Homeಚಳವಳಿರೈತ ಹೋರಾಟ: ನೋಬೆಲ್ ಪುರಸ್ಕೃತೆ, ಹೋರಾಟಗಾರ್ತಿ ಮಲಾಲಾ ಯೂಸುಫ್ ಬೆಂಬಲ

ರೈತ ಹೋರಾಟ: ನೋಬೆಲ್ ಪುರಸ್ಕೃತೆ, ಹೋರಾಟಗಾರ್ತಿ ಮಲಾಲಾ ಯೂಸುಫ್ ಬೆಂಬಲ

ಭಾರತ ಮತ್ತು ಪಾಕಿಸ್ತಾನಗಳು ನಿಜವಾದ ಉತ್ತಮ ಸ್ನೇಹಿತರಾಗುವುದು ಮತ್ತು ನಾವು ಪರಸ್ಪರರ ದೇಶಗಳಿಗೆ ಭೇಟಿ ನೀಡುವುದನ್ನು ನೋಡುವುದು ನನ್ನ ಕನಸು-ಮಲಾಲಾ ಯೂಸುಫ್ ಝೈ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ನೋಬೆಲ್ ಪ್ರಶಸ್ತಿ ವಿಜೇತೆ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್‌ ಝೈ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನೀತಿಗಳ ವಿರುದ್ಧ ದನಿ ಎತ್ತಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, ಕಾರ್ಯಕರ್ತರ ಬಂಧನ ಹಾಗೂ ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಿದ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನ ಮೂಲದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಪ್ರಶ್ನಿಸಿದ್ದಾರೆ.

ಜೈಪುರ್ ಸಾಹಿತ್ಯ ಸಮ್ಮೇಳನ (JLF)ದಲ್ಲಿ, ವಿಡಿಯೋ ಕಾನ್ಫರೆನ್ಸ್​ ಮೂಲಕ ತಮ್ಮ ಪುಸ್ತಕ ’I Am Malala: The Story of the Girl Who Stood Up for Education and was Shot by the Taliban’ ಕುರಿತು ಮಲಾಲಾ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಪಾಕಿಸ್ತಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್‌ ಝೈ, 2012 ರ ಅಕ್ಟೋಬರ್‌ನಲ್ಲಿ ತಾಲಿಬಾನ್‌ನಿಂದ ಗುಂಡೇಟಿಗೆ ಒಳಗಾಗಿಯೂ ಬದುಕುಳಿದಿದ್ದರು.

ಭಾರತದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ಮತ್ತು ಕಾರ್ಯಕರ್ತರ ಬಂಧನದ ಸುದ್ದಿ ಚಿಂತಾಜನಕವಾಗಿದೆ. ಪ್ರತಿಭಟನಾ ಸ್ಥಳಗಳಲ್ಲಿ ಅಂತರ್ಜಾಲ ಸ್ಥಗಿತ ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ.

ಚರ್ಚೆಯ ಸಮಯದಲ್ಲಿ, ಅವರು ಮಾನವ ಹಕ್ಕುಗಳಿಗಾಗಿ ಹೋರಾಡುವ ಭಾರತೀಯ ಬಾಲಕಿಯರು ಮತ್ತು ಯುವತಿಯರನ್ನು ಶ್ಲಾಘಿಸಿದರು. “ಭಾರತದ ರೈತರಿಗಾಗಿ ಧ್ವನಿ ಎತ್ತುತ್ತಾರೆ. ಹವಾಮಾನ ಬದಲಾವಣೆ ಮತ್ತು ಅಲ್ಪಸಂಖ್ಯಾತ ಹಕ್ಕುಗಳ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಈ ಯುವತಿಯರ ಕೆಲಸ ಸ್ಪೂರ್ತಿದಾಯಕ” ಎಂದು ಬೆಂಗಳೂರಿನ ದಿಶಾ ರವಿ ಅವರನ್ನು ಬೆಂಬಲಿಸಿದ್ದಾರೆ.

“ನೀವು ಅವರ ರಾಜಕೀಯ ಅಭಿಪ್ರಾಯವನ್ನು ಒಪ್ಪದೇ ಇರಬಹುದು. ಹಾಗೆಂದು ನೀವು ಅವರನ್ನು ಜೈಲಿನಲ್ಲಿ ಇರಿಸುವುದು ಅಥವಾ ಬಂಧಿಸುವುದು ಸರಿಯಲ್ಲ. ಮಹಿಳೆಯರು ಮತ್ತು ಯುವತಿಯರು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಯೂ ಅವರ ರಾಜಕೀಯ ಅಭಿಪ್ರಾಯಗಳನ್ನು ಎತ್ತಿ ತೋರಿಸುವುದು ಪ್ರಜಾಪ್ರಭುತ್ವದ ಹಕ್ಕಾಗಿದೆ. ಆದ್ದರಿಂದ ಜನರು ಶಾಂತಿಯುತವಾಗಿ ಪ್ರತಿಭಟಿಸಬಹುದು ಮತ್ತು ಅವರ ಹಕ್ಕುಗಳನ್ನು ಕೇಳಬಹುದು ಮತ್ತು ಅವರ ದನಿಯನ್ನು ಸರ್ಕಾರ ಕೇಳುತ್ತದೆ ಎಂದು ನಾನು ಭಾವಿಸುತ್ತೇನೆ “ಎಂದು ಮಲಾಲಾ ಹೇಳಿದರು.

ಇದರ ಜೊತೆಗೆ, “ಭಾರತ ಮತ್ತು ಪಾಕಿಸ್ತಾನಗಳು ನಿಜವಾದ ಉತ್ತಮ ಸ್ನೇಹಿತರಾಗುವುದು ಮತ್ತು ನಾವು ಪರಸ್ಪರರ ದೇಶಗಳಿಗೆ ಭೇಟಿ ನೀಡುವುದನ್ನು ನೋಡುವುದು ನನ್ನ ಕನಸು. ನೀವು ಪಾಕಿಸ್ತಾನಿ ನಾಟಕಗಳನ್ನು ನೋಡುವುದನ್ನು ಮುಂದುವರಿಸಬಹುದು, ನಾವು ಬಾಲಿವುಡ್ ಚಲನಚಿತ್ರಗಳನ್ನು ನೋಡುವುದನ್ನು ಮುಂದುವರಿಸಬಹುದು ಮತ್ತು ಕ್ರಿಕೆಟ್ ಪಂದ್ಯಗಳನ್ನು ಆನಂದಿಸಬಹುದು” ಎಂದು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಹೇಳಿದ್ದಾರೆ.


ಇದನ್ನೂ ಓದಿ: ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...