Homeಮುಖಪುಟಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ

- Advertisement -
- Advertisement -

ಭಾರತದ ಇತಿಹಾಸ ಸಂಸ್ಕೃತಿಯ ಹುಟ್ಟು ಮತ್ತು ವಿಕಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ ತಂಡವೊಂದನ್ನು ರಚಿಸಿದೆ. ಆದರೆ ಈ ತಂಡದಲ್ಲಿ ದಕ್ಷಿಣದ ಪರಪಂರೆಯ ಬಗ್ಗೆ ಜ್ಞಾನವಿರುವ ಕನ್ನಡಿಗರಾಗಲಿ, ಮಹಿಳೆಯರಾಗಲಿ, ದ್ರಾವಿಡರಾಗಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಭಾರತದ ಸಂಸ್ಕೃತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ರಚಿಸಿರುವ 16 ಜನರ ಸಮಿತಿಯಲ್ಲಿ ದಕ್ಷಿಣ ಭಾರತೀಯರಾರೂ ಇಲ್ಲವೆಂದು ಕುಮಾರಸ್ವಾಮಿ ಇಂದು ಸರಣಿ ಟ್ವೀಟ್ ಮಾಡುವುದರ ಮೂಲಕ ಆರೋಪಿಸಿದ್ದಾರೆ.

“ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

“ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ” ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಭಾರತೀಯ ಸಂಸ್ಕೃತಿ ಎಂದರೆ ಕೇವಲ ಒಂದು ಸಮುದಾಯದ ಸಂಸ್ಕೃತಿಯಲ್ಲ ಅಥವಾ ಒಂದು ರಾಜ್ಯದ, ಒಂದು ಧರ್ಮ, ಜಾತಿಗೆ ಸಂಬಂಧಿಸಿದ ಸಂಸ್ಕೃತಿ ಮಾತ್ರವಲ್ಲ. ಭಾರತ ಎಂದರೆ ವಿವಿಧತೆ, ಭಾರತ ಎಂದರೆ ಬಹು ಸಂಸ್ಕೃತಿ. ಆದರೆ ಇಂದಿನ ಆಳುವ ಸರ್ಕಾರಗಳು ಎಲ್ಲವನ್ನೂ ಏಕತೆಯೊಳಗೆ ಬಂಧಿಸುವ ಪ್ರಯತ್ನವನ್ನು ಮಾಡುತ್ತಿದೆ. ಇದರ ಮುಂದುವರಿದ ಭಾಗವೇ ಈ ಅಧ್ಯಯನ ಸಮಿತಿ.

ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಅವರದು ಮಾತ್ರವಲ್ಲ. ಇದು ಇಡೀ ದಕ್ಷಿಣ ಭಾರತೀಯರ ಅಸ್ಮಿತೆಯ ಪ್ರಶ್ನೆ. ಹಿಂದಿ ಹೇರಿಕೆ ಮತ್ತು ಕರ್ನಾಟಕದಲ್ಲಿನ ಸ್ಥಳಗಳಿಗೆ ಉತ್ತರ ಭಾರತದ ನಾಯಕರ ಹೆಸರಿಡುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿವೆ. ಈಗ ಈ ಅಧ್ಯಯನ ಮಾಡಿ, ಸರ್ಕಾರದಿಂದಲೇ ಅಧಿಕೃತವಾಗಿ ಕೇವಲ ಉತ್ತರ ಭಾರತದ ಸಂಸ್ಕೃತಿ ಮತ್ತು ಇತಿಹಾಸ ಮಾತ್ರ ಭಾರತದ್ದು ಎಂದು ಸಾಬೀತುಪಡಿಸಲು ಹೊರಟಿದೆ. ಈ ಮೂಲಕ ಉಳಿದ ಸ್ಥಳೀಯತೆಯ ಅಸ್ಮಿತೆಯನ್ನು ನಾಶಮಾಡಲು ಮುಂದಾಗಿರುವಂತೆ ತೋರುತ್ತಿದೆಇದರ ವಿರುದ್ಧ ಬಲವಾದ ದನಿಯೆತ್ತದ ಹೊರತು ನಾವು ನಮ್ಮತನವನ್ನು ಕಳೆದುಕೊಳ್ಳುವುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...