Homeಕರೋನಾ ತಲ್ಲಣಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೋನಾ ಲಸಿಕೆಯ ಹಾಹಾಕಾರ ಮುಂದುವರೆದಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳ ಮುಂದೆ ಪ್ರತಿನಿತ್ಯ ಜನ ಸಂದಣಿ ಕಂಡು ಬರುತ್ತಿದೆ. ರಾಜ್ಯ ಸರ್ಕಾರಗಳು ಕೇಂದ್ರದಿಂದ ತಮಗೆ ನೀಡುತ್ತಿರುವ ಲಸಿಕೆ ಯಾವ ಮೂಲೆಗೂ ಸಾಲುವುದಿಲ್ಲ ಎಂದು ಹೇಳುತ್ತಿವೆ. ಕೆಲವು ಕಡೆಯಲ್ಲಿ ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್‌ ಬಹುತೇಕರಿಗೆ (45 ವರ್ಷ ಮೇಲ್ಪಟ್ಟವರಿಗೆ) ನೀಡಲು ಇದುವರೆಗೆ ರಾಜ್ಯ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಎಲ್ಲೆಲ್ಲೂ ಲಸಿಕಾ ಕೇಂದ್ರಗಳು ಬೆಳಗಿನ ಅವಧಿಯಲ್ಲಿಯೇ ನೋ ಸ್ಟಾಕ್‌ ಬೋರ್ಡ್‌ ಹಾಕಿಕೊಂಡು ಜನರನ್ನು ವಾಪಸ್‌ ಕಳುಹಿಸುತ್ತಿರುವ ಘಟನೆ ಕೂಡ ನಡೆದಿದೆ. ಆದರೆ ದೇಶದಲ್ಲಿನ ಕೋವಿಡ್‌ ಲಸಿಕೆ ಹಾಹಾಕಾರದ ನಡುವೆ ಖಾಸಗಿ ಆಸ್ಪತ್ರೆಗಳು ಎಗ್ಗಿಲ್ಲದಂತೆ ಲಸಿಕೆ ವ್ಯಾಪಾರವನ್ನು ಮುಂದುವರೆಸಿವೆ. 900 ರೂ. ಗಳಿಂದ 2000 ರೂಗಳ ಮೊತ್ತದಲ್ಲಿ ರಾಜಾರೋಷವಾಗಿ ಲಸಿಕೆಗಳ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ಜೊತೆಗೆ ಪ್ರತಿಷ್ಠಿತ ಐಷಾರಾಮಿ ಹೊಟೇಲ್‌ ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್‌ಗಳನ್ನು ಘೋಷಿಸುತ್ತಿವೆ. ಐಷಾರಾಮಿ ಹೊಟೇಲ್‌ ಗಳ ತಮ್ಮಲ್ಲಿನ ಬ್ರೇಕ್‌ ಫಾಸ್ಟ್‌, ಏಸಿ, ಮನರಂಜನೆ ಮುಂತಾದ ಸೌಲಭ್ಯಗಳ ಜೊತೆಗೆ ಕೊರೋನಾ ಲಸಿಕೆಗಳನ್ನು ನೀಡುವುದಾಗಿ ಹೇಳಿ ಗ್ರಾಹಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದವು. ಈ ಹೊಟೇಲ್‌ ಗಳ ಜೊತೆ ಖಾಸಗಿ ಆಸ್ಪತ್ರೆಗಳೂ ಶಾಮೀಲಾಗಿ ದೊಡ್ಡ ದೊಡ್ಡ ಹೊಟೇಲ್‌ ಗಳಲ್ಲಿ ತಂಗುವ ಗ್ರಾಹಕರಿಗೆ ತಮ್ಮ ವೈದ್ಯರು ಮತ್ತು ಸಿಬ್ಬಂದಿಯ ಮೂಲಕ ವಾಕ್ಸಿನೇಶನ್‌ ನಡೆಸುತ್ತಿದ್ದರು. ಈ ಕುರಿತು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಐಷಾರಾಮಿ ಹೊಟೇಲ್‌ ಗಳಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಲಸಿಕೆಗಳನ್ನು ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಆರೋಗ್ಯ ಇಲಾಖೆ, “ವಿಶ್ವದ ಅತಿದೊಡ್ಡ ವ್ಯಾಕ್ಸಿನ್‌ ಡ್ರೈವ್‌ ಭಾರತದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯ ಸರ್ಕಾರಗಳು ವ್ಯಾಕ್ಸಿನೇಷನ್‌ ಕುರಿತು ತೀವ್ರ ಎಚ್ಚರಿಕೆ ವಹಿಸಬೇಕು. ಕೆಲವು ಕಡೆ ವ್ಯಾಕ್ಸೀನೇಷನ್‌ ಪ್ರಕ್ರಿಯೆಯ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಿದೆ. ವ್ಯಾಕ್ಸಿನೇಷನ್‌ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳು ಉಲ್ಳಂಘನೆಯಾಗದಂತೆ ನೋಡಿಕೊಂಡು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ಜನರಿಗೆ ಲಸಿಕೆಗಳನ್ನು ನೀಡಬೇಕೆಂದು” ಎಚ್ಚರಿಕೆ ನೀಡಿದೆ.

ಕೇಂದ್ರ ಆರೋಗ್ಯ ಮಾರ್ಗಸೂಚಿಯ ಅನ್ವಯ ಇನ್ನು ಮುಂದೆ ಖಾಸಗಿ ಹೊಟೇಲ್‌ಗಳಲ್ಲಿ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ. ಕೇಂದ್ರ ಆರೋಗ್ಯ ಇಲಾಖೆಯು ಸರ್ಕಾರಿ ಮತ್ತು ಪರವಾನಗಿಯನ್ನು ಹೊಂದಿದ ಖಾಸಗಿ ವ್ಯಾಕ್ಸಿನೇಷನ್‌ ಸೆಂಟರ್‌ಗಳು, ಇತರ ಕಚೇರಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವ ಸ್ಥಳಗಳು, ವೃದ್ಧರು ಮತ್ತು ಅಂಗವಿಕಲರಿಗಾಗಿ ವಸತಿ ಸಮುಚ್ಛಯಗಳ ಸಮೀಪ ಅಥವಾ ಹೌಸಿಂಗ್‌ ಸೊಸೈಟಿಗಳಲ್ಲಿ, ಸಮುದಾಯ ಭವನಗಳು, ಪಂಚಾಯತ ಭವನಗಳು, ಶಾಲೆ-ಕಾಲೇಜುಗಳು ಮತ್ತು ವೃದ್ಧಾಶ್ರಮಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ವ್ಯಾಕ್ಸಿನೇಷನ್‌ ಸೌಲಭ್ಯಗಳನ್ನು ಕಲ್ಪಿಸಬಹುದಾಗಿದೆ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸೂಚಿಸಿದೆ.

