Homeಮುಖಪುಟ'ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

- Advertisement -
- Advertisement -

ಜನಾಂಗೀಯ ಸಂಘರ್ಷ ಭುಗಿಲೆದ್ದ ಬಳಿಕ ಮೊದಲ ಬಾರಿಗೆ ಶನಿವಾರ (ಸೆ.13) ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದು, ಇಂಫಾಲ್ ಮತ್ತು ಚುರಚಂದಪುರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದಕ್ಕೂ ಮೊದಲು, ಸಂಘರ್ಷದ ಪರಿಣಾಮ ಆಂತರಿಕವಾಗಿ ಸ್ಥಳಾಂತರಗೊಂಡ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯಗಳ ಜನರನ್ನು (ಐಡಿಪಿಗಳು) ಪ್ರಧಾನಿ ಭೇಟಿಯಾಗಿದ್ದಾರೆ. ಈ ವೇಳೆ ಅವರು ನಡೆಸಿರುವ ಚರ್ಚೆಯ ಕುರಿತು ಎರಡೂ ಸಮುದಾಯಗಳ ಜನರನ್ನು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಿರಾಶ್ರಿತರಿಗೆ ಪ್ರಧಾನಿ ಜೊತೆ ಇಂತಿಷ್ಟೇ ಮಾತನಾಡಬೇಕು ಮತ್ತು ನಿರ್ದಿಷ್ಟ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಬೇಕು ಎಂಬ ಒಂದು ಮಿತಿಯನ್ನು ನಿಗದಿಪಡಿಸಲಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚುರಚಂದಪುರದ ಕೆಲವು ಸ್ಥಳೀಯರು, ಕೇಂದ್ರಾಡಳಿತ ಪ್ರದೇಶ ರಚನೆಯ ಮೂಲಕ ‘ಪ್ರತ್ಯೇಕ ಆಡಳಿತ’ದ ನಮ್ಮ ಬೇಡಿಕೆಯನ್ನು ಮುಂದಿಡಲು ಸಾಧ್ಯವಾಗಿಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪ್ರತ್ಯೇಕ ಆಡಳಿತದ ಬಗ್ಗೆ ಪ್ರಧಾನಿಯೊಂದಿಗೆ ಏನನ್ನೂ ಕೇಳಬಾರದು ಎಂದು ನಮಗೆ ಸೂಚಿಸಲಾಗಿತ್ತು. ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಇತ್ಯಾದಿ ವಿಷಯಗಳ ಬಗ್ಗೆ ಮಾತ್ರ ಮಾತನಾಡಲು ಅನುಮತಿ ನೀಡಲಾಗಿತ್ತು” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಚುರಚಂದಪುರದ ನಿವಾಸಿಯೊಬ್ಬರು ಹೇಳಿದ್ದಾಗಿ ವರದಿ ವಿವರಿಸಿದೆ.

ಪ್ರಧಾನಿ ಮೋದಿ ಹಿಂದಿಯಲ್ಲಿ ಮಾತನಾಡಿದ ಬಗ್ಗೆಯೂ ಸ್ಥಳೀಯರ ಒಂದು ಗುಂಪು ಅಸಮಾಧಾನ ವ್ಯಕ್ತಪಡಿಸಿದೆ.

“ಅವರು ಮಿಜೋರಾಂನಲ್ಲಿ ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದರು. ಆದರೆ, ಚುರಚಂದಪುರದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. ಈ ಬಗ್ಗೆ ನಮಗೆ ಅಸಮಾಧಾನವಿದೆ. ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸಿಲ್ಲ. ಅಭಿವೃದ್ಧಿ ಪ್ಯಾಕೇಜ್ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ಹೆಸರು ಬಹಿರಂಗಪಡಿಸಲು ಬಯಸದ ಮತ್ತೊಬ್ಬರು ಸ್ಥಳೀಯರು ಹೇಳಿದ್ದಾರೆ.

ಇದು ಒಬ್ಬ ವ್ಯಕ್ತಿಯ ಭಾವನೆಯಲ್ಲ, ಬದಲಾಗಿ ಸಾರ್ವಜನಿಕ ಭಾವನೆ ಎಂದು ಆ ಸ್ಥಳೀಯ ತಿಳಿಸಿದ್ದಾರೆ.

