Homeಮುಖಪುಟಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ಅಕಾಲಿ ದಳದ ಆರೋಪದ ನಂತರ ಪಂಜಾಬ್ ಸರ್ಕಾರವು ಶುಕ್ರವಾರ ಸಂಜೆ, “ಖಾಸಗಿ ಆಸ್ಪತ್ರೆಗಳ ಮೂಲಕ 18-44 ವಯೋಮಾನದವರಿಗೆ ಒಂದು ಬಾರಿ ಸೀಮಿತ ಲಸಿಕೆ ಪ್ರಮಾಣವನ್ನು” ನೀಡುವ ಆದೇಶವನ್ನು ಹಿಂತೆಗೆದುಕೊಂಡಿದೆ. ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳು ದುಬಾರಿ ದರಕ್ಕೆ ಮಾರಿಕೊಳ್ಳುವ ನಡೆ ಎಂದು ಅಕಾಲಿ ದಳ ಟೀಕಿಸಿತ್ತು.

ರಾಜ್ಯ ಲಸಿಕಾ ಅಭಿಯಾನದ ಉಸ್ತುವಾರಿ ವಿಕಾಸ್ ಗರ್ಗ್ ಅವರು ಸಹಿ ಮಾಡಿದ ಸಂಕ್ಷಿಪ್ತ ಪತ್ರದಲ್ಲಿ, ‘ಈ ಆದೇಶವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲಾಗಿಲ್ಲ ಮತ್ತು ಇದನ್ನು ಹಿಂಪಡೆಯಲಾಗಿದೆ” ಎಂದು ಹೇಳಿದ್ದಾರೆ.

“ಇದಲ್ಲದೆ, ಖಾಸಗಿ ಆಸ್ಪತ್ರೆಗಳು ತಮ್ಮೊಂದಿಗೆ ಲಭ್ಯವಿರುವ ಎಲ್ಲಾ ಲಸಿಕೆಗಳನ್ನು ಕೂಡಲೇ ಮರಳಿಸಬೇಕು ಎಂದು ಸೂಚಿಸಲಾಗಿದೆ. ಈವರೆಗೆ ಬಳಸಿದ ಲಸಿಕಾ ಡೋಸ್‌ಗಳ ಪ್ರಮಾಣವನ್ನು ತಯಾರಕರಿಂದ ಖರೀದಿಸಿ ವಾಪಸ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಲಸಿಕೆ ನಿಧಿಯಲ್ಲಿ ಆಸ್ಪತ್ರೆಗಳು ಠೇವಣಿ ಇಟ್ಟ ಹಣವನ್ನು ಹಿಂದಿರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶವನ್ನು ಹಿಂಪಡೆಯುವ ಸ್ವಲ್ಪ ಸಮಯದ ಮೊದಲು, ಕೇಂದ್ರವು ರಾಜ್ಯಕ್ಕೆ ಪತ್ರ ಬರೆದಿದ್ದು, “ಈ ವಿಷಯದಲ್ಲಿ ತಕ್ಷಣವೇ ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟೀಕರಣ ನೀಡುವಂತೆ ಕೇಳಿತ್ತು.

ಲಸಿಕೆಗಳ ಮೇಲೆ ನನಗೆ ನಿಯಂತ್ರಣವಿಲ್ಲ ಎಂದು ಪಂಜಾಬ್ ಆರೋಗ್ಯ ಸಚಿವ ಬಿ.ಎಸ್.. ಸಿಧು ಶುಕ್ರವಾರ ಮುಂಜಾನೆ ತಿಳಿಸಿದ್ದರು. “ನಾನು ಚಿಕಿತ್ಸೆ, ಪರೀಕ್ಷೆ, ಕೋವಿಡ್ ಮಾದರಿ ಮತ್ತು ಲಸಿಕಾ ಶಿಬಿರಗಳನ್ನು ನೋಡಿಕೊಳ್ಳುತ್ತಿದ್ದೇನೆ. ನಾವು ಖಂಡಿತವಾಗಿಯೂ ವಿಚಾರಣೆಯನ್ನು ನಡೆಸುತ್ತೇವೆ. ನಾನೇ ವಿಚಾರಿಸಬಹುದು” ಎಂದು ಸಿಧು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಸಂಭವನೀಯ ಭಿನ್ನಮತವನ್ನು ಅಮರಿಂದರ್ ಸಿಂಗ್ ಸರ್ಕಾರ ಎದುರಿಸುತ್ತಿದೆ. ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಬಾದಲ್ ಅವರು, 40,000 ಡೋಸ್ ಕೋವಾಕ್ಸಿನ್ ಅನ್ನು ಹೆಚ್ಚಿನ ದರದಲ್ಲಿ ಮರು ಮಾರಾಟ ಮಾಡಲಾಗಿದೆ ಎಂದು ಗುರುವಾರ ಹೇಳಿದ ನಂತರ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು.

