Homeಅಂತರಾಷ್ಟ್ರೀಯನೊಬೆಲ್ ಶಾಂತಿ ಪ್ರಶಸ್ತಿ-2021 ಘೋಷಣೆ

ನೊಬೆಲ್ ಶಾಂತಿ ಪ್ರಶಸ್ತಿ-2021 ಘೋಷಣೆ

- Advertisement -
- Advertisement -

ಪತ್ರಕರ್ತರಾದ ಮರಿಯಾ ರೆಸ್ಸಾ ಮತ್ತು ಡಿಮಿಟ್ರಿ ಮುರಾಟೋವ್ ಅವರು ಫಿಲಿಪೈನ್ಸ್ ಮತ್ತು ರಷ್ಯಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ನಡೆಸಿದ ಹೋರಾಟಕ್ಕಾಗಿ ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ನೊಬೆಲ್ ಸಮಿತಿಯು ಈ ಜೋಡಿಯನ್ನು “ಆದರ್ಶಕ್ಕಾಗಿ ನಿಲ್ಲುವ ಎಲ್ಲಾ ಪತ್ರಕರ್ತರ ಪ್ರತಿನಿಧಿಗಳು” ಎಂದು ಬಣ್ಣಿಸಿದೆ.

ಇಬ್ಬರು ಪತ್ರಕರ್ತರೂ ತಮ್ಮ ದೇಶಗಳ ಆಡಳಿತಗಾರರ ಕೋಪಕ್ಕೆ ಗುರಿಯಾದವರಾಗಿದ್ದು, ಭಾರಿ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿಯು ಚಿನ್ನದ ಪದಕ ಮತ್ತು 10 ಮಿಲಿಯನ್ ಸ್ವೀಡಿಷ್ ಕ್ರೋನರ್ (8.5 ಕೋಟಿ ರೂ.) ನಗದು ಬಹುಮಾನವನ್ನು ಹೊಂದಿದೆ. ನೊಬೆಲ್ ಪ್ರಶಸ್ತಿಯನ್ನು ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ಅರ್ಥಶಾಸ್ತ್ರ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡಿರುವವರಿಗೆ ನೀಡಲಾಗುತ್ತದೆ.

ಇದನ್ನೂ ಓದಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ಸಾಹಿತ್ಯಕ್ಕೆ ನೀಡುವ ಈ ವರ್ಷದ ನೊಬೆಲ್‌ ಪ್ರಶಸ್ತಿಯನ್ನು ತಾಂಜೇನಿಯಾದ ಬರಹಗಾರ ಅಬ್ದುಲ್ ರಜಾಕ್ ಗುರ್ನಾ ಅವರಿಗೆ ಗುರುವಾರ ಘೋಷಿಸಲಾಗಿದೆ. ವಶಾಹತುಶಾಹಿಯ ಪರಿಣಾಮಗಳ ಕುರಿತಾಗಿ ರಾಜಿರಹಿತ ಮತ್ತು ನಿರಂತರ ಕೆಲಸಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಪ್ರಶಸ್ತಿಯನ್ನು ನೀಡುವ ಅಕಾಡೆಮಿ ಹೇಳಿದೆ.

ಸೋಮವಾರದಂದು, ನೊಬೆಲ್ ಸಮಿತಿಯು ಅಮೆರಿಕನ್ನರಾದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್ ಅವರಿಗೆ ಶರೀರಶಾಸ್ತ್ರ ಅಥವಾ ವೈದ್ಯಕೀಯ ನೋಬೆಲ್ ಅನ್ನು ಘೋಷಿಸಿತ್ತು.

ಮಂಗಳವಾರದಂದು ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಮೂವರು ವಿಜ್ಞಾನಿಗಳಾದ ಕ್ಲಾಸ್ ಹ್ಯಾಸೆಲ್ಮನ್, ಜಾರ್ಜಿಯೊ ಪ್ಯಾರಿಸಿ, ಸಿಯುಕುರೊ ಮನಾಬೆ ಅವರಿಗೆ ನೀಡಲಾಗಿದೆ.

ಬೆಂಜಮಿನ್ ಲಿಸ್ಟ್‌, ಡೇವಿಡ್ ಮ್ಯಾಕ್‌ಮಿಲನ್ ಮತ್ತು ಜೆನ್ನಿಫರ್ ಡೌಡ್ನಾ ಅವರಿಗೆ ರಸಾಯನಶಾಸ್ತ್ರಕ್ಕಾಗಿ ನೊಬೆಲ್ ಪ್ರಶಸ್ತಿಯನ್ನು ಬುಧವಾರ ಘೋಷಿಸಲಾಗಿದೆ.

ಅರ್ಥಶಾಸ್ತ್ರ ಕ್ಷೇತ್ರಗಳಲ್ಲಿ ಗಮನಾರ್ಹ ಕೆಲಸ ಮಾಡಿದ್ದಕ್ಕಾಗಿ ಇನ್ನಷ್ಟೇ ಪ್ರಶಸ್ತಿಯನ್ನು ಘೋಷಿಸಬೇಕಿದೆ.

ಇದನ್ನೂ ಓದಿ: ವೈದ್ಯಕೀಯ ನೊಬೆಲ್-2021 ಪ್ರಶಸ್ತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...