Homeಮುಖಪುಟನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

- Advertisement -
- Advertisement -

ಮಿಲಿಟರಿ ವಿರುದ್ಧ ಭಿನ್ನಾಭಿಪ್ರಾಯವನ್ನು ಮೂಡಿಸಿದ ಆರೋಪ ಮತ್ತು ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮ್ಯಾನ್ಮಾರ್‌‌ನ ಉಚ್ಛಾಟಿತ ನಾಯಕಿ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್ ಸಾನ್ ಸೂಕಿ ಅವರಿಗೆ ಮ್ಯಾನ್ಮಾರ್ ನ್ಯಾಯಾಲಯವು ಸೋಮವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ.

ಅಶಾಂತಿ ಉಂಟುಮಾಡುವ ಹೇಳಿಕೆಗಳಿಗಾಗಿ ಮ್ಯಾನ್ಮಾರ್ ಕಾನೂನಿನ ಸೆಕ್ಷನ್ 505[b] ಅಡಿಯಲ್ಲಿ ಸೂಕಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ನೈಸರ್ಗಿಕ ವಿಕೋಪ ಕಾನೂನಿನಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ಮ್ಯಾನ್ಮಾರ್ ಮಿಲಿಟರಿ ವಕ್ತಾರ ಮೇಜರ್ ಜನರಲ್ ಜಾವ್ ಮಿನ್ ಟುನ್ ಹೇಳಿದ್ದಾರೆ.

ಲಾಭರಹಿತ ಸಂಸ್ಥೆ ಅಸಿಸ್ಟೆನ್ಸ್ ಅಸೋಸಿಯೇಷನ್ ​​ಪ್ರಕಾರ, ಫೆಬ್ರವರಿಯಿಂದ ಮ್ಯಾನ್ಮಾರ್ ಸೇನೆಯಿಂದ ಬಂಧಿಸಲ್ಪಟ್ಟ 10,600ಕ್ಕೂ ಹೆಚ್ಚು ಜನರಲ್ಲಿ ಸೂಕಿ ಒಬ್ಬರಾಗಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಹತ್ತಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಸೂಕಿ ಫೆಬ್ರವರಿಯಲ್ಲಿ ನಡೆದ ಸೇನಾ ದಂಗೆಯ ನಂತರ ಗೃಹಬಂಧನದಲ್ಲಿದ್ದಾರೆ. ನವೆಂಬರ್ 2020ರಲ್ಲಿ ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಸೂಕಿ ಅವರ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ವಿಜಯ ಸಾಧಿಸಿ ತಿಂಗಳ ನಂತರ ಮ್ಯಾನ್ಮಾರ್‌ನ ಸೈನ್ಯವು ದೇಶದಲ್ಲಿ ಅಧಿಕಾರವನ್ನು ಪಡೆದುಕೊಂಡಿತು.

ಕೊರೋನವೈರಸ್ ಬಿಕ್ಕಟ್ಟಿನ ಹೊರತಾಗಿಯೂ ನವೆಂಬರ್ 2020ರ ಚುನಾವಣೆಯನ್ನು ವಿಳಂಬಗೊಳಿಸುವಲ್ಲಿ ಸರ್ಕಾರದ ವಿಫಲತೆಯ ಪರಿಣಾಮವೇ ದಂಗೆ ಎಂದು ಘೋಷಿಸಲಾಯಿತು. ಮಿಲಿಟರಿಯ ಸ್ವಾಧೀನವು ಹಲವಾರು ರಾಷ್ಟ್ರಗಳ ಟೀಕೆಗೆ ಗುರಿಯಾಯಿತು.

ಇದನ್ನೂ ಓದಿರಿ: ಮಯನ್ಮಾರ್ ಮಿಲಿಟರಿ ದಂಗೆಯ ವಿರುದ್ಧ ಬಂಡಾಯ 8888 ರಿಂದ 2021

ನವೆಂಬರ್ 17ರಂದು, ಮ್ಯಾನ್ಮಾರ್‌ನ ಯೂನಿಯನ್ ಚುನಾವಣಾ ಆಯೋಗವು ಚುನಾವಣೆಯಲ್ಲಿ ವಂಚನೆ ಆರೋಪದ ಮೇಲೆ ಸೂಕಿ ಮತ್ತು ಇತರ 15 ರಾಜಕಾರಣಿಗಳನ್ನು ವಿಚಾರಣೆಗೆ ಒಳಪಡಿಸುವುದಾಗಿ ಹೇಳಿದೆ. ಅವರು ಸ್ಥಳೀಯ ಚುನಾವಣಾ ಅಧಿಕಾರಿಗಳನ್ನು ಮಿಲಿಟರಿ ಮತಗಟ್ಟೆಗಳಿಗೆ ಅಡ್ಡಿಪಡಿಸಲು ಒತ್ತಾಯಿಸಿದರು ಮತ್ತು ಅನರ್ಹ ಮತದಾರರನ್ನು ಒಳಗೊಂಡಿರುವ ಮತದಾನ ಪಟ್ಟಿಗಳನ್ನು ಅನುಮೋದಿಸಲು ಅಧಿಕಾರಿಗಳನ್ನು ಒತ್ತಾಯಿಸಿದರು ಎಂದು ಹೊಸ ಚುನಾವಣಾ ಆಯೋಗ ಆರೋಪಿಸಿದೆ.

ಮ್ಯಾನ್ಮಾರ್‌ನ ಮಿಲಿಟರಿ ನಾಯಕ, ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್, ಚುನಾಯಿತ ಸರ್ಕಾರದಿಂದ ಅಧಿಕಾರವನ್ನು ವಶಪಡಿಸಿಕೊಂಡ ಆರು ತಿಂಗಳ ನಂತರ ಸ್ವತಃ ತಾವೇ ಪ್ರಧಾನ ಮಂತ್ರಿ ಎಂದು ಘೋಷಿಸಿಕೊಂಡಿದ್ದರು. ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.

ತೀರ್ಪಿನ ಬಳಿಕ ಹಿಂಸಾಚಾರ

ಸೂಕಿ ಅವರ ವಿರುದ್ಧ ತೀರ್ಪು ಹೊರಬೀಳುವ ಹಿನ್ನೆಲೆಯಲ್ಲಿ ಯಾಂಗೋನ್ ಸೇರಿ ದೇಶದ ಹಲವು ಭಾಗಗಳಲ್ಲಿ ಶಾಂತಿಯುತ ಮೆರವಣಿಗೆ ಭಾನುವಾರ ನಡೆದಿದ್ದು, ಯಾಂಗೋನ್​ನಲ್ಲಿ ಪ್ರತಿಭಟನಾನಿರತರ ಮೇಲೆ ಸೇನಾ ವಾಹನ ಹರಿದಿರುವ ವರದಿಗಳಾಗಿವೆ.


ಇದನ್ನೂ ಓದಿರಿ: ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...