ದೆಹಲಿ ಉಪಮುಖ್ಯ ಮಂತ್ರಿ ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ವ್ಯಾಕ್ಸಿನೇಷನ್‌ ವಿಚಾರವಾಗಿ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಗೆ ಅಗತ್ಯವಾದ ವ್ಯಾಕ್ಸಿನ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಹೇಗೆ ವ್ಯಾಕ್ಸಿನ್‌ ಗಳನ್ನು ನೀಡುತ್ತಿವೆ ? ಕೇಂದ್ರದ ಬಳಿ ವ್ಯಾಕ್ಸಿನ್‌ ಪೂರೈಕೆ ಇಲ್ಲವೆಂದಾದರೆ ಖಾಸಗಿಯವರಿಗೆ ವ್ಯಾಕ್ಸಿನ್‌ ಎಲ್ಲಿಂದ ಸರಬರಾಜಾಗುತ್ತಿದೆ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ. ವ್ಯಾಕ್ಸಿನ್‌ ಕೊರತೆಯಿಂದಾಗಿ 18-44 ವಯಸ್ಸಿನ ಸಮುದಾಯಕ್ಕೆ ವ್ಯಾಕ್ಸಿನ್‌ ನೀಡುವ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತಾಗಿದೆ. ದೆಹಲಿ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್‌ ನೀಡಲು ಪ್ರಯತ್ನಿಸುತ್ತಿದೆ. ನಡುವೆ ಖಾಸಗಿಯವರು 1000 ರೂಪಾಯಿಗಳಿಗೆ ಒಂದು ಡೋಸ್‌ ವ್ಯಾಕ್ಸಿನ್‌ ಮಾರಿಕೊಳ್ಳುತ್ತಿದ್ದಾರೆ ಎಂದು ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದೇಶದ ದೊಡ್ಡ ಹೊಟೇಲುಗಳು “ಲಸಿಕೆ ಪ್ಯಾಕೇಜ್” ಆರಂಭಿಸಿದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಆರಂಭ ಆದ ಬೆನ್ನಿಗೇ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿ, ಇಂತಹದಕ್ಕೆಲ್ಲ ಅವಕಾಶ ಇಲ್ಲ ಎಂದಿದೆ. ಆರೋಗ್ಯದ ವಿಷಯದಲ್ಲೇ “ಕಾರ್ಪೋರೇಟ್” ಶಕ್ತಿಗಳು ಇಷ್ಟು ಆಡಬಲ್ಲವೆಂದಾದರೆ ನಾಳೆ ಕೃಷಿ “ಕಾರ್ಪೋರೇಟೀಕರಣ” ಆಗೋದಿಲ್ಲ ಅಂತ ಯಾವ ಬಾಯಲ್ಲಿ ಹೇಳ್ತೀರಿ? ಎಂದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಪಶ್ನಿಸಿದ್ದಾರೆ.

ಆರೋಗ್ಯ ಇಲಾಖೆಯು 2021 ಡಿಸೆಂಬರ್‌ ವೇಳೆಗೆ 108 ಕೋಟಿ ಭಾರತೀಯರಿಗೆ 216 ಕೋಟಿ ಡೋಸ್‌ ಕೋವಿಡ್‌ ವ್ಯಾಕ್ಸಿನ್‌ ನೀಡುವ ಗುರಿಯನ್ನು ಹಾಕಿಕೊಂಡಿದೆ. ಇದುವರೆಗೆ 20 ಕೋಟಿ ವ್ಯಾಕ್ಸಿನ್‌ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕುಂಟುತ್ತ ಸಾಗುತ್ತಿರುವ ವ್ಯಾಕ್ಸಿನೇಷನ್‌ ಪ್ರಕ್ರಿಯೆಯನ್ನು ಗಮನಿಸಿದರೆ ಕೆಂದ್ರ ಸರ್ಕಾರ ಹೇಳಿರುವಂತೆ 2021 ಡಿಸೆಂಬರ್‌ ವೇಳಗೆ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಅಂತ್ಯವಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ನಡುವೆ ಕೋವಿಡ್‌ ಮೂರನೆಯ ಅಲೆಯ ಭೀತಿಯೂ ಹೆಚ್ಚುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಲಸಿಗೆಗಳ ಕೊರತೆಯನ್ನೇ ಬಂಡವಾಳ ಮಾಡಿಕೊಂಡು ವಿವಿಧ ಪ್ಯಾಕೇಜ್‌ ಗಳನ್ನು ವಿವಿಧ ಆಕರ್ಷಕ ಆಫರ್‌ ಗಳ ಜಾಹೀರಾತನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಹೊಟೇಲ್‌ ಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ನಿಷೇಧಿಸಿರುವುದನ್ನು ರಾಜ್ಯಗಳು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ತರುತ್ತವೆ ಎಂಬುದನ್ನು ಕಾದುನೋಡಬೇಕು. ಸದ್ಯಕ್ಕೆ ಲಸಿಕೆಯ ಪೂರೈಕೆ ಮತ್ತು ಖಾಸಗಿಯವರ ಲಸಿಕೆ ದಂದೆಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ; ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...