Homeಮುಖಪುಟಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ಅಕಾಲಿ ದಳದ ಆರೋಪದ ನಂತರ ಪಂಜಾಬ್ ಸರ್ಕಾರವು ಶುಕ್ರವಾರ ಸಂಜೆ, “ಖಾಸಗಿ ಆಸ್ಪತ್ರೆಗಳ ಮೂಲಕ 18-44 ವಯೋಮಾನದವರಿಗೆ ಒಂದು ಬಾರಿ ಸೀಮಿತ ಲಸಿಕೆ ಪ್ರಮಾಣವನ್ನು” ನೀಡುವ ಆದೇಶವನ್ನು ಹಿಂತೆಗೆದುಕೊಂಡಿದೆ. ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳು ದುಬಾರಿ ದರಕ್ಕೆ ಮಾರಿಕೊಳ್ಳುವ ನಡೆ ಎಂದು ಅಕಾಲಿ ದಳ ಟೀಕಿಸಿತ್ತು.

ರಾಜ್ಯ ಲಸಿಕಾ ಅಭಿಯಾನದ ಉಸ್ತುವಾರಿ ವಿಕಾಸ್ ಗರ್ಗ್ ಅವರು ಸಹಿ ಮಾಡಿದ ಸಂಕ್ಷಿಪ್ತ ಪತ್ರದಲ್ಲಿ, ‘ಈ ಆದೇಶವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲಾಗಿಲ್ಲ ಮತ್ತು ಇದನ್ನು ಹಿಂಪಡೆಯಲಾಗಿದೆ” ಎಂದು ಹೇಳಿದ್ದಾರೆ.

“ಇದಲ್ಲದೆ, ಖಾಸಗಿ ಆಸ್ಪತ್ರೆಗಳು ತಮ್ಮೊಂದಿಗೆ ಲಭ್ಯವಿರುವ ಎಲ್ಲಾ ಲಸಿಕೆಗಳನ್ನು ಕೂಡಲೇ ಮರಳಿಸಬೇಕು ಎಂದು ಸೂಚಿಸಲಾಗಿದೆ. ಈವರೆಗೆ ಬಳಸಿದ ಲಸಿಕಾ ಡೋಸ್‌ಗಳ ಪ್ರಮಾಣವನ್ನು ತಯಾರಕರಿಂದ ಖರೀದಿಸಿ ವಾಪಸ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಲಸಿಕೆ ನಿಧಿಯಲ್ಲಿ ಆಸ್ಪತ್ರೆಗಳು ಠೇವಣಿ ಇಟ್ಟ ಹಣವನ್ನು ಹಿಂದಿರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶವನ್ನು ಹಿಂಪಡೆಯುವ ಸ್ವಲ್ಪ ಸಮಯದ ಮೊದಲು, ಕೇಂದ್ರವು ರಾಜ್ಯಕ್ಕೆ ಪತ್ರ ಬರೆದಿದ್ದು, “ಈ ವಿಷಯದಲ್ಲಿ ತಕ್ಷಣವೇ ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟೀಕರಣ ನೀಡುವಂತೆ ಕೇಳಿತ್ತು.

ಲಸಿಕೆಗಳ ಮೇಲೆ ನನಗೆ ನಿಯಂತ್ರಣವಿಲ್ಲ ಎಂದು ಪಂಜಾಬ್ ಆರೋಗ್ಯ ಸಚಿವ ಬಿ.ಎಸ್.. ಸಿಧು ಶುಕ್ರವಾರ ಮುಂಜಾನೆ ತಿಳಿಸಿದ್ದರು. “ನಾನು ಚಿಕಿತ್ಸೆ, ಪರೀಕ್ಷೆ, ಕೋವಿಡ್ ಮಾದರಿ ಮತ್ತು ಲಸಿಕಾ ಶಿಬಿರಗಳನ್ನು ನೋಡಿಕೊಳ್ಳುತ್ತಿದ್ದೇನೆ. ನಾವು ಖಂಡಿತವಾಗಿಯೂ ವಿಚಾರಣೆಯನ್ನು ನಡೆಸುತ್ತೇವೆ. ನಾನೇ ವಿಚಾರಿಸಬಹುದು” ಎಂದು ಸಿಧು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಸಂಭವನೀಯ ಭಿನ್ನಮತವನ್ನು ಅಮರಿಂದರ್ ಸಿಂಗ್ ಸರ್ಕಾರ ಎದುರಿಸುತ್ತಿದೆ. ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಬಾದಲ್ ಅವರು, 40,000 ಡೋಸ್ ಕೋವಾಕ್ಸಿನ್ ಅನ್ನು ಹೆಚ್ಚಿನ ದರದಲ್ಲಿ ಮರು ಮಾರಾಟ ಮಾಡಲಾಗಿದೆ ಎಂದು ಗುರುವಾರ ಹೇಳಿದ ನಂತರ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು.

