Homeಮುಖಪುಟಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ

- Advertisement -
- Advertisement -

ಭಾರತದ ಇತಿಹಾಸ ಸಂಸ್ಕೃತಿಯ ಹುಟ್ಟು ಮತ್ತು ವಿಕಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ ತಂಡವೊಂದನ್ನು ರಚಿಸಿದೆ. ಆದರೆ ಈ ತಂಡದಲ್ಲಿ ದಕ್ಷಿಣದ ಪರಪಂರೆಯ ಬಗ್ಗೆ ಜ್ಞಾನವಿರುವ ಕನ್ನಡಿಗರಾಗಲಿ, ಮಹಿಳೆಯರಾಗಲಿ, ದ್ರಾವಿಡರಾಗಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಭಾರತದ ಸಂಸ್ಕೃತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ರಚಿಸಿರುವ 16 ಜನರ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲವೆಂದು ಕುಮಾರಸ್ವಾಮಿ ಇಂದು ಸರಣಿ ಟ್ವೀಟ್ ಮಾಡುವುದರ ಮೂಲಕ ಆರೋಪಿಸಿದ್ದಾರೆ.

“ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

“ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ” ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಭಾರತೀಯ ಸಂಸ್ಕೃತಿ ಎಂದರೆ ಕೇವಲ ಒಂದು ಸಮುದಾಯದ ಸಂಸ್ಕೃತಿಯಲ್ಲ ಅಥವಾ ಒಂದು ರಾಜ್ಯದ, ಒಂದು ಧರ್ಮ, ಜಾತಿಗೆ ಸಂಬಂಧಿಸಿದ ಸಂಸ್ಕೃತಿ ಮಾತ್ರವಲ್ಲ. ಭಾರತ ಎಂದರೆ ವಿವಿಧತೆ, ಭಾರತ ಎಂದರೆ ಬಹು ಸಂಸ್ಕೃತಿ. ಆದರೆ ಇಂದಿನ ಆಳುವ ಸರ್ಕಾರಗಳು ಎಲ್ಲವನ್ನೂ ಏಕತೆಯೊಳಗೆ ಬಂಧಿಸುವ ಪ್ರಯತ್ನವನ್ನು ಮಾಡುತ್ತಿದೆ. ಇದರ ಮುಂದುವರಿದ ಭಾಗವೇ ಈ ಅಧ್ಯಯನ ಸಮಿತಿ.

ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಅವರದು ಮಾತ್ರವಲ್ಲ. ಇದು ಇಡೀ ದಕ್ಷಿಣ ಭಾರತೀಯರ ಅಸ್ಮಿತೆಯ ಪ್ರಶ್ನೆ. ಹಿಂದಿ ಹೇರಿಕೆ ಮತ್ತು ಕರ್ನಾಟಕದಲ್ಲಿನ ಸ್ಥಳಗಳಿಗೆ ಉತ್ತರ ಭಾರತದ ನಾಯಕರ ಹೆಸರಿಡುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿವೆ. ಈಗ ಈ ಅಧ್ಯಯನ ಮಾಡಿ, ಸರ್ಕಾರದಿಂದಲೇ ಅಧಿಕೃತವಾಗಿ ಕೇವಲ ಉತ್ತರ ಭಾರತದ ಸಂಸ್ಕೃತಿ ಮತ್ತು ಇತಿಹಾಸ ಮಾತ್ರ ಭಾರತದ್ದು ಎಂದು ಸಾಬೀತುಪಡಿಸಲು ಹೊರಟಿದೆ. ಈ ಮೂಲಕ ಉಳಿದ ಸ್ಥಳೀಯತೆಯ ಅಸ್ಮಿತೆಯನ್ನು ನಾಶಮಾಡಲು ಮುಂದಾಗಿರುವಂತೆ ತೋರುತ್ತಿದೆಇದರ ವಿರುದ್ಧ ಬಲವಾದ ದನಿಯೆತ್ತದ ಹೊರತು ನಾವು ನಮ್ಮತನವನ್ನು ಕಳೆದುಕೊಳ್ಳುವುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...