Homeಅಂತರಾಷ್ಟ್ರೀಯಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟಕ್ಕಾಗಿ 20 ಕ್ಕೂ ಹೆಚ್ಚು ದೇಶಗಳಲ್ಲಿ ನಿಯೋಜಿಸಲಾಗಿರುವ ಕ್ಯೂಬಾದ ವೈದ್ಯಕೀಯ ದಳವಾದ ’ಹೆನ್ರಿ ರೀವ್‌’‌ಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವಂತೆ ಫ್ರೆಂಚ್ ಸಂಘ ಕ್ಯೂಬಾ ಲಿಂಡಾ ಪ್ರತಿಪಾದಿಸಿದೆ.

ಕೊರೊನಾ ಸಾಂಕ್ರಮಿಕ ಹರಡುತ್ತಿರುವಾಗ ಇತರ ದೇಶಗಳಿಗೆ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದ ಕ್ಯೂಬಾ ದೇಶವನ್ನು ವಿಶ್ವದಾದ್ಯಂತ ಜನರು ಅಭಿನಂಧಿಸಿದ್ದರು. ವೈದ್ಯಕೀಯ ನೆರವಿಗಾಗಿ ಕ್ಯೂಬಾ ಈ ಹಿಂದೆಯೂ ತನ್ನ ತಂಡವನ್ನು ಬೇರೆ ಬೇರೆ ಸಂದರ್ಭದಲ್ಲಿ ಕಳುಹಿಸಿತ್ತು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ, ಕ್ಯೂಬಾ ತನ್ನ ಮೊದಲ ಕಾರ್ಯಾಚರಣೆಯನ್ನು ಕೊರೊನಾ ಪೀಡಿತ ಪ್ರದೇಶವಾದ ಇಟಲಿಯ ಲೊಂಬಾರ್ಡಿಗೆ ಕಳುಹಿಸಿತ್ತು. ಇಟಲಿಯ ನಂತರ, ವೆನಿಜುವೆಲಾ, ನಿಕರಾಗುವಾ, ಬೆಲೀಜ್, ಸುರಿನಾಮ್, ಡೊಮಿನಿಕಾ, ಸೇಂಟ್ ಲೂಸಿಯಾ, ಮೆಕ್ಸಿಕೊ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಆಂಟಿಗುವಾ ಮತ್ತು ಬಾರ್ಬುಡಾ, ಜಮೈಕಾ, ಹೊಂಡುರಾಸ್, ಗ್ರೆನಡಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಬಾರ್ಬಡೋಸ್, ಹೈಟಿ, ಅಂಡೋರಾ, ಅಂಗೋಲಾ, ಟೋಗೊ, ಸೇಂಟ್ ಥಾಮಸ್ ಮತ್ತು ಪ್ರಿನ್ಸ್, ಕತಾರ್, ಕೇಪ್ ವರ್ಡೆ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ನರವಿಗಾಗಿ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದೆ.


ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?


ಕ್ಯೂಬಾ ಕ್ರಾಂತಿಕಾರಿ ಹಾಗೂ ಮಾಜಿ ಅಧ್ಯಕ್ಷರಾದ ಫಿಡೆಲ್ ಕ್ಯಾಸ್ಟ್ರೊ ಕ್ಯೂಬಾದ ವೈದ್ಯರನ್ನು ಕ್ಯೂಬಾದ “ಬಿಳಿ ಕೋಟುಗಳ ಸೈನ್ಯ” ಎಂದು ವ್ಯಾಖ್ಯಾನಿಸಿದ್ದರು. ಹಲವಾರು ವರ್ಷಗಳಿಂದ ಈ ಸೈನ್ಯವು ಸಾರ್ಸ್, ಎಬೋಲಾ, ಕಾಲರಾ ಮುಂತಾದ ಮಾರಣಾಂತಿಕ ವೈರಸ್‌ಗಳ ವಿರುದ್ದ ಹೋರಾಡಲು ಹಲವಾರು ದೇಶಗಳಿಗೆ ಸಹಾಯ ಮಾಡಿತ್ತು.

