Homeಕರೋನಾ ತಲ್ಲಣಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೋನಾ ಲಸಿಕೆಯ ಹಾಹಾಕಾರ ಮುಂದುವರೆದಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳ ಮುಂದೆ ಪ್ರತಿನಿತ್ಯ ಜನ ಸಂದಣಿ ಕಂಡು ಬರುತ್ತಿದೆ. ರಾಜ್ಯ ಸರ್ಕಾರಗಳು ಕೇಂದ್ರದಿಂದ ತಮಗೆ ನೀಡುತ್ತಿರುವ ಲಸಿಕೆ ಯಾವ ಮೂಲೆಗೂ ಸಾಲುವುದಿಲ್ಲ ಎಂದು ಹೇಳುತ್ತಿವೆ. ಕೆಲವು ಕಡೆಯಲ್ಲಿ ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್‌ ಬಹುತೇಕರಿಗೆ (45 ವರ್ಷ ಮೇಲ್ಪಟ್ಟವರಿಗೆ) ನೀಡಲು ಇದುವರೆಗೆ ರಾಜ್ಯ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಎಲ್ಲೆಲ್ಲೂ ಲಸಿಕಾ ಕೇಂದ್ರಗಳು ಬೆಳಗಿನ ಅವಧಿಯಲ್ಲಿಯೇ ನೋ ಸ್ಟಾಕ್‌ ಬೋರ್ಡ್‌ ಹಾಕಿಕೊಂಡು ಜನರನ್ನು ವಾಪಸ್‌ ಕಳುಹಿಸುತ್ತಿರುವ ಘಟನೆ ಕೂಡ ನಡೆದಿದೆ. ಆದರೆ ದೇಶದಲ್ಲಿನ ಕೋವಿಡ್‌ ಲಸಿಕೆ ಹಾಹಾಕಾರದ ನಡುವೆ ಖಾಸಗಿ ಆಸ್ಪತ್ರೆಗಳು ಎಗ್ಗಿಲ್ಲದಂತೆ ಲಸಿಕೆ ವ್ಯಾಪಾರವನ್ನು ಮುಂದುವರೆಸಿವೆ. 900 ರೂ. ಗಳಿಂದ 2000 ರೂಗಳ ಮೊತ್ತದಲ್ಲಿ ರಾಜಾರೋಷವಾಗಿ ಲಸಿಕೆಗಳ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ಜೊತೆಗೆ ಪ್ರತಿಷ್ಠಿತ ಐಷಾರಾಮಿ ಹೊಟೇಲ್‌ ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್‌ಗಳನ್ನು ಘೋಷಿಸುತ್ತಿವೆ. ಐಷಾರಾಮಿ ಹೊಟೇಲ್‌ ಗಳ ತಮ್ಮಲ್ಲಿನ ಬ್ರೇಕ್‌ ಫಾಸ್ಟ್‌, ಏಸಿ, ಮನರಂಜನೆ ಮುಂತಾದ ಸೌಲಭ್ಯಗಳ ಜೊತೆಗೆ ಕೊರೋನಾ ಲಸಿಕೆಗಳನ್ನು ನೀಡುವುದಾಗಿ ಹೇಳಿ ಗ್ರಾಹಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದವು. ಈ ಹೊಟೇಲ್‌ ಗಳ ಜೊತೆ ಖಾಸಗಿ ಆಸ್ಪತ್ರೆಗಳೂ ಶಾಮೀಲಾಗಿ ದೊಡ್ಡ ದೊಡ್ಡ ಹೊಟೇಲ್‌ ಗಳಲ್ಲಿ ತಂಗುವ ಗ್ರಾಹಕರಿಗೆ ತಮ್ಮ ವೈದ್ಯರು ಮತ್ತು ಸಿಬ್ಬಂದಿಯ ಮೂಲಕ ವಾಕ್ಸಿನೇಶನ್‌ ನಡೆಸುತ್ತಿದ್ದರು. ಈ ಕುರಿತು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಐಷಾರಾಮಿ ಹೊಟೇಲ್‌ ಗಳಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಲಸಿಕೆಗಳನ್ನು ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಆರೋಗ್ಯ ಇಲಾಖೆ, “ವಿಶ್ವದ ಅತಿದೊಡ್ಡ ವ್ಯಾಕ್ಸಿನ್‌ ಡ್ರೈವ್‌ ಭಾರತದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯ ಸರ್ಕಾರಗಳು ವ್ಯಾಕ್ಸಿನೇಷನ್‌ ಕುರಿತು ತೀವ್ರ ಎಚ್ಚರಿಕೆ ವಹಿಸಬೇಕು. ಕೆಲವು ಕಡೆ ವ್ಯಾಕ್ಸೀನೇಷನ್‌ ಪ್ರಕ್ರಿಯೆಯ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಿದೆ. ವ್ಯಾಕ್ಸಿನೇಷನ್‌ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳು ಉಲ್ಳಂಘನೆಯಾಗದಂತೆ ನೋಡಿಕೊಂಡು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ಜನರಿಗೆ ಲಸಿಕೆಗಳನ್ನು ನೀಡಬೇಕೆಂದು” ಎಚ್ಚರಿಕೆ ನೀಡಿದೆ.

ಕೇಂದ್ರ ಆರೋಗ್ಯ ಮಾರ್ಗಸೂಚಿಯ ಅನ್ವಯ ಇನ್ನು ಮುಂದೆ ಖಾಸಗಿ ಹೊಟೇಲ್‌ಗಳಲ್ಲಿ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ. ಕೇಂದ್ರ ಆರೋಗ್ಯ ಇಲಾಖೆಯು ಸರ್ಕಾರಿ ಮತ್ತು ಪರವಾನಗಿಯನ್ನು ಹೊಂದಿದ ಖಾಸಗಿ ವ್ಯಾಕ್ಸಿನೇಷನ್‌ ಸೆಂಟರ್‌ಗಳು, ಇತರ ಕಚೇರಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವ ಸ್ಥಳಗಳು, ವೃದ್ಧರು ಮತ್ತು ಅಂಗವಿಕಲರಿಗಾಗಿ ವಸತಿ ಸಮುಚ್ಛಯಗಳ ಸಮೀಪ ಅಥವಾ ಹೌಸಿಂಗ್‌ ಸೊಸೈಟಿಗಳಲ್ಲಿ, ಸಮುದಾಯ ಭವನಗಳು, ಪಂಚಾಯತ ಭವನಗಳು, ಶಾಲೆ-ಕಾಲೇಜುಗಳು ಮತ್ತು ವೃದ್ಧಾಶ್ರಮಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ವ್ಯಾಕ್ಸಿನೇಷನ್‌ ಸೌಲಭ್ಯಗಳನ್ನು ಕಲ್ಪಿಸಬಹುದಾಗಿದೆ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸೂಚಿಸಿದೆ.

