Homeಕರೋನಾ ತಲ್ಲಣಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೋನಾ ಲಸಿಕೆಯ ಹಾಹಾಕಾರ ಮುಂದುವರೆದಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳ ಮುಂದೆ ಪ್ರತಿನಿತ್ಯ ಜನ ಸಂದಣಿ ಕಂಡು ಬರುತ್ತಿದೆ. ರಾಜ್ಯ ಸರ್ಕಾರಗಳು ಕೇಂದ್ರದಿಂದ ತಮಗೆ ನೀಡುತ್ತಿರುವ ಲಸಿಕೆ ಯಾವ ಮೂಲೆಗೂ ಸಾಲುವುದಿಲ್ಲ ಎಂದು ಹೇಳುತ್ತಿವೆ. ಕೆಲವು ಕಡೆಯಲ್ಲಿ ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್‌ ಬಹುತೇಕರಿಗೆ (45 ವರ್ಷ ಮೇಲ್ಪಟ್ಟವರಿಗೆ) ನೀಡಲು ಇದುವರೆಗೆ ರಾಜ್ಯ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಎಲ್ಲೆಲ್ಲೂ ಲಸಿಕಾ ಕೇಂದ್ರಗಳು ಬೆಳಗಿನ ಅವಧಿಯಲ್ಲಿಯೇ ನೋ ಸ್ಟಾಕ್‌ ಬೋರ್ಡ್‌ ಹಾಕಿಕೊಂಡು ಜನರನ್ನು ವಾಪಸ್‌ ಕಳುಹಿಸುತ್ತಿರುವ ಘಟನೆ ಕೂಡ ನಡೆದಿದೆ. ಆದರೆ ದೇಶದಲ್ಲಿನ ಕೋವಿಡ್‌ ಲಸಿಕೆ ಹಾಹಾಕಾರದ ನಡುವೆ ಖಾಸಗಿ ಆಸ್ಪತ್ರೆಗಳು ಎಗ್ಗಿಲ್ಲದಂತೆ ಲಸಿಕೆ ವ್ಯಾಪಾರವನ್ನು ಮುಂದುವರೆಸಿವೆ. 900 ರೂ. ಗಳಿಂದ 2000 ರೂಗಳ ಮೊತ್ತದಲ್ಲಿ ರಾಜಾರೋಷವಾಗಿ ಲಸಿಕೆಗಳ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ಜೊತೆಗೆ ಪ್ರತಿಷ್ಠಿತ ಐಷಾರಾಮಿ ಹೊಟೇಲ್‌ ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್‌ಗಳನ್ನು ಘೋಷಿಸುತ್ತಿವೆ. ಐಷಾರಾಮಿ ಹೊಟೇಲ್‌ ಗಳ ತಮ್ಮಲ್ಲಿನ ಬ್ರೇಕ್‌ ಫಾಸ್ಟ್‌, ಏಸಿ, ಮನರಂಜನೆ ಮುಂತಾದ ಸೌಲಭ್ಯಗಳ ಜೊತೆಗೆ ಕೊರೋನಾ ಲಸಿಕೆಗಳನ್ನು ನೀಡುವುದಾಗಿ ಹೇಳಿ ಗ್ರಾಹಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದವು. ಈ ಹೊಟೇಲ್‌ ಗಳ ಜೊತೆ ಖಾಸಗಿ ಆಸ್ಪತ್ರೆಗಳೂ ಶಾಮೀಲಾಗಿ ದೊಡ್ಡ ದೊಡ್ಡ ಹೊಟೇಲ್‌ ಗಳಲ್ಲಿ ತಂಗುವ ಗ್ರಾಹಕರಿಗೆ ತಮ್ಮ ವೈದ್ಯರು ಮತ್ತು ಸಿಬ್ಬಂದಿಯ ಮೂಲಕ ವಾಕ್ಸಿನೇಶನ್‌ ನಡೆಸುತ್ತಿದ್ದರು. ಈ ಕುರಿತು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಐಷಾರಾಮಿ ಹೊಟೇಲ್‌ ಗಳಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಲಸಿಕೆಗಳನ್ನು ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಆರೋಗ್ಯ ಇಲಾಖೆ, “ವಿಶ್ವದ ಅತಿದೊಡ್ಡ ವ್ಯಾಕ್ಸಿನ್‌ ಡ್ರೈವ್‌ ಭಾರತದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯ ಸರ್ಕಾರಗಳು ವ್ಯಾಕ್ಸಿನೇಷನ್‌ ಕುರಿತು ತೀವ್ರ ಎಚ್ಚರಿಕೆ ವಹಿಸಬೇಕು. ಕೆಲವು ಕಡೆ ವ್ಯಾಕ್ಸೀನೇಷನ್‌ ಪ್ರಕ್ರಿಯೆಯ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಿದೆ. ವ್ಯಾಕ್ಸಿನೇಷನ್‌ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳು ಉಲ್ಳಂಘನೆಯಾಗದಂತೆ ನೋಡಿಕೊಂಡು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ಜನರಿಗೆ ಲಸಿಕೆಗಳನ್ನು ನೀಡಬೇಕೆಂದು” ಎಚ್ಚರಿಕೆ ನೀಡಿದೆ.

ಕೇಂದ್ರ ಆರೋಗ್ಯ ಮಾರ್ಗಸೂಚಿಯ ಅನ್ವಯ ಇನ್ನು ಮುಂದೆ ಖಾಸಗಿ ಹೊಟೇಲ್‌ಗಳಲ್ಲಿ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ. ಕೇಂದ್ರ ಆರೋಗ್ಯ ಇಲಾಖೆಯು ಸರ್ಕಾರಿ ಮತ್ತು ಪರವಾನಗಿಯನ್ನು ಹೊಂದಿದ ಖಾಸಗಿ ವ್ಯಾಕ್ಸಿನೇಷನ್‌ ಸೆಂಟರ್‌ಗಳು, ಇತರ ಕಚೇರಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವ ಸ್ಥಳಗಳು, ವೃದ್ಧರು ಮತ್ತು ಅಂಗವಿಕಲರಿಗಾಗಿ ವಸತಿ ಸಮುಚ್ಛಯಗಳ ಸಮೀಪ ಅಥವಾ ಹೌಸಿಂಗ್‌ ಸೊಸೈಟಿಗಳಲ್ಲಿ, ಸಮುದಾಯ ಭವನಗಳು, ಪಂಚಾಯತ ಭವನಗಳು, ಶಾಲೆ-ಕಾಲೇಜುಗಳು ಮತ್ತು ವೃದ್ಧಾಶ್ರಮಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ವ್ಯಾಕ್ಸಿನೇಷನ್‌ ಸೌಲಭ್ಯಗಳನ್ನು ಕಲ್ಪಿಸಬಹುದಾಗಿದೆ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸೂಚಿಸಿದೆ.

ದೆಹಲಿ ಉಪಮುಖ್ಯ ಮಂತ್ರಿ ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ವ್ಯಾಕ್ಸಿನೇಷನ್‌ ವಿಚಾರವಾಗಿ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಗೆ ಅಗತ್ಯವಾದ ವ್ಯಾಕ್ಸಿನ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಹೇಗೆ ವ್ಯಾಕ್ಸಿನ್‌ ಗಳನ್ನು ನೀಡುತ್ತಿವೆ ? ಕೇಂದ್ರದ ಬಳಿ ವ್ಯಾಕ್ಸಿನ್‌ ಪೂರೈಕೆ ಇಲ್ಲವೆಂದಾದರೆ ಖಾಸಗಿಯವರಿಗೆ ವ್ಯಾಕ್ಸಿನ್‌ ಎಲ್ಲಿಂದ ಸರಬರಾಜಾಗುತ್ತಿದೆ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ. ವ್ಯಾಕ್ಸಿನ್‌ ಕೊರತೆಯಿಂದಾಗಿ 18-44 ವಯಸ್ಸಿನ ಸಮುದಾಯಕ್ಕೆ ವ್ಯಾಕ್ಸಿನ್‌ ನೀಡುವ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತಾಗಿದೆ. ದೆಹಲಿ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್‌ ನೀಡಲು ಪ್ರಯತ್ನಿಸುತ್ತಿದೆ. ನಡುವೆ ಖಾಸಗಿಯವರು 1000 ರೂಪಾಯಿಗಳಿಗೆ ಒಂದು ಡೋಸ್‌ ವ್ಯಾಕ್ಸಿನ್‌ ಮಾರಿಕೊಳ್ಳುತ್ತಿದ್ದಾರೆ ಎಂದು ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದೇಶದ ದೊಡ್ಡ ಹೊಟೇಲುಗಳು “ಲಸಿಕೆ ಪ್ಯಾಕೇಜ್” ಆರಂಭಿಸಿದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಆರಂಭ ಆದ ಬೆನ್ನಿಗೇ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿ, ಇಂತಹದಕ್ಕೆಲ್ಲ ಅವಕಾಶ ಇಲ್ಲ ಎಂದಿದೆ. ಆರೋಗ್ಯದ ವಿಷಯದಲ್ಲೇ “ಕಾರ್ಪೋರೇಟ್” ಶಕ್ತಿಗಳು ಇಷ್ಟು ಆಡಬಲ್ಲವೆಂದಾದರೆ ನಾಳೆ ಕೃಷಿ “ಕಾರ್ಪೋರೇಟೀಕರಣ” ಆಗೋದಿಲ್ಲ ಅಂತ ಯಾವ ಬಾಯಲ್ಲಿ ಹೇಳ್ತೀರಿ? ಎಂದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಪಶ್ನಿಸಿದ್ದಾರೆ.

ಆರೋಗ್ಯ ಇಲಾಖೆಯು 2021 ಡಿಸೆಂಬರ್‌ ವೇಳೆಗೆ 108 ಕೋಟಿ ಭಾರತೀಯರಿಗೆ 216 ಕೋಟಿ ಡೋಸ್‌ ಕೋವಿಡ್‌ ವ್ಯಾಕ್ಸಿನ್‌ ನೀಡುವ ಗುರಿಯನ್ನು ಹಾಕಿಕೊಂಡಿದೆ. ಇದುವರೆಗೆ 20 ಕೋಟಿ ವ್ಯಾಕ್ಸಿನ್‌ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕುಂಟುತ್ತ ಸಾಗುತ್ತಿರುವ ವ್ಯಾಕ್ಸಿನೇಷನ್‌ ಪ್ರಕ್ರಿಯೆಯನ್ನು ಗಮನಿಸಿದರೆ ಕೆಂದ್ರ ಸರ್ಕಾರ ಹೇಳಿರುವಂತೆ 2021 ಡಿಸೆಂಬರ್‌ ವೇಳಗೆ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಅಂತ್ಯವಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ನಡುವೆ ಕೋವಿಡ್‌ ಮೂರನೆಯ ಅಲೆಯ ಭೀತಿಯೂ ಹೆಚ್ಚುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಲಸಿಗೆಗಳ ಕೊರತೆಯನ್ನೇ ಬಂಡವಾಳ ಮಾಡಿಕೊಂಡು ವಿವಿಧ ಪ್ಯಾಕೇಜ್‌ ಗಳನ್ನು ವಿವಿಧ ಆಕರ್ಷಕ ಆಫರ್‌ ಗಳ ಜಾಹೀರಾತನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಹೊಟೇಲ್‌ ಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ನಿಷೇಧಿಸಿರುವುದನ್ನು ರಾಜ್ಯಗಳು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ತರುತ್ತವೆ ಎಂಬುದನ್ನು ಕಾದುನೋಡಬೇಕು. ಸದ್ಯಕ್ಕೆ ಲಸಿಕೆಯ ಪೂರೈಕೆ ಮತ್ತು ಖಾಸಗಿಯವರ ಲಸಿಕೆ ದಂದೆಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ; ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...