Homeಮುಖಪುಟ'ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

- Advertisement -
- Advertisement -

ಜನಾಂಗೀಯ ಸಂಘರ್ಷ ಭುಗಿಲೆದ್ದ ಬಳಿಕ ಮೊದಲ ಬಾರಿಗೆ ಶನಿವಾರ (ಸೆ.13) ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದು, ಇಂಫಾಲ್ ಮತ್ತು ಚುರಚಂದಪುರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದಕ್ಕೂ ಮೊದಲು, ಸಂಘರ್ಷದ ಪರಿಣಾಮ ಆಂತರಿಕವಾಗಿ ಸ್ಥಳಾಂತರಗೊಂಡ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯಗಳ ಜನರನ್ನು (ಐಡಿಪಿಗಳು) ಪ್ರಧಾನಿ ಭೇಟಿಯಾಗಿದ್ದಾರೆ. ಈ ವೇಳೆ ಅವರು ನಡೆಸಿರುವ ಚರ್ಚೆಯ ಕುರಿತು ಎರಡೂ ಸಮುದಾಯಗಳ ಜನರನ್ನು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಿರಾಶ್ರಿತರಿಗೆ ಪ್ರಧಾನಿ ಜೊತೆ ಇಂತಿಷ್ಟೇ ಮಾತನಾಡಬೇಕು ಮತ್ತು ನಿರ್ದಿಷ್ಟ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಬೇಕು ಎಂಬ ಒಂದು ಮಿತಿಯನ್ನು ನಿಗದಿಪಡಿಸಲಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚುರಚಂದಪುರದ ಕೆಲವು ಸ್ಥಳೀಯರು, ಕೇಂದ್ರಾಡಳಿತ ಪ್ರದೇಶ ರಚನೆಯ ಮೂಲಕ ‘ಪ್ರತ್ಯೇಕ ಆಡಳಿತ’ದ ನಮ್ಮ ಬೇಡಿಕೆಯನ್ನು ಮುಂದಿಡಲು ಸಾಧ್ಯವಾಗಿಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪ್ರತ್ಯೇಕ ಆಡಳಿತದ ಬಗ್ಗೆ ಪ್ರಧಾನಿಯೊಂದಿಗೆ ಏನನ್ನೂ ಕೇಳಬಾರದು ಎಂದು ನಮಗೆ ಸೂಚಿಸಲಾಗಿತ್ತು. ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಇತ್ಯಾದಿ ವಿಷಯಗಳ ಬಗ್ಗೆ ಮಾತ್ರ ಮಾತನಾಡಲು ಅನುಮತಿ ನೀಡಲಾಗಿತ್ತು” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಚುರಚಂದಪುರದ ನಿವಾಸಿಯೊಬ್ಬರು ಹೇಳಿದ್ದಾಗಿ ವರದಿ ವಿವರಿಸಿದೆ.

ಪ್ರಧಾನಿ ಮೋದಿ ಹಿಂದಿಯಲ್ಲಿ ಮಾತನಾಡಿದ ಬಗ್ಗೆಯೂ ಸ್ಥಳೀಯರ ಒಂದು ಗುಂಪು ಅಸಮಾಧಾನ ವ್ಯಕ್ತಪಡಿಸಿದೆ.

“ಅವರು ಮಿಜೋರಾಂನಲ್ಲಿ ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದರು. ಆದರೆ, ಚುರಚಂದಪುರದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. ಈ ಬಗ್ಗೆ ನಮಗೆ ಅಸಮಾಧಾನವಿದೆ. ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸಿಲ್ಲ. ಅಭಿವೃದ್ಧಿ ಪ್ಯಾಕೇಜ್ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ಹೆಸರು ಬಹಿರಂಗಪಡಿಸಲು ಬಯಸದ ಮತ್ತೊಬ್ಬರು ಸ್ಥಳೀಯರು ಹೇಳಿದ್ದಾರೆ.

ಇದು ಒಬ್ಬ ವ್ಯಕ್ತಿಯ ಭಾವನೆಯಲ್ಲ, ಬದಲಾಗಿ ಸಾರ್ವಜನಿಕ ಭಾವನೆ ಎಂದು ಆ ಸ್ಥಳೀಯ ತಿಳಿಸಿದ್ದಾರೆ.

