Homeಮುಖಪುಟಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ಅಕಾಲಿ ದಳದ ಆರೋಪದ ನಂತರ ಪಂಜಾಬ್ ಸರ್ಕಾರವು ಶುಕ್ರವಾರ ಸಂಜೆ, “ಖಾಸಗಿ ಆಸ್ಪತ್ರೆಗಳ ಮೂಲಕ 18-44 ವಯೋಮಾನದವರಿಗೆ ಒಂದು ಬಾರಿ ಸೀಮಿತ ಲಸಿಕೆ ಪ್ರಮಾಣವನ್ನು” ನೀಡುವ ಆದೇಶವನ್ನು ಹಿಂತೆಗೆದುಕೊಂಡಿದೆ. ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳು ದುಬಾರಿ ದರಕ್ಕೆ ಮಾರಿಕೊಳ್ಳುವ ನಡೆ ಎಂದು ಅಕಾಲಿ ದಳ ಟೀಕಿಸಿತ್ತು.

ರಾಜ್ಯ ಲಸಿಕಾ ಅಭಿಯಾನದ ಉಸ್ತುವಾರಿ ವಿಕಾಸ್ ಗರ್ಗ್ ಅವರು ಸಹಿ ಮಾಡಿದ ಸಂಕ್ಷಿಪ್ತ ಪತ್ರದಲ್ಲಿ, ‘ಈ ಆದೇಶವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲಾಗಿಲ್ಲ ಮತ್ತು ಇದನ್ನು ಹಿಂಪಡೆಯಲಾಗಿದೆ” ಎಂದು ಹೇಳಿದ್ದಾರೆ.

“ಇದಲ್ಲದೆ, ಖಾಸಗಿ ಆಸ್ಪತ್ರೆಗಳು ತಮ್ಮೊಂದಿಗೆ ಲಭ್ಯವಿರುವ ಎಲ್ಲಾ ಲಸಿಕೆಗಳನ್ನು ಕೂಡಲೇ ಮರಳಿಸಬೇಕು ಎಂದು ಸೂಚಿಸಲಾಗಿದೆ. ಈವರೆಗೆ ಬಳಸಿದ ಲಸಿಕಾ ಡೋಸ್‌ಗಳ ಪ್ರಮಾಣವನ್ನು ತಯಾರಕರಿಂದ ಖರೀದಿಸಿ ವಾಪಸ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಲಸಿಕೆ ನಿಧಿಯಲ್ಲಿ ಆಸ್ಪತ್ರೆಗಳು ಠೇವಣಿ ಇಟ್ಟ ಹಣವನ್ನು ಹಿಂದಿರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶವನ್ನು ಹಿಂಪಡೆಯುವ ಸ್ವಲ್ಪ ಸಮಯದ ಮೊದಲು, ಕೇಂದ್ರವು ರಾಜ್ಯಕ್ಕೆ ಪತ್ರ ಬರೆದಿದ್ದು, “ಈ ವಿಷಯದಲ್ಲಿ ತಕ್ಷಣವೇ ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟೀಕರಣ ನೀಡುವಂತೆ ಕೇಳಿತ್ತು.

ಲಸಿಕೆಗಳ ಮೇಲೆ ನನಗೆ ನಿಯಂತ್ರಣವಿಲ್ಲ ಎಂದು ಪಂಜಾಬ್ ಆರೋಗ್ಯ ಸಚಿವ ಬಿ.ಎಸ್.. ಸಿಧು ಶುಕ್ರವಾರ ಮುಂಜಾನೆ ತಿಳಿಸಿದ್ದರು. “ನಾನು ಚಿಕಿತ್ಸೆ, ಪರೀಕ್ಷೆ, ಕೋವಿಡ್ ಮಾದರಿ ಮತ್ತು ಲಸಿಕಾ ಶಿಬಿರಗಳನ್ನು ನೋಡಿಕೊಳ್ಳುತ್ತಿದ್ದೇನೆ. ನಾವು ಖಂಡಿತವಾಗಿಯೂ ವಿಚಾರಣೆಯನ್ನು ನಡೆಸುತ್ತೇವೆ. ನಾನೇ ವಿಚಾರಿಸಬಹುದು” ಎಂದು ಸಿಧು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಸಂಭವನೀಯ ಭಿನ್ನಮತವನ್ನು ಅಮರಿಂದರ್ ಸಿಂಗ್ ಸರ್ಕಾರ ಎದುರಿಸುತ್ತಿದೆ. ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಬಾದಲ್ ಅವರು, 40,000 ಡೋಸ್ ಕೋವಾಕ್ಸಿನ್ ಅನ್ನು ಹೆಚ್ಚಿನ ದರದಲ್ಲಿ ಮರು ಮಾರಾಟ ಮಾಡಲಾಗಿದೆ ಎಂದು ಗುರುವಾರ ಹೇಳಿದ ನಂತರ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು.

