Homeಮುಖಪುಟಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ಅಕಾಲಿ ದಳದ ಆರೋಪದ ನಂತರ ಪಂಜಾಬ್ ಸರ್ಕಾರವು ಶುಕ್ರವಾರ ಸಂಜೆ, “ಖಾಸಗಿ ಆಸ್ಪತ್ರೆಗಳ ಮೂಲಕ 18-44 ವಯೋಮಾನದವರಿಗೆ ಒಂದು ಬಾರಿ ಸೀಮಿತ ಲಸಿಕೆ ಪ್ರಮಾಣವನ್ನು” ನೀಡುವ ಆದೇಶವನ್ನು ಹಿಂತೆಗೆದುಕೊಂಡಿದೆ. ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳು ದುಬಾರಿ ದರಕ್ಕೆ ಮಾರಿಕೊಳ್ಳುವ ನಡೆ ಎಂದು ಅಕಾಲಿ ದಳ ಟೀಕಿಸಿತ್ತು.

ರಾಜ್ಯ ಲಸಿಕಾ ಅಭಿಯಾನದ ಉಸ್ತುವಾರಿ ವಿಕಾಸ್ ಗರ್ಗ್ ಅವರು ಸಹಿ ಮಾಡಿದ ಸಂಕ್ಷಿಪ್ತ ಪತ್ರದಲ್ಲಿ, ‘ಈ ಆದೇಶವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲಾಗಿಲ್ಲ ಮತ್ತು ಇದನ್ನು ಹಿಂಪಡೆಯಲಾಗಿದೆ” ಎಂದು ಹೇಳಿದ್ದಾರೆ.

“ಇದಲ್ಲದೆ, ಖಾಸಗಿ ಆಸ್ಪತ್ರೆಗಳು ತಮ್ಮೊಂದಿಗೆ ಲಭ್ಯವಿರುವ ಎಲ್ಲಾ ಲಸಿಕೆಗಳನ್ನು ಕೂಡಲೇ ಮರಳಿಸಬೇಕು ಎಂದು ಸೂಚಿಸಲಾಗಿದೆ. ಈವರೆಗೆ ಬಳಸಿದ ಲಸಿಕಾ ಡೋಸ್‌ಗಳ ಪ್ರಮಾಣವನ್ನು ತಯಾರಕರಿಂದ ಖರೀದಿಸಿ ವಾಪಸ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಲಸಿಕೆ ನಿಧಿಯಲ್ಲಿ ಆಸ್ಪತ್ರೆಗಳು ಠೇವಣಿ ಇಟ್ಟ ಹಣವನ್ನು ಹಿಂದಿರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶವನ್ನು ಹಿಂಪಡೆಯುವ ಸ್ವಲ್ಪ ಸಮಯದ ಮೊದಲು, ಕೇಂದ್ರವು ರಾಜ್ಯಕ್ಕೆ ಪತ್ರ ಬರೆದಿದ್ದು, “ಈ ವಿಷಯದಲ್ಲಿ ತಕ್ಷಣವೇ ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟೀಕರಣ ನೀಡುವಂತೆ ಕೇಳಿತ್ತು.

ಲಸಿಕೆಗಳ ಮೇಲೆ ನನಗೆ ನಿಯಂತ್ರಣವಿಲ್ಲ ಎಂದು ಪಂಜಾಬ್ ಆರೋಗ್ಯ ಸಚಿವ ಬಿ.ಎಸ್.. ಸಿಧು ಶುಕ್ರವಾರ ಮುಂಜಾನೆ ತಿಳಿಸಿದ್ದರು. “ನಾನು ಚಿಕಿತ್ಸೆ, ಪರೀಕ್ಷೆ, ಕೋವಿಡ್ ಮಾದರಿ ಮತ್ತು ಲಸಿಕಾ ಶಿಬಿರಗಳನ್ನು ನೋಡಿಕೊಳ್ಳುತ್ತಿದ್ದೇನೆ. ನಾವು ಖಂಡಿತವಾಗಿಯೂ ವಿಚಾರಣೆಯನ್ನು ನಡೆಸುತ್ತೇವೆ. ನಾನೇ ವಿಚಾರಿಸಬಹುದು” ಎಂದು ಸಿಧು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಸಂಭವನೀಯ ಭಿನ್ನಮತವನ್ನು ಅಮರಿಂದರ್ ಸಿಂಗ್ ಸರ್ಕಾರ ಎದುರಿಸುತ್ತಿದೆ. ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಬಾದಲ್ ಅವರು, 40,000 ಡೋಸ್ ಕೋವಾಕ್ಸಿನ್ ಅನ್ನು ಹೆಚ್ಚಿನ ದರದಲ್ಲಿ ಮರು ಮಾರಾಟ ಮಾಡಲಾಗಿದೆ ಎಂದು ಗುರುವಾರ ಹೇಳಿದ ನಂತರ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು.

