Homeಮುಖಪುಟನೂತನ ಚುನಾವಣಾ ಆಯುಕ್ತರ ನೇಮಕಾತಿಗೆ ತಡೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್

ನೂತನ ಚುನಾವಣಾ ಆಯುಕ್ತರ ನೇಮಕಾತಿಗೆ ತಡೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

2023ರ ಕಾನೂನಿನ ಅಡಿಯಲ್ಲಿ ನೂತನ ಚುನಾವಣಾ ಆಯುಕ್ತರ ನೇಮಕಾತಿಯನ್ನು ತಡೆಹಿಡಿಯದಿರಲು ಭಾರತದ ಸರ್ವೋಚ್ಚ ನ್ಯಾಯಾಲಯವು ನಿರ್ಧರಿಸಿದೆ. ಸದರಿ ಕಾನೂನು ಮುಖ್ಯ ನ್ಯಾಯಾಧೀಶರನ್ನು ಆಯ್ಕೆ ಪ್ರಕ್ರಿಯೆಯಿಂದ ನಿರ್ಬಂಧಿಸಿದೆ; ನ್ಯಾಯಾಲಯವು ಮಾರ್ಚ್ 21ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಶುಕ್ರವಾರ ಕಾಂಗ್ರೆಸ್ ನಾಯಕ ಜಯಾ ಠಾಕೂರ್, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿದ ರಿಟ್ ಅರ್ಜಿಗಳನ್ನು ಆಲಿಸಿತು. ಆಯ್ಕೆಯಾದ ಇಬ್ಬರು ಹೊಸ ಚುನಾವಣಾ ಆಯುಕ್ತರ ನೇಮಕಾತಿಗೆ ತಡೆ ನೀಡುವುದಿಲ್ಲ ಎಂದು ತೀರ್ಪು ನೀಡಿದೆ.

ಚುನಾವಣಾ ಆಯೋಗಗಳ ಆಯ್ಕೆಗೆ ಸಭೆಯನ್ನು ಮುಂದೂಡಲಾಗಿದೆ ಎಂದು ಸೂಚಿಸಿದ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಪೀಠವು, ವಾಸ್ತವವನ್ನು ಎತ್ತಿ ತೋರಿಸುವ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.

2023ರ ಕಾನೂನಿಗೆ ಅನುಸಾರವಾಗಿ ಮಾಡಲಾದ ನೇಮಕಾತಿಗಳನ್ನು ತಡೆಹಿಡಿಯಲು ನಿರಾಕರಿಸಿದ ಪೀಠ, ‘ಸಾಮಾನ್ಯವಾಗಿ ನಾವು ಮಧ್ಯಂತರ ಆದೇಶದ ಮೂಲಕ ಕಾನೂನಿಗೆ ತಡೆ ನೀಡುವುದಿಲ್ಲ’ ಎಂದು ಹೇಳಿದೆ. 2023ರ ಕಾನೂನಿನಡಿಯಲ್ಲಿ ಇಬ್ಬರು ಚುನಾವಣಾ ಆಯುಕ್ತರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಅದು ಮುಂದೂಡಿದೆ.

ಅರ್ಜಿದಾರ ಜಯಾ ಠಾಕೂರ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ವಿಕಾಸ್ ಸಿಂಗ್, ‘ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕಾಯಿದೆ, 2023ರಲ್ಲಿ ಸ್ಪಷ್ಟವಾದ ಉಲ್ಲಂಘನೆಯಾಗಿದೆ’ ಎಂದು ಅವರು ಪ್ರತಿಪಾದಿಸಿದರು.

ಭಾರತೀಯ ಆಡಳಿತ ಸೇವೆಯ (ಐಎಎಸ್) ಮಾಜಿ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಗುರುವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಅವರನ್ನು ಆಯ್ಕೆ ಮಾಡಿದೆ.

ಫೆಬ್ರವರಿ 14 ರಂದು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ನಂತರ ಚುನಾವಣಾ ಆಯೋಗದಲ್ಲಿ ಎರಡು ಹುದ್ದೆಗಳು ಖಾಲಿಯಾಗಿದ್ದವು.

ಇದನ್ನೂ ಓದಿ; ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಹಂಚಿಕೊಳ್ಳದ ಎಸ್‌ಬಿಐ: ಮತ್ತೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...