Homeಮುಖಪುಟ'ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

- Advertisement -
- Advertisement -

ಜನಾಂಗೀಯ ಸಂಘರ್ಷ ಭುಗಿಲೆದ್ದ ಬಳಿಕ ಮೊದಲ ಬಾರಿಗೆ ಶನಿವಾರ (ಸೆ.13) ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದು, ಇಂಫಾಲ್ ಮತ್ತು ಚುರಚಂದಪುರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದಕ್ಕೂ ಮೊದಲು, ಸಂಘರ್ಷದ ಪರಿಣಾಮ ಆಂತರಿಕವಾಗಿ ಸ್ಥಳಾಂತರಗೊಂಡ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯಗಳ ಜನರನ್ನು (ಐಡಿಪಿಗಳು) ಪ್ರಧಾನಿ ಭೇಟಿಯಾಗಿದ್ದಾರೆ. ಈ ವೇಳೆ ಅವರು ನಡೆಸಿರುವ ಚರ್ಚೆಯ ಕುರಿತು ಎರಡೂ ಸಮುದಾಯಗಳ ಜನರನ್ನು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಿರಾಶ್ರಿತರಿಗೆ ಪ್ರಧಾನಿ ಜೊತೆ ಇಂತಿಷ್ಟೇ ಮಾತನಾಡಬೇಕು ಮತ್ತು ನಿರ್ದಿಷ್ಟ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಬೇಕು ಎಂಬ ಒಂದು ಮಿತಿಯನ್ನು ನಿಗದಿಪಡಿಸಲಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚುರಚಂದಪುರದ ಕೆಲವು ಸ್ಥಳೀಯರು, ಕೇಂದ್ರಾಡಳಿತ ಪ್ರದೇಶ ರಚನೆಯ ಮೂಲಕ ‘ಪ್ರತ್ಯೇಕ ಆಡಳಿತ’ದ ನಮ್ಮ ಬೇಡಿಕೆಯನ್ನು ಮುಂದಿಡಲು ಸಾಧ್ಯವಾಗಿಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪ್ರತ್ಯೇಕ ಆಡಳಿತದ ಬಗ್ಗೆ ಪ್ರಧಾನಿಯೊಂದಿಗೆ ಏನನ್ನೂ ಕೇಳಬಾರದು ಎಂದು ನಮಗೆ ಸೂಚಿಸಲಾಗಿತ್ತು. ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಇತ್ಯಾದಿ ವಿಷಯಗಳ ಬಗ್ಗೆ ಮಾತ್ರ ಮಾತನಾಡಲು ಅನುಮತಿ ನೀಡಲಾಗಿತ್ತು” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಚುರಚಂದಪುರದ ನಿವಾಸಿಯೊಬ್ಬರು ಹೇಳಿದ್ದಾಗಿ ವರದಿ ವಿವರಿಸಿದೆ.

ಪ್ರಧಾನಿ ಮೋದಿ ಹಿಂದಿಯಲ್ಲಿ ಮಾತನಾಡಿದ ಬಗ್ಗೆಯೂ ಸ್ಥಳೀಯರ ಒಂದು ಗುಂಪು ಅಸಮಾಧಾನ ವ್ಯಕ್ತಪಡಿಸಿದೆ.

“ಅವರು ಮಿಜೋರಾಂನಲ್ಲಿ ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದರು. ಆದರೆ, ಚುರಚಂದಪುರದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. ಈ ಬಗ್ಗೆ ನಮಗೆ ಅಸಮಾಧಾನವಿದೆ. ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸಿಲ್ಲ. ಅಭಿವೃದ್ಧಿ ಪ್ಯಾಕೇಜ್ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ಹೆಸರು ಬಹಿರಂಗಪಡಿಸಲು ಬಯಸದ ಮತ್ತೊಬ್ಬರು ಸ್ಥಳೀಯರು ಹೇಳಿದ್ದಾರೆ.

ಇದು ಒಬ್ಬ ವ್ಯಕ್ತಿಯ ಭಾವನೆಯಲ್ಲ, ಬದಲಾಗಿ ಸಾರ್ವಜನಿಕ ಭಾವನೆ ಎಂದು ಆ ಸ್ಥಳೀಯ ತಿಳಿಸಿದ್ದಾರೆ.