ದೆಹಲಿ ಉಪಮುಖ್ಯ ಮಂತ್ರಿ ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ವ್ಯಾಕ್ಸಿನೇಷನ್‌ ವಿಚಾರವಾಗಿ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಗೆ ಅಗತ್ಯವಾದ ವ್ಯಾಕ್ಸಿನ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಹೇಗೆ ವ್ಯಾಕ್ಸಿನ್‌ ಗಳನ್ನು ನೀಡುತ್ತಿವೆ ? ಕೇಂದ್ರದ ಬಳಿ ವ್ಯಾಕ್ಸಿನ್‌ ಪೂರೈಕೆ ಇಲ್ಲವೆಂದಾದರೆ ಖಾಸಗಿಯವರಿಗೆ ವ್ಯಾಕ್ಸಿನ್‌ ಎಲ್ಲಿಂದ ಸರಬರಾಜಾಗುತ್ತಿದೆ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ. ವ್ಯಾಕ್ಸಿನ್‌ ಕೊರತೆಯಿಂದಾಗಿ 18-44 ವಯಸ್ಸಿನ ಸಮುದಾಯಕ್ಕೆ ವ್ಯಾಕ್ಸಿನ್‌ ನೀಡುವ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತಾಗಿದೆ. ದೆಹಲಿ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್‌ ನೀಡಲು ಪ್ರಯತ್ನಿಸುತ್ತಿದೆ. ನಡುವೆ ಖಾಸಗಿಯವರು 1000 ರೂಪಾಯಿಗಳಿಗೆ ಒಂದು ಡೋಸ್‌ ವ್ಯಾಕ್ಸಿನ್‌ ಮಾರಿಕೊಳ್ಳುತ್ತಿದ್ದಾರೆ ಎಂದು ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದೇಶದ ದೊಡ್ಡ ಹೊಟೇಲುಗಳು “ಲಸಿಕೆ ಪ್ಯಾಕೇಜ್” ಆರಂಭಿಸಿದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಆರಂಭ ಆದ ಬೆನ್ನಿಗೇ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿ, ಇಂತಹದಕ್ಕೆಲ್ಲ ಅವಕಾಶ ಇಲ್ಲ ಎಂದಿದೆ. ಆರೋಗ್ಯದ ವಿಷಯದಲ್ಲೇ “ಕಾರ್ಪೋರೇಟ್” ಶಕ್ತಿಗಳು ಇಷ್ಟು ಆಡಬಲ್ಲವೆಂದಾದರೆ ನಾಳೆ ಕೃಷಿ “ಕಾರ್ಪೋರೇಟೀಕರಣ” ಆಗೋದಿಲ್ಲ ಅಂತ ಯಾವ ಬಾಯಲ್ಲಿ ಹೇಳ್ತೀರಿ? ಎಂದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಪಶ್ನಿಸಿದ್ದಾರೆ.

ಆರೋಗ್ಯ ಇಲಾಖೆಯು 2021 ಡಿಸೆಂಬರ್‌ ವೇಳೆಗೆ 108 ಕೋಟಿ ಭಾರತೀಯರಿಗೆ 216 ಕೋಟಿ ಡೋಸ್‌ ಕೋವಿಡ್‌ ವ್ಯಾಕ್ಸಿನ್‌ ನೀಡುವ ಗುರಿಯನ್ನು ಹಾಕಿಕೊಂಡಿದೆ. ಇದುವರೆಗೆ 20 ಕೋಟಿ ವ್ಯಾಕ್ಸಿನ್‌ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕುಂಟುತ್ತ ಸಾಗುತ್ತಿರುವ ವ್ಯಾಕ್ಸಿನೇಷನ್‌ ಪ್ರಕ್ರಿಯೆಯನ್ನು ಗಮನಿಸಿದರೆ ಕೆಂದ್ರ ಸರ್ಕಾರ ಹೇಳಿರುವಂತೆ 2021 ಡಿಸೆಂಬರ್‌ ವೇಳಗೆ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಅಂತ್ಯವಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ನಡುವೆ ಕೋವಿಡ್‌ ಮೂರನೆಯ ಅಲೆಯ ಭೀತಿಯೂ ಹೆಚ್ಚುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಲಸಿಗೆಗಳ ಕೊರತೆಯನ್ನೇ ಬಂಡವಾಳ ಮಾಡಿಕೊಂಡು ವಿವಿಧ ಪ್ಯಾಕೇಜ್‌ ಗಳನ್ನು ವಿವಿಧ ಆಕರ್ಷಕ ಆಫರ್‌ ಗಳ ಜಾಹೀರಾತನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಹೊಟೇಲ್‌ ಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ನಿಷೇಧಿಸಿರುವುದನ್ನು ರಾಜ್ಯಗಳು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ತರುತ್ತವೆ ಎಂಬುದನ್ನು ಕಾದುನೋಡಬೇಕು. ಸದ್ಯಕ್ಕೆ ಲಸಿಕೆಯ ಪೂರೈಕೆ ಮತ್ತು ಖಾಸಗಿಯವರ ಲಸಿಕೆ ದಂದೆಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ; ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...