Homeಮುಖಪುಟ'ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

- Advertisement -
- Advertisement -

ಜನಾಂಗೀಯ ಸಂಘರ್ಷ ಭುಗಿಲೆದ್ದ ಬಳಿಕ ಮೊದಲ ಬಾರಿಗೆ ಶನಿವಾರ (ಸೆ.13) ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದು, ಇಂಫಾಲ್ ಮತ್ತು ಚುರಚಂದಪುರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದಕ್ಕೂ ಮೊದಲು, ಸಂಘರ್ಷದ ಪರಿಣಾಮ ಆಂತರಿಕವಾಗಿ ಸ್ಥಳಾಂತರಗೊಂಡ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯಗಳ ಜನರನ್ನು (ಐಡಿಪಿಗಳು) ಪ್ರಧಾನಿ ಭೇಟಿಯಾಗಿದ್ದಾರೆ. ಈ ವೇಳೆ ಅವರು ನಡೆಸಿರುವ ಚರ್ಚೆಯ ಕುರಿತು ಎರಡೂ ಸಮುದಾಯಗಳ ಜನರನ್ನು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಿರಾಶ್ರಿತರಿಗೆ ಪ್ರಧಾನಿ ಜೊತೆ ಇಂತಿಷ್ಟೇ ಮಾತನಾಡಬೇಕು ಮತ್ತು ನಿರ್ದಿಷ್ಟ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಬೇಕು ಎಂಬ ಒಂದು ಮಿತಿಯನ್ನು ನಿಗದಿಪಡಿಸಲಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚುರಚಂದಪುರದ ಕೆಲವು ಸ್ಥಳೀಯರು, ಕೇಂದ್ರಾಡಳಿತ ಪ್ರದೇಶ ರಚನೆಯ ಮೂಲಕ ‘ಪ್ರತ್ಯೇಕ ಆಡಳಿತ’ದ ನಮ್ಮ ಬೇಡಿಕೆಯನ್ನು ಮುಂದಿಡಲು ಸಾಧ್ಯವಾಗಿಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪ್ರತ್ಯೇಕ ಆಡಳಿತದ ಬಗ್ಗೆ ಪ್ರಧಾನಿಯೊಂದಿಗೆ ಏನನ್ನೂ ಕೇಳಬಾರದು ಎಂದು ನಮಗೆ ಸೂಚಿಸಲಾಗಿತ್ತು. ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಇತ್ಯಾದಿ ವಿಷಯಗಳ ಬಗ್ಗೆ ಮಾತ್ರ ಮಾತನಾಡಲು ಅನುಮತಿ ನೀಡಲಾಗಿತ್ತು” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಚುರಚಂದಪುರದ ನಿವಾಸಿಯೊಬ್ಬರು ಹೇಳಿದ್ದಾಗಿ ವರದಿ ವಿವರಿಸಿದೆ.

ಪ್ರಧಾನಿ ಮೋದಿ ಹಿಂದಿಯಲ್ಲಿ ಮಾತನಾಡಿದ ಬಗ್ಗೆಯೂ ಸ್ಥಳೀಯರ ಒಂದು ಗುಂಪು ಅಸಮಾಧಾನ ವ್ಯಕ್ತಪಡಿಸಿದೆ.

“ಅವರು ಮಿಜೋರಾಂನಲ್ಲಿ ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದರು. ಆದರೆ, ಚುರಚಂದಪುರದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. ಈ ಬಗ್ಗೆ ನಮಗೆ ಅಸಮಾಧಾನವಿದೆ. ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸಿಲ್ಲ. ಅಭಿವೃದ್ಧಿ ಪ್ಯಾಕೇಜ್ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ಹೆಸರು ಬಹಿರಂಗಪಡಿಸಲು ಬಯಸದ ಮತ್ತೊಬ್ಬರು ಸ್ಥಳೀಯರು ಹೇಳಿದ್ದಾರೆ.

ಇದು ಒಬ್ಬ ವ್ಯಕ್ತಿಯ ಭಾವನೆಯಲ್ಲ, ಬದಲಾಗಿ ಸಾರ್ವಜನಿಕ ಭಾವನೆ ಎಂದು ಆ ಸ್ಥಳೀಯ ತಿಳಿಸಿದ್ದಾರೆ.

“ಸಂಘರ್ಷವನ್ನು ಪರಿಹರಿಸುವ ಯಾವುದೇ ಯೋಜನೆಗಳ ಬಗ್ಗೆ ಪ್ರಧಾನಿ ಮಾತನಾಡಿಲ್ಲ. ಸರ್ಕಾರಕ್ಕೆ ಯೋಜನೆಗಳಿದ್ದರೆ, ಅವರೇ ಏನಾದರೂ ಹೇಳಬೇಕೆಂದು ನಾವೆಲ್ಲರೂ ಬಯಸುತ್ತಿದ್ದೆವು. ಅಲ್ಲದೆ, ಭಾಷಣವೂ ಸಂಕ್ಷಿಪ್ತವಾಗಿತ್ತು. ಆದರೆ, ಪ್ರತಿಕೂಲ ಹವಾಮಾನದ ಹೊರತಾಗಿಯೂ ಅವರು ಬಂದಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಮತ್ತೊಬ್ಬರು ಸ್ಥಳೀಯ ಮುಂಗ್ ಹಂಘಲ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಇಂಫಾಲದಲ್ಲಿ ಪ್ರಧಾನಿ ಮೋದಿ ಜನರನ್ನು ಉದ್ದೇಶಿಸಿ ಮಾತನಾಡುವ ಮೊದಲು ನಿರಾಶ್ರಿತರನ್ನು ಭೇಟಿಯಾದಾಗ, ಅವರಲ್ಲಿ ಕೆಲವರು ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿಯ ಮಾತುಗಳಿಂದ ಸ್ಥಳೀಯರು ತೃಪ್ತರಾಗಿಲ್ಲ ಎಂದು ವರದಿ ಹೇಳಿದೆ.

ಚುರಚಂದಪುರದಂತೆಯೇ, ಇಂಫಾಲದ ಜನರೂ ಕೂಡ ಪ್ರಧಾನಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆಂದು ನಿರೀಕ್ಷಿಸಿದ್ದರು. “ಪ್ರಧಾನಿಯ ಭಾಷಣ ಚೆನ್ನಾಗಿತ್ತು, ಆದರೆ ನನಗೆ ಖಚಿತವಿಲ್ಲ. ಪರಿಹಾರದ ಹಾದಿ ನಮಗೆ ತಿಳಿದಿಲ್ಲ” ಎಂದು ಇಂಫಾಲದ ಸ್ಥಳೀಯ ಸೂರಜ್‌ಕುಮಾರ್ ಸಿಂಗ್ ಹೇಳಿದ್ದಾರೆ.

“ಪ್ರಧಾನಿ ಭೇಟಿಯಿಂದ ಕೆಲವು ಅಭಿವೃದ್ಧಿ ಯೋಜನೆಗಳು ಘೋಷಣೆಯಾಗಿವೆ. ಆದರೆ, ಪರಿಹಾರ ಶಿಬಿರಗಳಲ್ಲಿ ಇನ್ನೂ ನರಳುತ್ತಿರುವ ಸ್ಥಳಾಂತರಗೊಂಡ ಮೈತೇಯಿ ಕುಟುಂಬಗಳಿಗೆ ಅದು ದೊಡ್ಡ ಭರವಸೆ ನೀಡಿಲ್ಲ. ಪುನರ್ವಸತಿ ಬಗ್ಗೆ ಸ್ಪಷ್ಟತೆಯನ್ನು ನಾವು ನಿರೀಕ್ಷಿಸಿದ್ದೆವು. ಜನರು ಯಾವಾಗ ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುತ್ತದೆ, ಅವರ ಸುರಕ್ಷತೆಯನ್ನು ಹೇಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಮತ್ತು ಯಾವ ಪುನರ್ವಸತಿ ಪ್ಯಾಕೇಜ್‌ಗಳನ್ನು ನೀಡಲಾಗುತ್ತದೆ?”ಎಂದು ಇಂಫಾಲದ ನಿವಾಸಿ ಲೀಶಾಂಗ್ಥೆಮ್ ಪ್ರಿಯೊ ಪ್ರಶ್ನಿಸಿದ್ದಾರೆ.

Courtesy :newindianexpress.com

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...