Homeಮುಖಪುಟಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ

- Advertisement -
- Advertisement -

ಭಾರತದ ಇತಿಹಾಸ ಸಂಸ್ಕೃತಿಯ ಹುಟ್ಟು ಮತ್ತು ವಿಕಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ ತಂಡವೊಂದನ್ನು ರಚಿಸಿದೆ. ಆದರೆ ಈ ತಂಡದಲ್ಲಿ ದಕ್ಷಿಣದ ಪರಪಂರೆಯ ಬಗ್ಗೆ ಜ್ಞಾನವಿರುವ ಕನ್ನಡಿಗರಾಗಲಿ, ಮಹಿಳೆಯರಾಗಲಿ, ದ್ರಾವಿಡರಾಗಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಭಾರತದ ಸಂಸ್ಕೃತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ರಚಿಸಿರುವ 16 ಜನರ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲವೆಂದು ಕುಮಾರಸ್ವಾಮಿ ಇಂದು ಸರಣಿ ಟ್ವೀಟ್ ಮಾಡುವುದರ ಮೂಲಕ ಆರೋಪಿಸಿದ್ದಾರೆ.

“ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

“ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ” ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಭಾರತೀಯ ಸಂಸ್ಕೃತಿ ಎಂದರೆ ಕೇವಲ ಒಂದು ಸಮುದಾಯದ ಸಂಸ್ಕೃತಿಯಲ್ಲ ಅಥವಾ ಒಂದು ರಾಜ್ಯದ, ಒಂದು ಧರ್ಮ, ಜಾತಿಗೆ ಸಂಬಂಧಿಸಿದ ಸಂಸ್ಕೃತಿ ಮಾತ್ರವಲ್ಲ. ಭಾರತ ಎಂದರೆ ವಿವಿಧತೆ, ಭಾರತ ಎಂದರೆ ಬಹು ಸಂಸ್ಕೃತಿ. ಆದರೆ ಇಂದಿನ ಆಳುವ ಸರ್ಕಾರಗಳು ಎಲ್ಲವನ್ನೂ ಏಕತೆಯೊಳಗೆ ಬಂಧಿಸುವ ಪ್ರಯತ್ನವನ್ನು ಮಾಡುತ್ತಿದೆ. ಇದರ ಮುಂದುವರಿದ ಭಾಗವೇ ಈ ಅಧ್ಯಯನ ಸಮಿತಿ.

ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಅವರದು ಮಾತ್ರವಲ್ಲ. ಇದು ಇಡೀ ದಕ್ಷಿಣ ಭಾರತೀಯರ ಅಸ್ಮಿತೆಯ ಪ್ರಶ್ನೆ. ಹಿಂದಿ ಹೇರಿಕೆ ಮತ್ತು ಕರ್ನಾಟಕದಲ್ಲಿನ ಸ್ಥಳಗಳಿಗೆ ಉತ್ತರ ಭಾರತದ ನಾಯಕರ ಹೆಸರಿಡುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿವೆ. ಈಗ ಈ ಅಧ್ಯಯನ ಮಾಡಿ, ಸರ್ಕಾರದಿಂದಲೇ ಅಧಿಕೃತವಾಗಿ ಕೇವಲ ಉತ್ತರ ಭಾರತದ ಸಂಸ್ಕೃತಿ ಮತ್ತು ಇತಿಹಾಸ ಮಾತ್ರ ಭಾರತದ್ದು ಎಂದು ಸಾಬೀತುಪಡಿಸಲು ಹೊರಟಿದೆ. ಈ ಮೂಲಕ ಉಳಿದ ಸ್ಥಳೀಯತೆಯ ಅಸ್ಮಿತೆಯನ್ನು ನಾಶಮಾಡಲು ಮುಂದಾಗಿರುವಂತೆ ತೋರುತ್ತಿದೆಇದರ ವಿರುದ್ಧ ಬಲವಾದ ದನಿಯೆತ್ತದ ಹೊರತು ನಾವು ನಮ್ಮತನವನ್ನು ಕಳೆದುಕೊಳ್ಳುವುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...