Homeಕರೋನಾ ತಲ್ಲಣಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೋನಾ ಲಸಿಕೆಯ ಹಾಹಾಕಾರ ಮುಂದುವರೆದಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳ ಮುಂದೆ ಪ್ರತಿನಿತ್ಯ ಜನ ಸಂದಣಿ ಕಂಡು ಬರುತ್ತಿದೆ. ರಾಜ್ಯ ಸರ್ಕಾರಗಳು ಕೇಂದ್ರದಿಂದ ತಮಗೆ ನೀಡುತ್ತಿರುವ ಲಸಿಕೆ ಯಾವ ಮೂಲೆಗೂ ಸಾಲುವುದಿಲ್ಲ ಎಂದು ಹೇಳುತ್ತಿವೆ. ಕೆಲವು ಕಡೆಯಲ್ಲಿ ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್‌ ಬಹುತೇಕರಿಗೆ (45 ವರ್ಷ ಮೇಲ್ಪಟ್ಟವರಿಗೆ) ನೀಡಲು ಇದುವರೆಗೆ ರಾಜ್ಯ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಎಲ್ಲೆಲ್ಲೂ ಲಸಿಕಾ ಕೇಂದ್ರಗಳು ಬೆಳಗಿನ ಅವಧಿಯಲ್ಲಿಯೇ ನೋ ಸ್ಟಾಕ್‌ ಬೋರ್ಡ್‌ ಹಾಕಿಕೊಂಡು ಜನರನ್ನು ವಾಪಸ್‌ ಕಳುಹಿಸುತ್ತಿರುವ ಘಟನೆ ಕೂಡ ನಡೆದಿದೆ. ಆದರೆ ದೇಶದಲ್ಲಿನ ಕೋವಿಡ್‌ ಲಸಿಕೆ ಹಾಹಾಕಾರದ ನಡುವೆ ಖಾಸಗಿ ಆಸ್ಪತ್ರೆಗಳು ಎಗ್ಗಿಲ್ಲದಂತೆ ಲಸಿಕೆ ವ್ಯಾಪಾರವನ್ನು ಮುಂದುವರೆಸಿವೆ. 900 ರೂ. ಗಳಿಂದ 2000 ರೂಗಳ ಮೊತ್ತದಲ್ಲಿ ರಾಜಾರೋಷವಾಗಿ ಲಸಿಕೆಗಳ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ಜೊತೆಗೆ ಪ್ರತಿಷ್ಠಿತ ಐಷಾರಾಮಿ ಹೊಟೇಲ್‌ ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್‌ಗಳನ್ನು ಘೋಷಿಸುತ್ತಿವೆ. ಐಷಾರಾಮಿ ಹೊಟೇಲ್‌ ಗಳ ತಮ್ಮಲ್ಲಿನ ಬ್ರೇಕ್‌ ಫಾಸ್ಟ್‌, ಏಸಿ, ಮನರಂಜನೆ ಮುಂತಾದ ಸೌಲಭ್ಯಗಳ ಜೊತೆಗೆ ಕೊರೋನಾ ಲಸಿಕೆಗಳನ್ನು ನೀಡುವುದಾಗಿ ಹೇಳಿ ಗ್ರಾಹಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದವು. ಈ ಹೊಟೇಲ್‌ ಗಳ ಜೊತೆ ಖಾಸಗಿ ಆಸ್ಪತ್ರೆಗಳೂ ಶಾಮೀಲಾಗಿ ದೊಡ್ಡ ದೊಡ್ಡ ಹೊಟೇಲ್‌ ಗಳಲ್ಲಿ ತಂಗುವ ಗ್ರಾಹಕರಿಗೆ ತಮ್ಮ ವೈದ್ಯರು ಮತ್ತು ಸಿಬ್ಬಂದಿಯ ಮೂಲಕ ವಾಕ್ಸಿನೇಶನ್‌ ನಡೆಸುತ್ತಿದ್ದರು. ಈ ಕುರಿತು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಐಷಾರಾಮಿ ಹೊಟೇಲ್‌ ಗಳಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಲಸಿಕೆಗಳನ್ನು ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಆರೋಗ್ಯ ಇಲಾಖೆ, “ವಿಶ್ವದ ಅತಿದೊಡ್ಡ ವ್ಯಾಕ್ಸಿನ್‌ ಡ್ರೈವ್‌ ಭಾರತದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯ ಸರ್ಕಾರಗಳು ವ್ಯಾಕ್ಸಿನೇಷನ್‌ ಕುರಿತು ತೀವ್ರ ಎಚ್ಚರಿಕೆ ವಹಿಸಬೇಕು. ಕೆಲವು ಕಡೆ ವ್ಯಾಕ್ಸೀನೇಷನ್‌ ಪ್ರಕ್ರಿಯೆಯ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಿದೆ. ವ್ಯಾಕ್ಸಿನೇಷನ್‌ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳು ಉಲ್ಳಂಘನೆಯಾಗದಂತೆ ನೋಡಿಕೊಂಡು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ಜನರಿಗೆ ಲಸಿಕೆಗಳನ್ನು ನೀಡಬೇಕೆಂದು” ಎಚ್ಚರಿಕೆ ನೀಡಿದೆ.

ಕೇಂದ್ರ ಆರೋಗ್ಯ ಮಾರ್ಗಸೂಚಿಯ ಅನ್ವಯ ಇನ್ನು ಮುಂದೆ ಖಾಸಗಿ ಹೊಟೇಲ್‌ಗಳಲ್ಲಿ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ. ಕೇಂದ್ರ ಆರೋಗ್ಯ ಇಲಾಖೆಯು ಸರ್ಕಾರಿ ಮತ್ತು ಪರವಾನಗಿಯನ್ನು ಹೊಂದಿದ ಖಾಸಗಿ ವ್ಯಾಕ್ಸಿನೇಷನ್‌ ಸೆಂಟರ್‌ಗಳು, ಇತರ ಕಚೇರಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವ ಸ್ಥಳಗಳು, ವೃದ್ಧರು ಮತ್ತು ಅಂಗವಿಕಲರಿಗಾಗಿ ವಸತಿ ಸಮುಚ್ಛಯಗಳ ಸಮೀಪ ಅಥವಾ ಹೌಸಿಂಗ್‌ ಸೊಸೈಟಿಗಳಲ್ಲಿ, ಸಮುದಾಯ ಭವನಗಳು, ಪಂಚಾಯತ ಭವನಗಳು, ಶಾಲೆ-ಕಾಲೇಜುಗಳು ಮತ್ತು ವೃದ್ಧಾಶ್ರಮಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ವ್ಯಾಕ್ಸಿನೇಷನ್‌ ಸೌಲಭ್ಯಗಳನ್ನು ಕಲ್ಪಿಸಬಹುದಾಗಿದೆ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸೂಚಿಸಿದೆ.

