ಯ ಬಿಜೆಪಿ ಸರ್ಕಾರವೇ ಅದು ಸೇತುವೆಯಲ್ಲ ಎಂದು ಒಪ್ಪಿಕೊಂಡ ನಂತರ ಕಾಂಗ್ರೆಸ್ ವಕ್ತಾರ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ. “ಎಲ್ಲಾ ಭಕ್ತರೇ, ತೆರೆದ ಕಿವಿಯಿಂದ ಆಲಿಸಿ ಮತ್ತು ತೆರೆದ ಕಣ್ಣುಗಳಿಂದ ನೋಡಿ.
ರಾಮಸೇತು ಇದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಮೋದಿ ಸರ್ಕಾರ ಸಂಸತ್ತಿನಲ್ಲಿ ಹೇಳುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ; 2026ರ ಫಿಫಾ ವಿಶ್ವಕಪ್‌ಗೆ 48 ತಂಡಗಳು: ಭಾರತ ಫುಟ್ಬಾಲ್ ತಂಡ ಅರ್ಹತೆ ಪಡೆಯುವುದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...