ಡೋಸೇಜ್‌ಗೆ 400 ರೂ. ದರದಲ್ಲಿ ಖರೀದಿಸಲಾಗಿದೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 1,060 ರೂ,ಗೆ ಮಾರಾಟ ಮಾಡಲಾಗಿದೆ. ಆಸ್ಪತ್ರೆಗಳು ಅದನ್ನು ಅರ್ಹ ಫಲಾನುಭವಿಗಳಿಗೆ ಪ್ರತಿ ಡೋಸ್‌ಗೆ 1,560 ರೂ.ಗೆ ನೀಡಿವೆ ಎಂದು ಬಾದಲ್ ಹೇಳಿದ್ದಾರೆ.

ರಾಷ್ಟ್ರೀಯ ಲಸಿಕಾ ನೀತಿಯ ಬಗ್ಗೆ ತೀವ್ರವಾಗಿ ಟೀಕಿಸಿದ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಪ್ರಕಾಶ್ ಜಾವಡೇಕರ್ ಅವರು ಇಂದು ಮಧ್ಯಾಹ್ನ ಪಂಜಾಬ್ ವಿಷಯ ಉಲ್ಲೇಖಿಸಿ ಟೀಕೆ ಮಾಡಿದ್ದಾರೆ.

ಗುರುವಾರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಕೂಡ ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಎಎನ್‌ಐ ಪ್ರಕಾರ ಅವರು, “ಜನರ ಬಗ್ಗೆ ಪಂಜಾಬ್ ಸರ್ಕಾರ ಕಠಿಣ ಮನೋಭಾವ” ತೋರಿಸುತ್ತಿದೆ’ ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಲಸಿಕೆಯ ಕಡಿಮೆ ದಾಸ್ತಾನು ಹೊಂದಿರುವ ಹಲವಾರು ರಾಜ್ಯಗಳಲ್ಲಿ ಪಂಜಾಬ್ ಕೂಡ ಸೇರಿದೆ.

ಲಸಿಕೆ ಸರಬರಾಜು ವಿಷಯವು ಕೇಂದ್ರ ಮತ್ತು ಹಲವಾರು ರಾಜ್ಯಗಳ ನಡುವೆ ವಿವಾದದ ವಿಷಯವಾಗಿ ಮಾರ್ಪಟ್ಟಿದೆ.. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಲಸಿಕೆ ಕೊರತೆಯಿಂದ ಪದೇ ಪದೇ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ್ದವು. ಅದರಲ್ಲೂ ವಿಶೇಷವಾಗಿ 18-44 ವಯೋಮಾನದವರಿಗೆ, 45 ವರ್ಷಕ್ಕಿಂತ ಮೇಲ್ಪಟ್ಟವರಂತೆ ನೀಡಿದಂತೆ ಉಚಿತವಾಗಿ ನೀಡಲಾಗಿಲ್ಲ, ಕೇಂದ್ರವು ಅಗತ್ಯವಿರುವ ಶೇಕಡಾ 50 ರಷ್ಟು ಪ್ರಮಾಣವನ್ನು ಮಾತ್ರ ಒದಗಿಸುತ್ತದೆ. ಅದರ ಹೊಸ ನೀತಿಯಡಿಯಲ್ಲಿ ಉಳಿದವುಗಳನ್ನು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ನೇರವಾಗಿ ಉತ್ಪಾದಕರಿಂದ ಖರೀದಿಸಬೇಕು.

ಕೇಂದ್ರವು ಪ್ರತಿ ಡೋಸ್‌ಗೆ 150 ರೂ. ಪಾವತಿಸಿದರೆ, ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳಿಗೆ 1,200 ರೂ.ಗೆ ನೀಡಲಾಗುತ್ತಿದೆ. ಈ ದರ ವ್ಯತ್ಯಾಸವನ್ನು ಸುಪ್ರೀಂಕೋರ್ಟ್ ಕೂಡ ಪ್ರಶ್ನಿಸಿದೆ.
ಕಾಂಗ್ರೆಸ್, ಏಪ್ರಿಲ್‌ನಲ್ಲಿ ಇದನ್ನು ಕೇಂದ್ರದ “ಲಸಿಕೆ ವ್ಯಾಪಾರ” ಎಂದು ದೂಷಿಸಿತ್ತು.

ಡಿಸೆಂಬರ್ ಅಂತ್ಯದ ವೇಳೆಗೆ ಇಡೀ ದೇಶಕ್ಕೆ ಲಸಿಕೆ ನೀಡುವುದಾಗಿ ಕೇಂದ್ರ ಹೇಳಿತ್ತು. ಆದರೆ ಈ ವಾರ ಸುಪ್ರೀಂಕೋರ್ಟ್ ಆ ಗುರಿಯನ್ನು ಹೇಗೆ ಸಾಧಿಸಲು ಯೋಜಿಸಿದೆ ಎಂಬುದರ ಕುರಿತು ಹಲವಾರು ಕಠಿಣ ಪ್ರಶ್ನೆಗಳನ್ನು ಕೇಳಿದೆ.


ಇದನ್ನೂ ಓದಿ: ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...