Homeಮುಖಪುಟಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ಅಕಾಲಿ ದಳದ ಆರೋಪದ ನಂತರ ಪಂಜಾಬ್ ಸರ್ಕಾರವು ಶುಕ್ರವಾರ ಸಂಜೆ, “ಖಾಸಗಿ ಆಸ್ಪತ್ರೆಗಳ ಮೂಲಕ 18-44 ವಯೋಮಾನದವರಿಗೆ ಒಂದು ಬಾರಿ ಸೀಮಿತ ಲಸಿಕೆ ಪ್ರಮಾಣವನ್ನು” ನೀಡುವ ಆದೇಶವನ್ನು ಹಿಂತೆಗೆದುಕೊಂಡಿದೆ. ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳು ದುಬಾರಿ ದರಕ್ಕೆ ಮಾರಿಕೊಳ್ಳುವ ನಡೆ ಎಂದು ಅಕಾಲಿ ದಳ ಟೀಕಿಸಿತ್ತು.

ರಾಜ್ಯ ಲಸಿಕಾ ಅಭಿಯಾನದ ಉಸ್ತುವಾರಿ ವಿಕಾಸ್ ಗರ್ಗ್ ಅವರು ಸಹಿ ಮಾಡಿದ ಸಂಕ್ಷಿಪ್ತ ಪತ್ರದಲ್ಲಿ, ‘ಈ ಆದೇಶವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲಾಗಿಲ್ಲ ಮತ್ತು ಇದನ್ನು ಹಿಂಪಡೆಯಲಾಗಿದೆ” ಎಂದು ಹೇಳಿದ್ದಾರೆ.

“ಇದಲ್ಲದೆ, ಖಾಸಗಿ ಆಸ್ಪತ್ರೆಗಳು ತಮ್ಮೊಂದಿಗೆ ಲಭ್ಯವಿರುವ ಎಲ್ಲಾ ಲಸಿಕೆಗಳನ್ನು ಕೂಡಲೇ ಮರಳಿಸಬೇಕು ಎಂದು ಸೂಚಿಸಲಾಗಿದೆ. ಈವರೆಗೆ ಬಳಸಿದ ಲಸಿಕಾ ಡೋಸ್‌ಗಳ ಪ್ರಮಾಣವನ್ನು ತಯಾರಕರಿಂದ ಖರೀದಿಸಿ ವಾಪಸ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಲಸಿಕೆ ನಿಧಿಯಲ್ಲಿ ಆಸ್ಪತ್ರೆಗಳು ಠೇವಣಿ ಇಟ್ಟ ಹಣವನ್ನು ಹಿಂದಿರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶವನ್ನು ಹಿಂಪಡೆಯುವ ಸ್ವಲ್ಪ ಸಮಯದ ಮೊದಲು, ಕೇಂದ್ರವು ರಾಜ್ಯಕ್ಕೆ ಪತ್ರ ಬರೆದಿದ್ದು, “ಈ ವಿಷಯದಲ್ಲಿ ತಕ್ಷಣವೇ ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟೀಕರಣ ನೀಡುವಂತೆ ಕೇಳಿತ್ತು.

ಲಸಿಕೆಗಳ ಮೇಲೆ ನನಗೆ ನಿಯಂತ್ರಣವಿಲ್ಲ ಎಂದು ಪಂಜಾಬ್ ಆರೋಗ್ಯ ಸಚಿವ ಬಿ.ಎಸ್.. ಸಿಧು ಶುಕ್ರವಾರ ಮುಂಜಾನೆ ತಿಳಿಸಿದ್ದರು. “ನಾನು ಚಿಕಿತ್ಸೆ, ಪರೀಕ್ಷೆ, ಕೋವಿಡ್ ಮಾದರಿ ಮತ್ತು ಲಸಿಕಾ ಶಿಬಿರಗಳನ್ನು ನೋಡಿಕೊಳ್ಳುತ್ತಿದ್ದೇನೆ. ನಾವು ಖಂಡಿತವಾಗಿಯೂ ವಿಚಾರಣೆಯನ್ನು ನಡೆಸುತ್ತೇವೆ. ನಾನೇ ವಿಚಾರಿಸಬಹುದು” ಎಂದು ಸಿಧು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಸಂಭವನೀಯ ಭಿನ್ನಮತವನ್ನು ಅಮರಿಂದರ್ ಸಿಂಗ್ ಸರ್ಕಾರ ಎದುರಿಸುತ್ತಿದೆ. ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಬಾದಲ್ ಅವರು, 40,000 ಡೋಸ್ ಕೋವಾಕ್ಸಿನ್ ಅನ್ನು ಹೆಚ್ಚಿನ ದರದಲ್ಲಿ ಮರು ಮಾರಾಟ ಮಾಡಲಾಗಿದೆ ಎಂದು ಗುರುವಾರ ಹೇಳಿದ ನಂತರ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು.