“ಸಂಘರ್ಷವನ್ನು ಪರಿಹರಿಸುವ ಯಾವುದೇ ಯೋಜನೆಗಳ ಬಗ್ಗೆ ಪ್ರಧಾನಿ ಮಾತನಾಡಿಲ್ಲ. ಸರ್ಕಾರಕ್ಕೆ ಯೋಜನೆಗಳಿದ್ದರೆ, ಅವರೇ ಏನಾದರೂ ಹೇಳಬೇಕೆಂದು ನಾವೆಲ್ಲರೂ ಬಯಸುತ್ತಿದ್ದೆವು. ಅಲ್ಲದೆ, ಭಾಷಣವೂ ಸಂಕ್ಷಿಪ್ತವಾಗಿತ್ತು. ಆದರೆ, ಪ್ರತಿಕೂಲ ಹವಾಮಾನದ ಹೊರತಾಗಿಯೂ ಅವರು ಬಂದಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಮತ್ತೊಬ್ಬರು ಸ್ಥಳೀಯ ಮುಂಗ್ ಹಂಘಲ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಇಂಫಾಲದಲ್ಲಿ ಪ್ರಧಾನಿ ಮೋದಿ ಜನರನ್ನು ಉದ್ದೇಶಿಸಿ ಮಾತನಾಡುವ ಮೊದಲು ನಿರಾಶ್ರಿತರನ್ನು ಭೇಟಿಯಾದಾಗ, ಅವರಲ್ಲಿ ಕೆಲವರು ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿಯ ಮಾತುಗಳಿಂದ ಸ್ಥಳೀಯರು ತೃಪ್ತರಾಗಿಲ್ಲ ಎಂದು ವರದಿ ಹೇಳಿದೆ.

ಚುರಚಂದಪುರದಂತೆಯೇ, ಇಂಫಾಲದ ಜನರೂ ಕೂಡ ಪ್ರಧಾನಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆಂದು ನಿರೀಕ್ಷಿಸಿದ್ದರು. “ಪ್ರಧಾನಿಯ ಭಾಷಣ ಚೆನ್ನಾಗಿತ್ತು, ಆದರೆ ನನಗೆ ಖಚಿತವಿಲ್ಲ. ಪರಿಹಾರದ ಹಾದಿ ನಮಗೆ ತಿಳಿದಿಲ್ಲ” ಎಂದು ಇಂಫಾಲದ ಸ್ಥಳೀಯ ಸೂರಜ್‌ಕುಮಾರ್ ಸಿಂಗ್ ಹೇಳಿದ್ದಾರೆ.

“ಪ್ರಧಾನಿ ಭೇಟಿಯಿಂದ ಕೆಲವು ಅಭಿವೃದ್ಧಿ ಯೋಜನೆಗಳು ಘೋಷಣೆಯಾಗಿವೆ. ಆದರೆ, ಪರಿಹಾರ ಶಿಬಿರಗಳಲ್ಲಿ ಇನ್ನೂ ನರಳುತ್ತಿರುವ ಸ್ಥಳಾಂತರಗೊಂಡ ಮೈತೇಯಿ ಕುಟುಂಬಗಳಿಗೆ ಅದು ದೊಡ್ಡ ಭರವಸೆ ನೀಡಿಲ್ಲ. ಪುನರ್ವಸತಿ ಬಗ್ಗೆ ಸ್ಪಷ್ಟತೆಯನ್ನು ನಾವು ನಿರೀಕ್ಷಿಸಿದ್ದೆವು. ಜನರು ಯಾವಾಗ ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುತ್ತದೆ, ಅವರ ಸುರಕ್ಷತೆಯನ್ನು ಹೇಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಮತ್ತು ಯಾವ ಪುನರ್ವಸತಿ ಪ್ಯಾಕೇಜ್‌ಗಳನ್ನು ನೀಡಲಾಗುತ್ತದೆ?”ಎಂದು ಇಂಫಾಲದ ನಿವಾಸಿ ಲೀಶಾಂಗ್ಥೆಮ್ ಪ್ರಿಯೊ ಪ್ರಶ್ನಿಸಿದ್ದಾರೆ.

Courtesy :newindianexpress.com

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...