“ಸಂಘರ್ಷವನ್ನು ಪರಿಹರಿಸುವ ಯಾವುದೇ ಯೋಜನೆಗಳ ಬಗ್ಗೆ ಪ್ರಧಾನಿ ಮಾತನಾಡಿಲ್ಲ. ಸರ್ಕಾರಕ್ಕೆ ಯೋಜನೆಗಳಿದ್ದರೆ, ಅವರೇ ಏನಾದರೂ ಹೇಳಬೇಕೆಂದು ನಾವೆಲ್ಲರೂ ಬಯಸುತ್ತಿದ್ದೆವು. ಅಲ್ಲದೆ, ಭಾಷಣವೂ ಸಂಕ್ಷಿಪ್ತವಾಗಿತ್ತು. ಆದರೆ, ಪ್ರತಿಕೂಲ ಹವಾಮಾನದ ಹೊರತಾಗಿಯೂ ಅವರು ಬಂದಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಮತ್ತೊಬ್ಬರು ಸ್ಥಳೀಯ ಮುಂಗ್ ಹಂಘಲ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಇಂಫಾಲದಲ್ಲಿ ಪ್ರಧಾನಿ ಮೋದಿ ಜನರನ್ನು ಉದ್ದೇಶಿಸಿ ಮಾತನಾಡುವ ಮೊದಲು ನಿರಾಶ್ರಿತರನ್ನು ಭೇಟಿಯಾದಾಗ, ಅವರಲ್ಲಿ ಕೆಲವರು ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿಯ ಮಾತುಗಳಿಂದ ಸ್ಥಳೀಯರು ತೃಪ್ತರಾಗಿಲ್ಲ ಎಂದು ವರದಿ ಹೇಳಿದೆ.

ಚುರಚಂದಪುರದಂತೆಯೇ, ಇಂಫಾಲದ ಜನರೂ ಕೂಡ ಪ್ರಧಾನಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆಂದು ನಿರೀಕ್ಷಿಸಿದ್ದರು. “ಪ್ರಧಾನಿಯ ಭಾಷಣ ಚೆನ್ನಾಗಿತ್ತು, ಆದರೆ ನನಗೆ ಖಚಿತವಿಲ್ಲ. ಪರಿಹಾರದ ಹಾದಿ ನಮಗೆ ತಿಳಿದಿಲ್ಲ” ಎಂದು ಇಂಫಾಲದ ಸ್ಥಳೀಯ ಸೂರಜ್‌ಕುಮಾರ್ ಸಿಂಗ್ ಹೇಳಿದ್ದಾರೆ.

“ಪ್ರಧಾನಿ ಭೇಟಿಯಿಂದ ಕೆಲವು ಅಭಿವೃದ್ಧಿ ಯೋಜನೆಗಳು ಘೋಷಣೆಯಾಗಿವೆ. ಆದರೆ, ಪರಿಹಾರ ಶಿಬಿರಗಳಲ್ಲಿ ಇನ್ನೂ ನರಳುತ್ತಿರುವ ಸ್ಥಳಾಂತರಗೊಂಡ ಮೈತೇಯಿ ಕುಟುಂಬಗಳಿಗೆ ಅದು ದೊಡ್ಡ ಭರವಸೆ ನೀಡಿಲ್ಲ. ಪುನರ್ವಸತಿ ಬಗ್ಗೆ ಸ್ಪಷ್ಟತೆಯನ್ನು ನಾವು ನಿರೀಕ್ಷಿಸಿದ್ದೆವು. ಜನರು ಯಾವಾಗ ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುತ್ತದೆ, ಅವರ ಸುರಕ್ಷತೆಯನ್ನು ಹೇಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಮತ್ತು ಯಾವ ಪುನರ್ವಸತಿ ಪ್ಯಾಕೇಜ್‌ಗಳನ್ನು ನೀಡಲಾಗುತ್ತದೆ?”ಎಂದು ಇಂಫಾಲದ ನಿವಾಸಿ ಲೀಶಾಂಗ್ಥೆಮ್ ಪ್ರಿಯೊ ಪ್ರಶ್ನಿಸಿದ್ದಾರೆ.

Courtesy :newindianexpress.com

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...