Homeಮುಖಪುಟಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ

- Advertisement -
- Advertisement -

ಭಾರತದ ಇತಿಹಾಸ ಸಂಸ್ಕೃತಿಯ ಹುಟ್ಟು ಮತ್ತು ವಿಕಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ ತಂಡವೊಂದನ್ನು ರಚಿಸಿದೆ. ಆದರೆ ಈ ತಂಡದಲ್ಲಿ ದಕ್ಷಿಣದ ಪರಪಂರೆಯ ಬಗ್ಗೆ ಜ್ಞಾನವಿರುವ ಕನ್ನಡಿಗರಾಗಲಿ, ಮಹಿಳೆಯರಾಗಲಿ, ದ್ರಾವಿಡರಾಗಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಭಾರತದ ಸಂಸ್ಕೃತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ರಚಿಸಿರುವ 16 ಜನರ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲವೆಂದು ಕುಮಾರಸ್ವಾಮಿ ಇಂದು ಸರಣಿ ಟ್ವೀಟ್ ಮಾಡುವುದರ ಮೂಲಕ ಆರೋಪಿಸಿದ್ದಾರೆ.

“ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

“ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ” ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಭಾರತೀಯ ಸಂಸ್ಕೃತಿ ಎಂದರೆ ಕೇವಲ ಒಂದು ಸಮುದಾಯದ ಸಂಸ್ಕೃತಿಯಲ್ಲ ಅಥವಾ ಒಂದು ರಾಜ್ಯದ, ಒಂದು ಧರ್ಮ, ಜಾತಿಗೆ ಸಂಬಂಧಿಸಿದ ಸಂಸ್ಕೃತಿ ಮಾತ್ರವಲ್ಲ. ಭಾರತ ಎಂದರೆ ವಿವಿಧತೆ, ಭಾರತ ಎಂದರೆ ಬಹು ಸಂಸ್ಕೃತಿ. ಆದರೆ ಇಂದಿನ ಆಳುವ ಸರ್ಕಾರಗಳು ಎಲ್ಲವನ್ನೂ ಏಕತೆಯೊಳಗೆ ಬಂಧಿಸುವ ಪ್ರಯತ್ನವನ್ನು ಮಾಡುತ್ತಿದೆ. ಇದರ ಮುಂದುವರಿದ ಭಾಗವೇ ಈ ಅಧ್ಯಯನ ಸಮಿತಿ.

ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಅವರದು ಮಾತ್ರವಲ್ಲ. ಇದು ಇಡೀ ದಕ್ಷಿಣ ಭಾರತೀಯರ ಅಸ್ಮಿತೆಯ ಪ್ರಶ್ನೆ. ಹಿಂದಿ ಹೇರಿಕೆ ಮತ್ತು ಕರ್ನಾಟಕದಲ್ಲಿನ ಸ್ಥಳಗಳಿಗೆ ಉತ್ತರ ಭಾರತದ ನಾಯಕರ ಹೆಸರಿಡುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿವೆ. ಈಗ ಈ ಅಧ್ಯಯನ ಮಾಡಿ, ಸರ್ಕಾರದಿಂದಲೇ ಅಧಿಕೃತವಾಗಿ ಕೇವಲ ಉತ್ತರ ಭಾರತದ ಸಂಸ್ಕೃತಿ ಮತ್ತು ಇತಿಹಾಸ ಮಾತ್ರ ಭಾರತದ್ದು ಎಂದು ಸಾಬೀತುಪಡಿಸಲು ಹೊರಟಿದೆ. ಈ ಮೂಲಕ ಉಳಿದ ಸ್ಥಳೀಯತೆಯ ಅಸ್ಮಿತೆಯನ್ನು ನಾಶಮಾಡಲು ಮುಂದಾಗಿರುವಂತೆ ತೋರುತ್ತಿದೆಇದರ ವಿರುದ್ಧ ಬಲವಾದ ದನಿಯೆತ್ತದ ಹೊರತು ನಾವು ನಮ್ಮತನವನ್ನು ಕಳೆದುಕೊಳ್ಳುವುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...