ದೆಹಲಿ ಉಪಮುಖ್ಯ ಮಂತ್ರಿ ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ವ್ಯಾಕ್ಸಿನೇಷನ್‌ ವಿಚಾರವಾಗಿ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಗೆ ಅಗತ್ಯವಾದ ವ್ಯಾಕ್ಸಿನ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಹೇಗೆ ವ್ಯಾಕ್ಸಿನ್‌ ಗಳನ್ನು ನೀಡುತ್ತಿವೆ ? ಕೇಂದ್ರದ ಬಳಿ ವ್ಯಾಕ್ಸಿನ್‌ ಪೂರೈಕೆ ಇಲ್ಲವೆಂದಾದರೆ ಖಾಸಗಿಯವರಿಗೆ ವ್ಯಾಕ್ಸಿನ್‌ ಎಲ್ಲಿಂದ ಸರಬರಾಜಾಗುತ್ತಿದೆ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ. ವ್ಯಾಕ್ಸಿನ್‌ ಕೊರತೆಯಿಂದಾಗಿ 18-44 ವಯಸ್ಸಿನ ಸಮುದಾಯಕ್ಕೆ ವ್ಯಾಕ್ಸಿನ್‌ ನೀಡುವ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತಾಗಿದೆ. ದೆಹಲಿ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್‌ ನೀಡಲು ಪ್ರಯತ್ನಿಸುತ್ತಿದೆ. ನಡುವೆ ಖಾಸಗಿಯವರು 1000 ರೂಪಾಯಿಗಳಿಗೆ ಒಂದು ಡೋಸ್‌ ವ್ಯಾಕ್ಸಿನ್‌ ಮಾರಿಕೊಳ್ಳುತ್ತಿದ್ದಾರೆ ಎಂದು ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದೇಶದ ದೊಡ್ಡ ಹೊಟೇಲುಗಳು “ಲಸಿಕೆ ಪ್ಯಾಕೇಜ್” ಆರಂಭಿಸಿದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಆರಂಭ ಆದ ಬೆನ್ನಿಗೇ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿ, ಇಂತಹದಕ್ಕೆಲ್ಲ ಅವಕಾಶ ಇಲ್ಲ ಎಂದಿದೆ. ಆರೋಗ್ಯದ ವಿಷಯದಲ್ಲೇ “ಕಾರ್ಪೋರೇಟ್” ಶಕ್ತಿಗಳು ಇಷ್ಟು ಆಡಬಲ್ಲವೆಂದಾದರೆ ನಾಳೆ ಕೃಷಿ “ಕಾರ್ಪೋರೇಟೀಕರಣ” ಆಗೋದಿಲ್ಲ ಅಂತ ಯಾವ ಬಾಯಲ್ಲಿ ಹೇಳ್ತೀರಿ? ಎಂದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಪಶ್ನಿಸಿದ್ದಾರೆ.

ಆರೋಗ್ಯ ಇಲಾಖೆಯು 2021 ಡಿಸೆಂಬರ್‌ ವೇಳೆಗೆ 108 ಕೋಟಿ ಭಾರತೀಯರಿಗೆ 216 ಕೋಟಿ ಡೋಸ್‌ ಕೋವಿಡ್‌ ವ್ಯಾಕ್ಸಿನ್‌ ನೀಡುವ ಗುರಿಯನ್ನು ಹಾಕಿಕೊಂಡಿದೆ. ಇದುವರೆಗೆ 20 ಕೋಟಿ ವ್ಯಾಕ್ಸಿನ್‌ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕುಂಟುತ್ತ ಸಾಗುತ್ತಿರುವ ವ್ಯಾಕ್ಸಿನೇಷನ್‌ ಪ್ರಕ್ರಿಯೆಯನ್ನು ಗಮನಿಸಿದರೆ ಕೆಂದ್ರ ಸರ್ಕಾರ ಹೇಳಿರುವಂತೆ 2021 ಡಿಸೆಂಬರ್‌ ವೇಳಗೆ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಅಂತ್ಯವಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ನಡುವೆ ಕೋವಿಡ್‌ ಮೂರನೆಯ ಅಲೆಯ ಭೀತಿಯೂ ಹೆಚ್ಚುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಲಸಿಗೆಗಳ ಕೊರತೆಯನ್ನೇ ಬಂಡವಾಳ ಮಾಡಿಕೊಂಡು ವಿವಿಧ ಪ್ಯಾಕೇಜ್‌ ಗಳನ್ನು ವಿವಿಧ ಆಕರ್ಷಕ ಆಫರ್‌ ಗಳ ಜಾಹೀರಾತನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಹೊಟೇಲ್‌ ಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ನಿಷೇಧಿಸಿರುವುದನ್ನು ರಾಜ್ಯಗಳು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ತರುತ್ತವೆ ಎಂಬುದನ್ನು ಕಾದುನೋಡಬೇಕು. ಸದ್ಯಕ್ಕೆ ಲಸಿಕೆಯ ಪೂರೈಕೆ ಮತ್ತು ಖಾಸಗಿಯವರ ಲಸಿಕೆ ದಂದೆಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ; ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...