Homeಮುಖಪುಟಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ

- Advertisement -
- Advertisement -

ಭಾರತದ ಇತಿಹಾಸ ಸಂಸ್ಕೃತಿಯ ಹುಟ್ಟು ಮತ್ತು ವಿಕಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ ತಂಡವೊಂದನ್ನು ರಚಿಸಿದೆ. ಆದರೆ ಈ ತಂಡದಲ್ಲಿ ದಕ್ಷಿಣದ ಪರಪಂರೆಯ ಬಗ್ಗೆ ಜ್ಞಾನವಿರುವ ಕನ್ನಡಿಗರಾಗಲಿ, ಮಹಿಳೆಯರಾಗಲಿ, ದ್ರಾವಿಡರಾಗಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಭಾರತದ ಸಂಸ್ಕೃತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ರಚಿಸಿರುವ 16 ಜನರ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲವೆಂದು ಕುಮಾರಸ್ವಾಮಿ ಇಂದು ಸರಣಿ ಟ್ವೀಟ್ ಮಾಡುವುದರ ಮೂಲಕ ಆರೋಪಿಸಿದ್ದಾರೆ.

“ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

“ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ” ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಭಾರತೀಯ ಸಂಸ್ಕೃತಿ ಎಂದರೆ ಕೇವಲ ಒಂದು ಸಮುದಾಯದ ಸಂಸ್ಕೃತಿಯಲ್ಲ ಅಥವಾ ಒಂದು ರಾಜ್ಯದ, ಒಂದು ಧರ್ಮ, ಜಾತಿಗೆ ಸಂಬಂಧಿಸಿದ ಸಂಸ್ಕೃತಿ ಮಾತ್ರವಲ್ಲ. ಭಾರತ ಎಂದರೆ ವಿವಿಧತೆ, ಭಾರತ ಎಂದರೆ ಬಹು ಸಂಸ್ಕೃತಿ. ಆದರೆ ಇಂದಿನ ಆಳುವ ಸರ್ಕಾರಗಳು ಎಲ್ಲವನ್ನೂ ಏಕತೆಯೊಳಗೆ ಬಂಧಿಸುವ ಪ್ರಯತ್ನವನ್ನು ಮಾಡುತ್ತಿದೆ. ಇದರ ಮುಂದುವರಿದ ಭಾಗವೇ ಈ ಅಧ್ಯಯನ ಸಮಿತಿ.

ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಅವರದು ಮಾತ್ರವಲ್ಲ. ಇದು ಇಡೀ ದಕ್ಷಿಣ ಭಾರತೀಯರ ಅಸ್ಮಿತೆಯ ಪ್ರಶ್ನೆ. ಹಿಂದಿ ಹೇರಿಕೆ ಮತ್ತು ಕರ್ನಾಟಕದಲ್ಲಿನ ಸ್ಥಳಗಳಿಗೆ ಉತ್ತರ ಭಾರತದ ನಾಯಕರ ಹೆಸರಿಡುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿವೆ. ಈಗ ಈ ಅಧ್ಯಯನ ಮಾಡಿ, ಸರ್ಕಾರದಿಂದಲೇ ಅಧಿಕೃತವಾಗಿ ಕೇವಲ ಉತ್ತರ ಭಾರತದ ಸಂಸ್ಕೃತಿ ಮತ್ತು ಇತಿಹಾಸ ಮಾತ್ರ ಭಾರತದ್ದು ಎಂದು ಸಾಬೀತುಪಡಿಸಲು ಹೊರಟಿದೆ. ಈ ಮೂಲಕ ಉಳಿದ ಸ್ಥಳೀಯತೆಯ ಅಸ್ಮಿತೆಯನ್ನು ನಾಶಮಾಡಲು ಮುಂದಾಗಿರುವಂತೆ ತೋರುತ್ತಿದೆಇದರ ವಿರುದ್ಧ ಬಲವಾದ ದನಿಯೆತ್ತದ ಹೊರತು ನಾವು ನಮ್ಮತನವನ್ನು ಕಳೆದುಕೊಳ್ಳುವುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...