ಡೋಸೇಜ್‌ಗೆ 400 ರೂ. ದರದಲ್ಲಿ ಖರೀದಿಸಲಾಗಿದೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 1,060 ರೂ,ಗೆ ಮಾರಾಟ ಮಾಡಲಾಗಿದೆ. ಆಸ್ಪತ್ರೆಗಳು ಅದನ್ನು ಅರ್ಹ ಫಲಾನುಭವಿಗಳಿಗೆ ಪ್ರತಿ ಡೋಸ್‌ಗೆ 1,560 ರೂ.ಗೆ ನೀಡಿವೆ ಎಂದು ಬಾದಲ್ ಹೇಳಿದ್ದಾರೆ.

ರಾಷ್ಟ್ರೀಯ ಲಸಿಕಾ ನೀತಿಯ ಬಗ್ಗೆ ತೀವ್ರವಾಗಿ ಟೀಕಿಸಿದ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಪ್ರಕಾಶ್ ಜಾವಡೇಕರ್ ಅವರು ಇಂದು ಮಧ್ಯಾಹ್ನ ಪಂಜಾಬ್ ವಿಷಯ ಉಲ್ಲೇಖಿಸಿ ಟೀಕೆ ಮಾಡಿದ್ದಾರೆ.

ಗುರುವಾರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಕೂಡ ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಎಎನ್‌ಐ ಪ್ರಕಾರ ಅವರು, “ಜನರ ಬಗ್ಗೆ ಪಂಜಾಬ್ ಸರ್ಕಾರ ಕಠಿಣ ಮನೋಭಾವ” ತೋರಿಸುತ್ತಿದೆ’ ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಲಸಿಕೆಯ ಕಡಿಮೆ ದಾಸ್ತಾನು ಹೊಂದಿರುವ ಹಲವಾರು ರಾಜ್ಯಗಳಲ್ಲಿ ಪಂಜಾಬ್ ಕೂಡ ಸೇರಿದೆ.

ಲಸಿಕೆ ಸರಬರಾಜು ವಿಷಯವು ಕೇಂದ್ರ ಮತ್ತು ಹಲವಾರು ರಾಜ್ಯಗಳ ನಡುವೆ ವಿವಾದದ ವಿಷಯವಾಗಿ ಮಾರ್ಪಟ್ಟಿದೆ.. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಲಸಿಕೆ ಕೊರತೆಯಿಂದ ಪದೇ ಪದೇ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ್ದವು. ಅದರಲ್ಲೂ ವಿಶೇಷವಾಗಿ 18-44 ವಯೋಮಾನದವರಿಗೆ, 45 ವರ್ಷಕ್ಕಿಂತ ಮೇಲ್ಪಟ್ಟವರಂತೆ ನೀಡಿದಂತೆ ಉಚಿತವಾಗಿ ನೀಡಲಾಗಿಲ್ಲ, ಕೇಂದ್ರವು ಅಗತ್ಯವಿರುವ ಶೇಕಡಾ 50 ರಷ್ಟು ಪ್ರಮಾಣವನ್ನು ಮಾತ್ರ ಒದಗಿಸುತ್ತದೆ. ಅದರ ಹೊಸ ನೀತಿಯಡಿಯಲ್ಲಿ ಉಳಿದವುಗಳನ್ನು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ನೇರವಾಗಿ ಉತ್ಪಾದಕರಿಂದ ಖರೀದಿಸಬೇಕು.

ಕೇಂದ್ರವು ಪ್ರತಿ ಡೋಸ್‌ಗೆ 150 ರೂ. ಪಾವತಿಸಿದರೆ, ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳಿಗೆ 1,200 ರೂ.ಗೆ ನೀಡಲಾಗುತ್ತಿದೆ. ಈ ದರ ವ್ಯತ್ಯಾಸವನ್ನು ಸುಪ್ರೀಂಕೋರ್ಟ್ ಕೂಡ ಪ್ರಶ್ನಿಸಿದೆ.
ಕಾಂಗ್ರೆಸ್, ಏಪ್ರಿಲ್‌ನಲ್ಲಿ ಇದನ್ನು ಕೇಂದ್ರದ “ಲಸಿಕೆ ವ್ಯಾಪಾರ” ಎಂದು ದೂಷಿಸಿತ್ತು.

ಡಿಸೆಂಬರ್ ಅಂತ್ಯದ ವೇಳೆಗೆ ಇಡೀ ದೇಶಕ್ಕೆ ಲಸಿಕೆ ನೀಡುವುದಾಗಿ ಕೇಂದ್ರ ಹೇಳಿತ್ತು. ಆದರೆ ಈ ವಾರ ಸುಪ್ರೀಂಕೋರ್ಟ್ ಆ ಗುರಿಯನ್ನು ಹೇಗೆ ಸಾಧಿಸಲು ಯೋಜಿಸಿದೆ ಎಂಬುದರ ಕುರಿತು ಹಲವಾರು ಕಠಿಣ ಪ್ರಶ್ನೆಗಳನ್ನು ಕೇಳಿದೆ.


ಇದನ್ನೂ ಓದಿ: ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...