Homeಮುಖಪುಟರಾಮಸೇತು ಇದೆ ಎಂಬುದಕ್ಕೆ ದೃಢವಾದ ಪುರಾವೆಗಳಿಲ್ಲ: ಸಂಸತ್ತಿನಲ್ಲಿ ಮೋದಿ ಸರ್ಕಾರದ ಹೇಳಿಕೆ

ರಾಮಸೇತು ಇದೆ ಎಂಬುದಕ್ಕೆ ದೃಢವಾದ ಪುರಾವೆಗಳಿಲ್ಲ: ಸಂಸತ್ತಿನಲ್ಲಿ ಮೋದಿ ಸರ್ಕಾರದ ಹೇಳಿಕೆ

ಉಪಗ್ರಹ ಚಿತ್ರಗಳಲ್ಲಿ ದ್ವೀಪ-ಸುಣ್ಣದಕಲ್ಲುಗಳ ರಾಶಿ ಇರುವುದು ಕಂಡುಬರುತ್ತದೆ, ಆದರೆ ಅದು ಸೇತುವೆಯ ಅವಶೇಷಗಳು ಎಂದು ಹೇಳಲು ಸಾಧ್ಯವಿಲ್ಲ

- Advertisement -
- Advertisement -

ಭಾರತ ಮತ್ತು ಶ್ರೀಲಂಕಾ ನಡುವೆ ರಾಮಸೇತು ಇರುವುದರ ಕುರಿತು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಮೋದಿ ಸರ್ಕಾರ ಸಂಸತ್ತಿನಲ್ಲಿ ಹೇಳಿದೆ. ಉಪಗ್ರಹ ಚಿತ್ರಗಳಲ್ಲಿ ದ್ವೀಪ-ಸುಣ್ಣದಕಲ್ಲುಗಳ ರಾಶಿ ಇರುವುದು ಕಂಡುಬರುತ್ತದೆ. ಆದರೆ ಇದು ಸೇತುವೆಯ ಅವಶೇಷಗಳು ಎಂದು ಹೇಳಲು ಸಾಧ್ಯವಿಲ್ಲ ಎಂದು ಬಾಹ್ಯಾಕಾಶ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಗೆ ತಿಳಿಸಿದ್ದಾರೆ.

ಗುರುವಾರ ರಾಮಸೇತು ಕುರಿತು ಬಿಜೆಪಿ ಸಂಸದ ಕಾರ್ತಿಕೇಯ ಶರ್ಮಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ತಂತ್ರಜ್ಞಾನದ ಮೂಲಕ, ಉಪಗ್ರಹ ಚಿತ್ರಗಳ ಮೂಲಕ ಹಲವು ತುಂಡುಗಳು, ದ್ವೀಪ ಮತ್ತು ಒಂದು ರೀತಿಯ ಸುಣ್ಣದ ರಾಶಿಯನ್ನು ನಾವು ಸ್ವಲ್ಪ ಮಟ್ಟಿಗೆ ಗುರುತಿಸಲು ಸಾಧ್ಯವಾಯಿತು. ಇದು ಸೇತುವೆಯ ಭಾಗವೇ ಅಥವಾ ಅದರ ಅವಶೇಷಗಳು ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ಉತ್ತರಿಸಿದ್ದಾರೆ.

18 ಸಾವಿರ ವರ್ಷಗಳ ಇತಿಹಾಸದ ರಾಮ ಸೇತುವಿನ ಹುಡುಕಾಟದಲ್ಲಿ ಹಲವಾರು ಮಿತಿಗಳಿವೆ. ಉಪಗ್ರಹ ಚಿತ್ರಗಳನ್ನು ತೆಗೆಯಲಾಗಿದೆ. ಆಳವಿಲ್ಲದ ನೀರಿನಲ್ಲಿ ದ್ವೀಪ ಮತ್ತು ಸುಣ್ಣದ ಕಲ್ಲುಗಳು ಗೋಚರಿಸುತ್ತವೆ, ಆದರೆ ಇವು ರಾಮಸೇತುವಿನ ಅವಶೇಷಗಳು ಎಂದು ಹೇಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯುಪಿಎ ಸರಕಾರ ಈ ಹಿಂದೆ ಪರಿಸರವಾದಿ ಆರ್.ಕೆ. ಪಚೌರಿ ನೇತೃತ್ವದಲ್ಲಿ ಸೇತುಸಮುದ್ರಂ ಯೋಜನೆಗೆ ಪರ್ಯಾಯ ಜೋಡಣೆಯನ್ನು ಪರಿಶೀಲಿಸಲು ಸಮಿತಿಯೊಂದನ್ನು ನೇಮಿಸಿತ್ತು. ದ್ವೀಪಗಳ ಸರಪಳಿಯ ಮೂಲಕ ನ್ಯಾವಿಗೇಷನಲ್ ಮಾರ್ಗ ರಚಿಸಲು 83 ಕಿಮೀ ಜಾಗದಲ್ಲಿ ಅಗೆಯಲು ಮುಂದಾಗಿತ್ತು. ಆದರೆ ಬಿಜೆಪಿಯು ಹಿಂದಿನಿಂದಲೂ ಅಲ್ಲಿ ಶ್ರೀರಾಮ ನಿರ್ಮಿಸಿದ್ದ ರಾಮ ಸೇತುವೆ ಇದೆ. ಅದು 48 ಕಿ.ಮೀ ಉದ್ದವಾಗಿದೆ ಎಂದು ಪ್ರತಿಪಾದಿಸಿತ್ತು. ಅದನ್ನೆ ಮುಂದು ಮಾಡಿ ಯೋಜನೆಗೆ ವಿರೋಧ ವ್ಯಕ್ತಪಡಿಸಿತ್ತು.

ಸದ್ಯ ಬಿಜೆಪಿ ಸರ್ಕಾರವೇ ಅದು ಸೇತುವೆಯಲ್ಲ ಎಂದು ಒಪ್ಪಿಕೊಂಡ ನಂತರ ಕಾಂಗ್ರೆಸ್ ವಕ್ತಾರ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ. “ಎಲ್ಲಾ ಭಕ್ತರೇ, ತೆರೆದ ಕಿವಿಯಿಂದ ಆಲಿಸಿ ಮತ್ತು ತೆರೆದ ಕಣ್ಣುಗಳಿಂದ ನೋಡಿ.
ರಾಮಸೇತು ಇದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಮೋದಿ ಸರ್ಕಾರ ಸಂಸತ್ತಿನಲ್ಲಿ ಹೇಳುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ; 2026ರ ಫಿಫಾ ವಿಶ್ವಕಪ್‌ಗೆ 48 ತಂಡಗಳು: ಭಾರತ ಫುಟ್ಬಾಲ್ ತಂಡ ಅರ್ಹತೆ ಪಡೆಯುವುದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...