Homeಕರ್ನಾಟಕಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

- Advertisement -
- Advertisement -

ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ (ಜೂ.20) ಸ್ಪಷ್ಟಪಡಿಸಿದೆ.

ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್‌ ಶಾಸಕ ಹಾಗೂ ಪ್ರಜ್ವಲ್‌ ತಂದೆ ಎಚ್‌. ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಆರ್‌ ಕೃಷ್ಣ ಕುಮಾರ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ರೇವಣ್ಣ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ.ವಿ ನಾಗೇಶ್‌ ಅವರು “ರೇವಣ್ಣ ಅವರಿಗೆ ಸೀಮಿತವಾಗಿ ಈ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ. ಪ್ರಜ್ವಲ್‌ ವಿರುದ್ಧ ವಿಚಾರಣೆ ಮುಂದುವರಿಸಲು ಯಾವುದೇ ಅಡ್ಡಿಯಿಲ್ಲ” ಎಂದರು. ಇದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಧ್ವನಿಗೂಡಿಸಿದರು.

ಇದನ್ನು ಆಲಿಸಿದ ಪೀಠವು “ರೇವಣ್ಣ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಲಾಗಿದೆ. ಹೀಗಾಗಿ, ಪ್ರಜ್ವಲ್‌ ವಿರುದ್ಧ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆ ಮುಂದುವರಿಸಲು ಈ ಆದೇಶ ಅಡ್ಡಿಯಾಗದು” ಎಂದು ಸ್ಪಷ್ಟಪಡಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಗೆ ಎಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆನಂತರ ಸಂತ್ರಸ್ತೆಯ ಸಿಆರ್‌ಪಿಸಿ ಸೆಕ್ಷನ್‌ 164 ಹೇಳಿಕೆ ಆಧರಿಸಿ ಪ್ರಜ್ವಲ್‌ ವಿರುದ್ಧ ಮಾತ್ರ ಅತ್ಯಾಚಾರ ಆರೋಪ ಸೇರಿಸಿ, ಸಕ್ಷಮ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡವು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದೆ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾತ್ರ ಇದೆ. ಈ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ದೊರೆತಿದ್ದು, ಅವರ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿದೆ. ಇದೇ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ ಜಾಮೀನು ಕೋರಿದ್ದಾರೆ.

ಪ್ರಜ್ವಲ್ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ವಿಚಾರಣೆಯನ್ನು ಜೂನ್‌ 24ಕ್ಕೆ ಮುಂದೂಡಿಕೆ ಮಾಡಿದೆ.

ಸೌಜನ್ಯ : barandbench.com

ಅಮೆರಿಕ ಭೇಟಿಗೆ ಕೇಂದ್ರ ಅನುಮತಿ ನಿರಾಕರಣೆ | ಸ್ಪಷ್ಟೀಕರಣ ಕೇಳಿ ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...