ಕ್ಯೂಬಾದ ಹೆನ್ರಿ ರೀವ್ ಅಂತರಾಷ್ಟ್ರೀಯ ವೈದ್ಯಕೀಯ ದಳ 2005 ಮತ್ತು 2017 ರ ನಡುವೆ 21 ದೇಶಗಳಲ್ಲಿ 3.5 ಮಿಲಿಯನ್ ಜನರಿಗೆ ಸಹಾಯ ಮಾಡಿದೆ.

ಕ್ಯೂಬನ್ ಕ್ರಾಂತಿಯ ಆರಂಭಿಕ ದಿನಗಳಿಂದಲೂ, ನಾಯಕ ಫಿಡೆಲ್ ಕ್ಯಾಸ್ಟ್ರೊ ದೇಶವನ್ನು ನಿರ್ಮಿಸುವಲ್ಲಿ ಸಾರ್ವತ್ರಿಕ ಮುಕ್ತ ಆರೋಗ್ಯ ರಕ್ಷಣೆ ಮತ್ತು ಶಿಕ್ಷಣವು ಪ್ರಮುಖ ತಂತ್ರವಾಗಿದೆ ಎಂದು ನಂಬಿದ್ದರು. ಕ್ಯೂಬಾದಲ್ಲಿ ಅಮೆರಿಕಾಗಿಂತ ತಲಾ ಮೂರು ಪಟ್ಟು ಹೆಚ್ಚು ವೈದ್ಯರಿದ್ದಾರೆ.

ಕ್ಯೂಬಾದ ಆರೋಗ್ಯ ಮಂತ್ರಿ ಜೋಸ್ ಏಂಜಲ್ ಪೋರ್ಟಲ್ ಮಿರಾಂಡಾ ಒಂದು ತಿಂಗಳ ಹಿಂದೆ ಟ್ವೀಟ್ ಮಾಡಿ ““ಕ್ಯೂಬಾ ಹಲವು ಬಾರಿ ಸಹಾಯಕ್ಕೆ ಕೈ ಚಾಚಿದೆ ಆದರೆ ಇಷ್ಟು ಕಡಿಮೆ ಸಮಯದಲ್ಲಿ ಇಷ್ಟು ಬಾರಿ ಸಹಾಯ ಮಾಡಿದ್ದು ಇದು ಮೊದಲ ಬಾರಿಯಗಿದೆ. ಕಳೆದ ವಾರದಲ್ಲಿ ಹೆನ್ರಿ ರೀವ್ ಬ್ರಿಗೇಡ್ ಪ್ರತಿ ಸೂರ್ಯೋದಯದೊಂದಿಗೆ ಹೊರಟಿದೆ. ಹೀಗಾಗಿದ್ದು ಇದುವೇ ಮೊದಲು, ಈಗಾಗಲೇ ಒಟ್ಟು 11 ಬಾರಿ ಅದು ಇಲ್ಲಿಂದ ಹೊರಟಿದೆ”

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು. ಜಗತ್ತು ಒಗ್ಗಟ್ಟಿನಲ್ಲಿ ನಿಲ್ಲಬೇಕಾದ ಈ ಕಾಲದಲ್ಲಿ, ‘ಬಿಳಿ ಕೋಟುಗಳ ಸೈನ್ಯ’ ಮಾಡಿದ ಮಾನವೀಯ ಕಾರ್ಯಗಳು ಮಹತ್ವದ್ದಾಗಿದೆ ಎಂದು ಅಂತರಾಷ್ಟೀಯ ಸಮುದಾಯ ಅಮೆರಿಕಾಕ್ಕೆ ತಿರುಗೆಟು ನೀಡಿತ್ತು.


ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ


ಇದೇ ಸುದ್ದಿಯನ್ನು ಇನ್ನಷ್ಟು ವಿಸ್ತಾರವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...