Homeಮುಖಪುಟಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ

- Advertisement -
- Advertisement -

ಭಾರತದ ಇತಿಹಾಸ ಸಂಸ್ಕೃತಿಯ ಹುಟ್ಟು ಮತ್ತು ವಿಕಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ ತಂಡವೊಂದನ್ನು ರಚಿಸಿದೆ. ಆದರೆ ಈ ತಂಡದಲ್ಲಿ ದಕ್ಷಿಣದ ಪರಪಂರೆಯ ಬಗ್ಗೆ ಜ್ಞಾನವಿರುವ ಕನ್ನಡಿಗರಾಗಲಿ, ಮಹಿಳೆಯರಾಗಲಿ, ದ್ರಾವಿಡರಾಗಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಭಾರತದ ಸಂಸ್ಕೃತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ರಚಿಸಿರುವ 16 ಜನರ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲವೆಂದು ಕುಮಾರಸ್ವಾಮಿ ಇಂದು ಸರಣಿ ಟ್ವೀಟ್ ಮಾಡುವುದರ ಮೂಲಕ ಆರೋಪಿಸಿದ್ದಾರೆ.

“ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

“ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ” ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಭಾರತೀಯ ಸಂಸ್ಕೃತಿ ಎಂದರೆ ಕೇವಲ ಒಂದು ಸಮುದಾಯದ ಸಂಸ್ಕೃತಿಯಲ್ಲ ಅಥವಾ ಒಂದು ರಾಜ್ಯದ, ಒಂದು ಧರ್ಮ, ಜಾತಿಗೆ ಸಂಬಂಧಿಸಿದ ಸಂಸ್ಕೃತಿ ಮಾತ್ರವಲ್ಲ. ಭಾರತ ಎಂದರೆ ವಿವಿಧತೆ, ಭಾರತ ಎಂದರೆ ಬಹು ಸಂಸ್ಕೃತಿ. ಆದರೆ ಇಂದಿನ ಆಳುವ ಸರ್ಕಾರಗಳು ಎಲ್ಲವನ್ನೂ ಏಕತೆಯೊಳಗೆ ಬಂಧಿಸುವ ಪ್ರಯತ್ನವನ್ನು ಮಾಡುತ್ತಿದೆ. ಇದರ ಮುಂದುವರಿದ ಭಾಗವೇ ಈ ಅಧ್ಯಯನ ಸಮಿತಿ.

ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಅವರದು ಮಾತ್ರವಲ್ಲ. ಇದು ಇಡೀ ದಕ್ಷಿಣ ಭಾರತೀಯರ ಅಸ್ಮಿತೆಯ ಪ್ರಶ್ನೆ. ಹಿಂದಿ ಹೇರಿಕೆ ಮತ್ತು ಕರ್ನಾಟಕದಲ್ಲಿನ ಸ್ಥಳಗಳಿಗೆ ಉತ್ತರ ಭಾರತದ ನಾಯಕರ ಹೆಸರಿಡುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿವೆ. ಈಗ ಈ ಅಧ್ಯಯನ ಮಾಡಿ, ಸರ್ಕಾರದಿಂದಲೇ ಅಧಿಕೃತವಾಗಿ ಕೇವಲ ಉತ್ತರ ಭಾರತದ ಸಂಸ್ಕೃತಿ ಮತ್ತು ಇತಿಹಾಸ ಮಾತ್ರ ಭಾರತದ್ದು ಎಂದು ಸಾಬೀತುಪಡಿಸಲು ಹೊರಟಿದೆ. ಈ ಮೂಲಕ ಉಳಿದ ಸ್ಥಳೀಯತೆಯ ಅಸ್ಮಿತೆಯನ್ನು ನಾಶಮಾಡಲು ಮುಂದಾಗಿರುವಂತೆ ತೋರುತ್ತಿದೆಇದರ ವಿರುದ್ಧ ಬಲವಾದ ದನಿಯೆತ್ತದ ಹೊರತು ನಾವು ನಮ್ಮತನವನ್ನು ಕಳೆದುಕೊಳ್ಳುವುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...