ಡೋಸೇಜ್‌ಗೆ 400 ರೂ. ದರದಲ್ಲಿ ಖರೀದಿಸಲಾಗಿದೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 1,060 ರೂ,ಗೆ ಮಾರಾಟ ಮಾಡಲಾಗಿದೆ. ಆಸ್ಪತ್ರೆಗಳು ಅದನ್ನು ಅರ್ಹ ಫಲಾನುಭವಿಗಳಿಗೆ ಪ್ರತಿ ಡೋಸ್‌ಗೆ 1,560 ರೂ.ಗೆ ನೀಡಿವೆ ಎಂದು ಬಾದಲ್ ಹೇಳಿದ್ದಾರೆ.

ರಾಷ್ಟ್ರೀಯ ಲಸಿಕಾ ನೀತಿಯ ಬಗ್ಗೆ ತೀವ್ರವಾಗಿ ಟೀಕಿಸಿದ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಪ್ರಕಾಶ್ ಜಾವಡೇಕರ್ ಅವರು ಇಂದು ಮಧ್ಯಾಹ್ನ ಪಂಜಾಬ್ ವಿಷಯ ಉಲ್ಲೇಖಿಸಿ ಟೀಕೆ ಮಾಡಿದ್ದಾರೆ.

ಗುರುವಾರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಕೂಡ ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಎಎನ್‌ಐ ಪ್ರಕಾರ ಅವರು, “ಜನರ ಬಗ್ಗೆ ಪಂಜಾಬ್ ಸರ್ಕಾರ ಕಠಿಣ ಮನೋಭಾವ” ತೋರಿಸುತ್ತಿದೆ’ ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಲಸಿಕೆಯ ಕಡಿಮೆ ದಾಸ್ತಾನು ಹೊಂದಿರುವ ಹಲವಾರು ರಾಜ್ಯಗಳಲ್ಲಿ ಪಂಜಾಬ್ ಕೂಡ ಸೇರಿದೆ.

ಲಸಿಕೆ ಸರಬರಾಜು ವಿಷಯವು ಕೇಂದ್ರ ಮತ್ತು ಹಲವಾರು ರಾಜ್ಯಗಳ ನಡುವೆ ವಿವಾದದ ವಿಷಯವಾಗಿ ಮಾರ್ಪಟ್ಟಿದೆ.. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಲಸಿಕೆ ಕೊರತೆಯಿಂದ ಪದೇ ಪದೇ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ್ದವು. ಅದರಲ್ಲೂ ವಿಶೇಷವಾಗಿ 18-44 ವಯೋಮಾನದವರಿಗೆ, 45 ವರ್ಷಕ್ಕಿಂತ ಮೇಲ್ಪಟ್ಟವರಂತೆ ನೀಡಿದಂತೆ ಉಚಿತವಾಗಿ ನೀಡಲಾಗಿಲ್ಲ, ಕೇಂದ್ರವು ಅಗತ್ಯವಿರುವ ಶೇಕಡಾ 50 ರಷ್ಟು ಪ್ರಮಾಣವನ್ನು ಮಾತ್ರ ಒದಗಿಸುತ್ತದೆ. ಅದರ ಹೊಸ ನೀತಿಯಡಿಯಲ್ಲಿ ಉಳಿದವುಗಳನ್ನು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ನೇರವಾಗಿ ಉತ್ಪಾದಕರಿಂದ ಖರೀದಿಸಬೇಕು.

ಕೇಂದ್ರವು ಪ್ರತಿ ಡೋಸ್‌ಗೆ 150 ರೂ. ಪಾವತಿಸಿದರೆ, ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳಿಗೆ 1,200 ರೂ.ಗೆ ನೀಡಲಾಗುತ್ತಿದೆ. ಈ ದರ ವ್ಯತ್ಯಾಸವನ್ನು ಸುಪ್ರೀಂಕೋರ್ಟ್ ಕೂಡ ಪ್ರಶ್ನಿಸಿದೆ.
ಕಾಂಗ್ರೆಸ್, ಏಪ್ರಿಲ್‌ನಲ್ಲಿ ಇದನ್ನು ಕೇಂದ್ರದ “ಲಸಿಕೆ ವ್ಯಾಪಾರ” ಎಂದು ದೂಷಿಸಿತ್ತು.

ಡಿಸೆಂಬರ್ ಅಂತ್ಯದ ವೇಳೆಗೆ ಇಡೀ ದೇಶಕ್ಕೆ ಲಸಿಕೆ ನೀಡುವುದಾಗಿ ಕೇಂದ್ರ ಹೇಳಿತ್ತು. ಆದರೆ ಈ ವಾರ ಸುಪ್ರೀಂಕೋರ್ಟ್ ಆ ಗುರಿಯನ್ನು ಹೇಗೆ ಸಾಧಿಸಲು ಯೋಜಿಸಿದೆ ಎಂಬುದರ ಕುರಿತು ಹಲವಾರು ಕಠಿಣ ಪ್ರಶ್ನೆಗಳನ್ನು ಕೇಳಿದೆ.


ಇದನ್ನೂ ಓದಿ: ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...