ಡೋಸೇಜ್‌ಗೆ 400 ರೂ. ದರದಲ್ಲಿ ಖರೀದಿಸಲಾಗಿದೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 1,060 ರೂ,ಗೆ ಮಾರಾಟ ಮಾಡಲಾಗಿದೆ. ಆಸ್ಪತ್ರೆಗಳು ಅದನ್ನು ಅರ್ಹ ಫಲಾನುಭವಿಗಳಿಗೆ ಪ್ರತಿ ಡೋಸ್‌ಗೆ 1,560 ರೂ.ಗೆ ನೀಡಿವೆ ಎಂದು ಬಾದಲ್ ಹೇಳಿದ್ದಾರೆ.

ರಾಷ್ಟ್ರೀಯ ಲಸಿಕಾ ನೀತಿಯ ಬಗ್ಗೆ ತೀವ್ರವಾಗಿ ಟೀಕಿಸಿದ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಪ್ರಕಾಶ್ ಜಾವಡೇಕರ್ ಅವರು ಇಂದು ಮಧ್ಯಾಹ್ನ ಪಂಜಾಬ್ ವಿಷಯ ಉಲ್ಲೇಖಿಸಿ ಟೀಕೆ ಮಾಡಿದ್ದಾರೆ.

ಗುರುವಾರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಕೂಡ ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಎಎನ್‌ಐ ಪ್ರಕಾರ ಅವರು, “ಜನರ ಬಗ್ಗೆ ಪಂಜಾಬ್ ಸರ್ಕಾರ ಕಠಿಣ ಮನೋಭಾವ” ತೋರಿಸುತ್ತಿದೆ’ ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಲಸಿಕೆಯ ಕಡಿಮೆ ದಾಸ್ತಾನು ಹೊಂದಿರುವ ಹಲವಾರು ರಾಜ್ಯಗಳಲ್ಲಿ ಪಂಜಾಬ್ ಕೂಡ ಸೇರಿದೆ.

ಲಸಿಕೆ ಸರಬರಾಜು ವಿಷಯವು ಕೇಂದ್ರ ಮತ್ತು ಹಲವಾರು ರಾಜ್ಯಗಳ ನಡುವೆ ವಿವಾದದ ವಿಷಯವಾಗಿ ಮಾರ್ಪಟ್ಟಿದೆ.. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಲಸಿಕೆ ಕೊರತೆಯಿಂದ ಪದೇ ಪದೇ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ್ದವು. ಅದರಲ್ಲೂ ವಿಶೇಷವಾಗಿ 18-44 ವಯೋಮಾನದವರಿಗೆ, 45 ವರ್ಷಕ್ಕಿಂತ ಮೇಲ್ಪಟ್ಟವರಂತೆ ನೀಡಿದಂತೆ ಉಚಿತವಾಗಿ ನೀಡಲಾಗಿಲ್ಲ, ಕೇಂದ್ರವು ಅಗತ್ಯವಿರುವ ಶೇಕಡಾ 50 ರಷ್ಟು ಪ್ರಮಾಣವನ್ನು ಮಾತ್ರ ಒದಗಿಸುತ್ತದೆ. ಅದರ ಹೊಸ ನೀತಿಯಡಿಯಲ್ಲಿ ಉಳಿದವುಗಳನ್ನು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ನೇರವಾಗಿ ಉತ್ಪಾದಕರಿಂದ ಖರೀದಿಸಬೇಕು.

ಕೇಂದ್ರವು ಪ್ರತಿ ಡೋಸ್‌ಗೆ 150 ರೂ. ಪಾವತಿಸಿದರೆ, ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳಿಗೆ 1,200 ರೂ.ಗೆ ನೀಡಲಾಗುತ್ತಿದೆ. ಈ ದರ ವ್ಯತ್ಯಾಸವನ್ನು ಸುಪ್ರೀಂಕೋರ್ಟ್ ಕೂಡ ಪ್ರಶ್ನಿಸಿದೆ.
ಕಾಂಗ್ರೆಸ್, ಏಪ್ರಿಲ್‌ನಲ್ಲಿ ಇದನ್ನು ಕೇಂದ್ರದ “ಲಸಿಕೆ ವ್ಯಾಪಾರ” ಎಂದು ದೂಷಿಸಿತ್ತು.

ಡಿಸೆಂಬರ್ ಅಂತ್ಯದ ವೇಳೆಗೆ ಇಡೀ ದೇಶಕ್ಕೆ ಲಸಿಕೆ ನೀಡುವುದಾಗಿ ಕೇಂದ್ರ ಹೇಳಿತ್ತು. ಆದರೆ ಈ ವಾರ ಸುಪ್ರೀಂಕೋರ್ಟ್ ಆ ಗುರಿಯನ್ನು ಹೇಗೆ ಸಾಧಿಸಲು ಯೋಜಿಸಿದೆ ಎಂಬುದರ ಕುರಿತು ಹಲವಾರು ಕಠಿಣ ಪ್ರಶ್ನೆಗಳನ್ನು ಕೇಳಿದೆ.


ಇದನ್ನೂ ಓದಿ: ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...