“ಸಂಘರ್ಷವನ್ನು ಪರಿಹರಿಸುವ ಯಾವುದೇ ಯೋಜನೆಗಳ ಬಗ್ಗೆ ಪ್ರಧಾನಿ ಮಾತನಾಡಿಲ್ಲ. ಸರ್ಕಾರಕ್ಕೆ ಯೋಜನೆಗಳಿದ್ದರೆ, ಅವರೇ ಏನಾದರೂ ಹೇಳಬೇಕೆಂದು ನಾವೆಲ್ಲರೂ ಬಯಸುತ್ತಿದ್ದೆವು. ಅಲ್ಲದೆ, ಭಾಷಣವೂ ಸಂಕ್ಷಿಪ್ತವಾಗಿತ್ತು. ಆದರೆ, ಪ್ರತಿಕೂಲ ಹವಾಮಾನದ ಹೊರತಾಗಿಯೂ ಅವರು ಬಂದಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಮತ್ತೊಬ್ಬರು ಸ್ಥಳೀಯ ಮುಂಗ್ ಹಂಘಲ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಇಂಫಾಲದಲ್ಲಿ ಪ್ರಧಾನಿ ಮೋದಿ ಜನರನ್ನು ಉದ್ದೇಶಿಸಿ ಮಾತನಾಡುವ ಮೊದಲು ನಿರಾಶ್ರಿತರನ್ನು ಭೇಟಿಯಾದಾಗ, ಅವರಲ್ಲಿ ಕೆಲವರು ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿಯ ಮಾತುಗಳಿಂದ ಸ್ಥಳೀಯರು ತೃಪ್ತರಾಗಿಲ್ಲ ಎಂದು ವರದಿ ಹೇಳಿದೆ.

ಚುರಚಂದಪುರದಂತೆಯೇ, ಇಂಫಾಲದ ಜನರೂ ಕೂಡ ಪ್ರಧಾನಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆಂದು ನಿರೀಕ್ಷಿಸಿದ್ದರು. “ಪ್ರಧಾನಿಯ ಭಾಷಣ ಚೆನ್ನಾಗಿತ್ತು, ಆದರೆ ನನಗೆ ಖಚಿತವಿಲ್ಲ. ಪರಿಹಾರದ ಹಾದಿ ನಮಗೆ ತಿಳಿದಿಲ್ಲ” ಎಂದು ಇಂಫಾಲದ ಸ್ಥಳೀಯ ಸೂರಜ್‌ಕುಮಾರ್ ಸಿಂಗ್ ಹೇಳಿದ್ದಾರೆ.

“ಪ್ರಧಾನಿ ಭೇಟಿಯಿಂದ ಕೆಲವು ಅಭಿವೃದ್ಧಿ ಯೋಜನೆಗಳು ಘೋಷಣೆಯಾಗಿವೆ. ಆದರೆ, ಪರಿಹಾರ ಶಿಬಿರಗಳಲ್ಲಿ ಇನ್ನೂ ನರಳುತ್ತಿರುವ ಸ್ಥಳಾಂತರಗೊಂಡ ಮೈತೇಯಿ ಕುಟುಂಬಗಳಿಗೆ ಅದು ದೊಡ್ಡ ಭರವಸೆ ನೀಡಿಲ್ಲ. ಪುನರ್ವಸತಿ ಬಗ್ಗೆ ಸ್ಪಷ್ಟತೆಯನ್ನು ನಾವು ನಿರೀಕ್ಷಿಸಿದ್ದೆವು. ಜನರು ಯಾವಾಗ ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುತ್ತದೆ, ಅವರ ಸುರಕ್ಷತೆಯನ್ನು ಹೇಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಮತ್ತು ಯಾವ ಪುನರ್ವಸತಿ ಪ್ಯಾಕೇಜ್‌ಗಳನ್ನು ನೀಡಲಾಗುತ್ತದೆ?”ಎಂದು ಇಂಫಾಲದ ನಿವಾಸಿ ಲೀಶಾಂಗ್ಥೆಮ್ ಪ್ರಿಯೊ ಪ್ರಶ್ನಿಸಿದ್ದಾರೆ.

Courtesy :newindianexpress.com

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...