ಡೋಸೇಜ್‌ಗೆ 400 ರೂ. ದರದಲ್ಲಿ ಖರೀದಿಸಲಾಗಿದೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 1,060 ರೂ,ಗೆ ಮಾರಾಟ ಮಾಡಲಾಗಿದೆ. ಆಸ್ಪತ್ರೆಗಳು ಅದನ್ನು ಅರ್ಹ ಫಲಾನುಭವಿಗಳಿಗೆ ಪ್ರತಿ ಡೋಸ್‌ಗೆ 1,560 ರೂ.ಗೆ ನೀಡಿವೆ ಎಂದು ಬಾದಲ್ ಹೇಳಿದ್ದಾರೆ.

ರಾಷ್ಟ್ರೀಯ ಲಸಿಕಾ ನೀತಿಯ ಬಗ್ಗೆ ತೀವ್ರವಾಗಿ ಟೀಕಿಸಿದ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಪ್ರಕಾಶ್ ಜಾವಡೇಕರ್ ಅವರು ಇಂದು ಮಧ್ಯಾಹ್ನ ಪಂಜಾಬ್ ವಿಷಯ ಉಲ್ಲೇಖಿಸಿ ಟೀಕೆ ಮಾಡಿದ್ದಾರೆ.

ಗುರುವಾರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಕೂಡ ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಎಎನ್‌ಐ ಪ್ರಕಾರ ಅವರು, “ಜನರ ಬಗ್ಗೆ ಪಂಜಾಬ್ ಸರ್ಕಾರ ಕಠಿಣ ಮನೋಭಾವ” ತೋರಿಸುತ್ತಿದೆ’ ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಲಸಿಕೆಯ ಕಡಿಮೆ ದಾಸ್ತಾನು ಹೊಂದಿರುವ ಹಲವಾರು ರಾಜ್ಯಗಳಲ್ಲಿ ಪಂಜಾಬ್ ಕೂಡ ಸೇರಿದೆ.

ಲಸಿಕೆ ಸರಬರಾಜು ವಿಷಯವು ಕೇಂದ್ರ ಮತ್ತು ಹಲವಾರು ರಾಜ್ಯಗಳ ನಡುವೆ ವಿವಾದದ ವಿಷಯವಾಗಿ ಮಾರ್ಪಟ್ಟಿದೆ.. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಲಸಿಕೆ ಕೊರತೆಯಿಂದ ಪದೇ ಪದೇ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ್ದವು. ಅದರಲ್ಲೂ ವಿಶೇಷವಾಗಿ 18-44 ವಯೋಮಾನದವರಿಗೆ, 45 ವರ್ಷಕ್ಕಿಂತ ಮೇಲ್ಪಟ್ಟವರಂತೆ ನೀಡಿದಂತೆ ಉಚಿತವಾಗಿ ನೀಡಲಾಗಿಲ್ಲ, ಕೇಂದ್ರವು ಅಗತ್ಯವಿರುವ ಶೇಕಡಾ 50 ರಷ್ಟು ಪ್ರಮಾಣವನ್ನು ಮಾತ್ರ ಒದಗಿಸುತ್ತದೆ. ಅದರ ಹೊಸ ನೀತಿಯಡಿಯಲ್ಲಿ ಉಳಿದವುಗಳನ್ನು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ನೇರವಾಗಿ ಉತ್ಪಾದಕರಿಂದ ಖರೀದಿಸಬೇಕು.

ಕೇಂದ್ರವು ಪ್ರತಿ ಡೋಸ್‌ಗೆ 150 ರೂ. ಪಾವತಿಸಿದರೆ, ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳಿಗೆ 1,200 ರೂ.ಗೆ ನೀಡಲಾಗುತ್ತಿದೆ. ಈ ದರ ವ್ಯತ್ಯಾಸವನ್ನು ಸುಪ್ರೀಂಕೋರ್ಟ್ ಕೂಡ ಪ್ರಶ್ನಿಸಿದೆ.
ಕಾಂಗ್ರೆಸ್, ಏಪ್ರಿಲ್‌ನಲ್ಲಿ ಇದನ್ನು ಕೇಂದ್ರದ “ಲಸಿಕೆ ವ್ಯಾಪಾರ” ಎಂದು ದೂಷಿಸಿತ್ತು.

ಡಿಸೆಂಬರ್ ಅಂತ್ಯದ ವೇಳೆಗೆ ಇಡೀ ದೇಶಕ್ಕೆ ಲಸಿಕೆ ನೀಡುವುದಾಗಿ ಕೇಂದ್ರ ಹೇಳಿತ್ತು. ಆದರೆ ಈ ವಾರ ಸುಪ್ರೀಂಕೋರ್ಟ್ ಆ ಗುರಿಯನ್ನು ಹೇಗೆ ಸಾಧಿಸಲು ಯೋಜಿಸಿದೆ ಎಂಬುದರ ಕುರಿತು ಹಲವಾರು ಕಠಿಣ ಪ್ರಶ್ನೆಗಳನ್ನು ಕೇಳಿದೆ.


ಇದನ್ನೂ ಓದಿ: ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...