Homeಮುಖಪುಟಬಿಜೆಪಿ ವಿರುದ್ಧ ಕಾಂಗ್ರೆಸ್ ಹೊರತಾದ ಒಕ್ಕೂಟದ ಪ್ರಶ್ನೆಯೇ ಇಲ್ಲ: ಶರದ್ ಪವಾರ್

ಬಿಜೆಪಿ ವಿರುದ್ಧ ಕಾಂಗ್ರೆಸ್ ಹೊರತಾದ ಒಕ್ಕೂಟದ ಪ್ರಶ್ನೆಯೇ ಇಲ್ಲ: ಶರದ್ ಪವಾರ್

- Advertisement -
- Advertisement -

ಜೂನ್ 23 ರಂದು ದೆಹಲಿಯ ಶರದ್ ಪವಾರ್ ನಿವಾಸದಲ್ಲಿ ವಿವಿಧ ರಾಜಕೀಯ ಪಕ್ಷದ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದರು. ಯಶವಂತ್ ಸಿನ್ಹಾ ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪಕ್ಷಗಳ ನಾಯಕರು ಒಟ್ಟಿಗೆ ಸೇರಿದ್ದು ದೇಶದ ರಾಜಕೀಯದಲ್ಲಿ ವಿವಿಧ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿತ್ತು. ತೃತೀಯ, ಚತುರ್ಥ ರಂಗದ ಚರ್ಚೆಯೂ ಆರಂಭವಾಗಿತ್ತು. ಕಾಂಗ್ರಸೇತರ ಮೈತ್ರಿಯ ಸಾಧ್ಯತೆಗಳನ್ನು ಶರದ್ ಪವಾರ್ ಹುಡುಕುತ್ತಿದ್ದಾರೆ ಎಂಬ ಬಲವಾದ ವಾದವೂ ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು. ರಾಜಕೀಯ ಪಡಸಾಲೆಯ ಈ ಎಲ್ಲಾ ಗುಸು ಗುಸು ಚರ್ಚೆಗಳಿಗೆ ಶರದ್ ಪವಾರ್ ತೆರೆ ಎಳೆದಿದ್ದಾರೆ.

ಜೂನ್ 23 ರಂದು ನಡೆದ ಸಭೆಯಲ್ಲಿ ತೃತೀಯ ರಂಗ ರಚನೆಯ ಯಾವುದೇ ಚರ್ಚೆ ನಡೆದಿಲ್ಲ. ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಆಯೋಜಿಸಿದ ಸಭೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಚರ್ಚೆ ನಡೆಸಿದ್ದೇವೆ. ತೃತೀಯ ರಂಗದ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟ ಪಡಿಸಿದ್ದಾರೆ.

ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತೊರೆಯುವ ಪ್ರಶ್ನೆ ಇಲ್ಲ. 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಿಬೇಕಾದರೆ ಕಾಂಗ್ರೆಸ್‌ ಸೇರಿದಂತೆ ಎಲ್ಲಾ ಪಕ್ಷಗಳು ಒಂದಾಗಬೇಕು. ಅತಿದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಭಾರತದಾದ್ಯಂತ ವಿಸ್ತರಿಸಿಕೊಂಡಿದೆ. ಯಾವುದೇ ರಾಜಕೀಯ ಒಕ್ಕೂಟವನ್ನು ರಚಿಸುವುದಾದರೆ ಕಾಂಗ್ರೆಸ್‌ ಪಕ್ಷವನ್ನು ಒಳಗೊಂಡಂತೆಯೇ ವಿರೋಧ ಪಕ್ಷಗಳ ಸಂಘಟನೆಯನ್ನು ಮಾಡಬೇಕಿದೆ ಎಂದು ಜೂನ್ 23 ರಂದು ನಡೆದ ಸಭೆಯಲ್ಲಿ ಹೇಳಿದ್ದೇನೆ ಎಂದು ಶರದ್ ಪವಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಯಾವುದೇ ಬಿರುಕು ಇಲ್ಲ.ಕೆಲವು ಭಿನ್ನಾಭಿಪ್ರಾಯಗಳನ್ನು ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿ ಪಕ್ಷದ ಮುಖಂಡರು ಒಟ್ಟಿಗೆ ಕೂತು ಚರ್ಚಿಸಿ ಬಗೆಹರಿಸಿಕೊಳ್ಳಲಿದ್ದಾರೆ ಎಂದು ಮಹರಾಷ್ಟ್ರದ ರಾಜಕೀಯ ವಿದ್ಯಮಾನಗಳ ಕುರಿತು ಶರದ್ ಪವಾರ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಶರದ್ ಪವಾರ್ ನಿವಾಸದಲ್ಲಿ ನಡೆದ ಸಭೆಯ ಕುರಿತು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದು ಕಾಂಗ್ರೆಸ್‌ ಇಲ್ಲದೇ ವಿರೋಧ ಪಕ್ಷಗಳ ಒಕ್ಕೂಟ ಪೂರ್ಣವಾಗುವುದಿಲ್ಲ. ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟಿಗೆ ತರುವ ಪ್ರಯತ್ನ ಚಾಲ್ತಿಯಲ್ಲಿದೆ. ಕಾಂಗ್ರೆಸ್‌ ಕೂಡ ಈ ಪ್ರಯತನ್ನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಕಾಂಗ್ರೆಸ್‌ ಸಹಿತ ಒಕ್ಕೂಟದಿಂದ ಮಾತ್ರ ಪ್ರಸಕ್ತ ದೇಶವನ್ನು ಆಳುತ್ತಿರುವ ಶಕ್ತಿಯ ವಿರುದ್ಧ ಹೋರಾಡಲು ಸಾಧ್ಯ ಎಂದು ಹೇಳಿದ್ದಾರೆ.

ಶಿವಸೇನೆಯ ಮುಖವಾಣಿ ಸಾಮ್ನಾ ಕೂಡ ಇದೇ ರಿತಿಯ ಭಾವನೆಯನ್ನು ವ್ಯಕ್ತಪಡಿಸಿದೆ.


ಇದನ್ನೂ ಓದಿ : ಕೋವಿಡ್‌ ಬಿಕ್ಕಟ್ಟಿನಿಂದ ಮಕ್ಕಳ ಕಲಿಕೆಗೆ ಅಡ್ಡಿ: ಪರಿಹಾರದ ಮಾರ್ಗಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...