Homeಮುಖಪುಟಬಿಜೆಪಿ ವಿರುದ್ಧ ಕಾಂಗ್ರೆಸ್ ಹೊರತಾದ ಒಕ್ಕೂಟದ ಪ್ರಶ್ನೆಯೇ ಇಲ್ಲ: ಶರದ್ ಪವಾರ್

ಬಿಜೆಪಿ ವಿರುದ್ಧ ಕಾಂಗ್ರೆಸ್ ಹೊರತಾದ ಒಕ್ಕೂಟದ ಪ್ರಶ್ನೆಯೇ ಇಲ್ಲ: ಶರದ್ ಪವಾರ್

- Advertisement -
- Advertisement -

ಜೂನ್ 23 ರಂದು ದೆಹಲಿಯ ಶರದ್ ಪವಾರ್ ನಿವಾಸದಲ್ಲಿ ವಿವಿಧ ರಾಜಕೀಯ ಪಕ್ಷದ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದರು. ಯಶವಂತ್ ಸಿನ್ಹಾ ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪಕ್ಷಗಳ ನಾಯಕರು ಒಟ್ಟಿಗೆ ಸೇರಿದ್ದು ದೇಶದ ರಾಜಕೀಯದಲ್ಲಿ ವಿವಿಧ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿತ್ತು. ತೃತೀಯ, ಚತುರ್ಥ ರಂಗದ ಚರ್ಚೆಯೂ ಆರಂಭವಾಗಿತ್ತು. ಕಾಂಗ್ರಸೇತರ ಮೈತ್ರಿಯ ಸಾಧ್ಯತೆಗಳನ್ನು ಶರದ್ ಪವಾರ್ ಹುಡುಕುತ್ತಿದ್ದಾರೆ ಎಂಬ ಬಲವಾದ ವಾದವೂ ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು. ರಾಜಕೀಯ ಪಡಸಾಲೆಯ ಈ ಎಲ್ಲಾ ಗುಸು ಗುಸು ಚರ್ಚೆಗಳಿಗೆ ಶರದ್ ಪವಾರ್ ತೆರೆ ಎಳೆದಿದ್ದಾರೆ.

ಜೂನ್ 23 ರಂದು ನಡೆದ ಸಭೆಯಲ್ಲಿ ತೃತೀಯ ರಂಗ ರಚನೆಯ ಯಾವುದೇ ಚರ್ಚೆ ನಡೆದಿಲ್ಲ. ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಆಯೋಜಿಸಿದ ಸಭೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಚರ್ಚೆ ನಡೆಸಿದ್ದೇವೆ. ತೃತೀಯ ರಂಗದ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟ ಪಡಿಸಿದ್ದಾರೆ.

ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತೊರೆಯುವ ಪ್ರಶ್ನೆ ಇಲ್ಲ. 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಿಬೇಕಾದರೆ ಕಾಂಗ್ರೆಸ್‌ ಸೇರಿದಂತೆ ಎಲ್ಲಾ ಪಕ್ಷಗಳು ಒಂದಾಗಬೇಕು. ಅತಿದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಭಾರತದಾದ್ಯಂತ ವಿಸ್ತರಿಸಿಕೊಂಡಿದೆ. ಯಾವುದೇ ರಾಜಕೀಯ ಒಕ್ಕೂಟವನ್ನು ರಚಿಸುವುದಾದರೆ ಕಾಂಗ್ರೆಸ್‌ ಪಕ್ಷವನ್ನು ಒಳಗೊಂಡಂತೆಯೇ ವಿರೋಧ ಪಕ್ಷಗಳ ಸಂಘಟನೆಯನ್ನು ಮಾಡಬೇಕಿದೆ ಎಂದು ಜೂನ್ 23 ರಂದು ನಡೆದ ಸಭೆಯಲ್ಲಿ ಹೇಳಿದ್ದೇನೆ ಎಂದು ಶರದ್ ಪವಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಯಾವುದೇ ಬಿರುಕು ಇಲ್ಲ.ಕೆಲವು ಭಿನ್ನಾಭಿಪ್ರಾಯಗಳನ್ನು ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿ ಪಕ್ಷದ ಮುಖಂಡರು ಒಟ್ಟಿಗೆ ಕೂತು ಚರ್ಚಿಸಿ ಬಗೆಹರಿಸಿಕೊಳ್ಳಲಿದ್ದಾರೆ ಎಂದು ಮಹರಾಷ್ಟ್ರದ ರಾಜಕೀಯ ವಿದ್ಯಮಾನಗಳ ಕುರಿತು ಶರದ್ ಪವಾರ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಶರದ್ ಪವಾರ್ ನಿವಾಸದಲ್ಲಿ ನಡೆದ ಸಭೆಯ ಕುರಿತು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದು ಕಾಂಗ್ರೆಸ್‌ ಇಲ್ಲದೇ ವಿರೋಧ ಪಕ್ಷಗಳ ಒಕ್ಕೂಟ ಪೂರ್ಣವಾಗುವುದಿಲ್ಲ. ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟಿಗೆ ತರುವ ಪ್ರಯತ್ನ ಚಾಲ್ತಿಯಲ್ಲಿದೆ. ಕಾಂಗ್ರೆಸ್‌ ಕೂಡ ಈ ಪ್ರಯತನ್ನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಕಾಂಗ್ರೆಸ್‌ ಸಹಿತ ಒಕ್ಕೂಟದಿಂದ ಮಾತ್ರ ಪ್ರಸಕ್ತ ದೇಶವನ್ನು ಆಳುತ್ತಿರುವ ಶಕ್ತಿಯ ವಿರುದ್ಧ ಹೋರಾಡಲು ಸಾಧ್ಯ ಎಂದು ಹೇಳಿದ್ದಾರೆ.

ಶಿವಸೇನೆಯ ಮುಖವಾಣಿ ಸಾಮ್ನಾ ಕೂಡ ಇದೇ ರಿತಿಯ ಭಾವನೆಯನ್ನು ವ್ಯಕ್ತಪಡಿಸಿದೆ.


ಇದನ್ನೂ ಓದಿ : ಕೋವಿಡ್‌ ಬಿಕ್ಕಟ್ಟಿನಿಂದ ಮಕ್ಕಳ ಕಲಿಕೆಗೆ ಅಡ್ಡಿ: ಪರಿಹಾರದ ಮಾರ್ಗಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...