Homeಅಂತರಾಷ್ಟ್ರೀಯಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟಕ್ಕಾಗಿ 20 ಕ್ಕೂ ಹೆಚ್ಚು ದೇಶಗಳಲ್ಲಿ ನಿಯೋಜಿಸಲಾಗಿರುವ ಕ್ಯೂಬಾದ ವೈದ್ಯಕೀಯ ದಳವಾದ ’ಹೆನ್ರಿ ರೀವ್‌’‌ಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವಂತೆ ಫ್ರೆಂಚ್ ಸಂಘ ಕ್ಯೂಬಾ ಲಿಂಡಾ ಪ್ರತಿಪಾದಿಸಿದೆ.

ಕೊರೊನಾ ಸಾಂಕ್ರಮಿಕ ಹರಡುತ್ತಿರುವಾಗ ಇತರ ದೇಶಗಳಿಗೆ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದ ಕ್ಯೂಬಾ ದೇಶವನ್ನು ವಿಶ್ವದಾದ್ಯಂತ ಜನರು ಅಭಿನಂಧಿಸಿದ್ದರು. ವೈದ್ಯಕೀಯ ನೆರವಿಗಾಗಿ ಕ್ಯೂಬಾ ಈ ಹಿಂದೆಯೂ ತನ್ನ ತಂಡವನ್ನು ಬೇರೆ ಬೇರೆ ಸಂದರ್ಭದಲ್ಲಿ ಕಳುಹಿಸಿತ್ತು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ, ಕ್ಯೂಬಾ ತನ್ನ ಮೊದಲ ಕಾರ್ಯಾಚರಣೆಯನ್ನು ಕೊರೊನಾ ಪೀಡಿತ ಪ್ರದೇಶವಾದ ಇಟಲಿಯ ಲೊಂಬಾರ್ಡಿಗೆ ಕಳುಹಿಸಿತ್ತು. ಇಟಲಿಯ ನಂತರ, ವೆನಿಜುವೆಲಾ, ನಿಕರಾಗುವಾ, ಬೆಲೀಜ್, ಸುರಿನಾಮ್, ಡೊಮಿನಿಕಾ, ಸೇಂಟ್ ಲೂಸಿಯಾ, ಮೆಕ್ಸಿಕೊ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಆಂಟಿಗುವಾ ಮತ್ತು ಬಾರ್ಬುಡಾ, ಜಮೈಕಾ, ಹೊಂಡುರಾಸ್, ಗ್ರೆನಡಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಬಾರ್ಬಡೋಸ್, ಹೈಟಿ, ಅಂಡೋರಾ, ಅಂಗೋಲಾ, ಟೋಗೊ, ಸೇಂಟ್ ಥಾಮಸ್ ಮತ್ತು ಪ್ರಿನ್ಸ್, ಕತಾರ್, ಕೇಪ್ ವರ್ಡೆ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ನರವಿಗಾಗಿ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದೆ.


ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?


ಕ್ಯೂಬಾ ಕ್ರಾಂತಿಕಾರಿ ಹಾಗೂ ಮಾಜಿ ಅಧ್ಯಕ್ಷರಾದ ಫಿಡೆಲ್ ಕ್ಯಾಸ್ಟ್ರೊ ಕ್ಯೂಬಾದ ವೈದ್ಯರನ್ನು ಕ್ಯೂಬಾದ “ಬಿಳಿ ಕೋಟುಗಳ ಸೈನ್ಯ” ಎಂದು ವ್ಯಾಖ್ಯಾನಿಸಿದ್ದರು. ಹಲವಾರು ವರ್ಷಗಳಿಂದ ಈ ಸೈನ್ಯವು ಸಾರ್ಸ್, ಎಬೋಲಾ, ಕಾಲರಾ ಮುಂತಾದ ಮಾರಣಾಂತಿಕ ವೈರಸ್‌ಗಳ ವಿರುದ್ದ ಹೋರಾಡಲು ಹಲವಾರು ದೇಶಗಳಿಗೆ ಸಹಾಯ ಮಾಡಿತ್ತು.

ಕ್ಯೂಬಾದ ಹೆನ್ರಿ ರೀವ್ ಅಂತರಾಷ್ಟ್ರೀಯ ವೈದ್ಯಕೀಯ ದಳ 2005 ಮತ್ತು 2017 ರ ನಡುವೆ 21 ದೇಶಗಳಲ್ಲಿ 3.5 ಮಿಲಿಯನ್ ಜನರಿಗೆ ಸಹಾಯ ಮಾಡಿದೆ.

ಕ್ಯೂಬನ್ ಕ್ರಾಂತಿಯ ಆರಂಭಿಕ ದಿನಗಳಿಂದಲೂ, ನಾಯಕ ಫಿಡೆಲ್ ಕ್ಯಾಸ್ಟ್ರೊ ದೇಶವನ್ನು ನಿರ್ಮಿಸುವಲ್ಲಿ ಸಾರ್ವತ್ರಿಕ ಮುಕ್ತ ಆರೋಗ್ಯ ರಕ್ಷಣೆ ಮತ್ತು ಶಿಕ್ಷಣವು ಪ್ರಮುಖ ತಂತ್ರವಾಗಿದೆ ಎಂದು ನಂಬಿದ್ದರು. ಕ್ಯೂಬಾದಲ್ಲಿ ಅಮೆರಿಕಾಗಿಂತ ತಲಾ ಮೂರು ಪಟ್ಟು ಹೆಚ್ಚು ವೈದ್ಯರಿದ್ದಾರೆ.

ಕ್ಯೂಬಾದ ಆರೋಗ್ಯ ಮಂತ್ರಿ ಜೋಸ್ ಏಂಜಲ್ ಪೋರ್ಟಲ್ ಮಿರಾಂಡಾ ಒಂದು ತಿಂಗಳ ಹಿಂದೆ ಟ್ವೀಟ್ ಮಾಡಿ ““ಕ್ಯೂಬಾ ಹಲವು ಬಾರಿ ಸಹಾಯಕ್ಕೆ ಕೈ ಚಾಚಿದೆ ಆದರೆ ಇಷ್ಟು ಕಡಿಮೆ ಸಮಯದಲ್ಲಿ ಇಷ್ಟು ಬಾರಿ ಸಹಾಯ ಮಾಡಿದ್ದು ಇದು ಮೊದಲ ಬಾರಿಯಗಿದೆ. ಕಳೆದ ವಾರದಲ್ಲಿ ಹೆನ್ರಿ ರೀವ್ ಬ್ರಿಗೇಡ್ ಪ್ರತಿ ಸೂರ್ಯೋದಯದೊಂದಿಗೆ ಹೊರಟಿದೆ. ಹೀಗಾಗಿದ್ದು ಇದುವೇ ಮೊದಲು, ಈಗಾಗಲೇ ಒಟ್ಟು 11 ಬಾರಿ ಅದು ಇಲ್ಲಿಂದ ಹೊರಟಿದೆ”

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು. ಜಗತ್ತು ಒಗ್ಗಟ್ಟಿನಲ್ಲಿ ನಿಲ್ಲಬೇಕಾದ ಈ ಕಾಲದಲ್ಲಿ, ‘ಬಿಳಿ ಕೋಟುಗಳ ಸೈನ್ಯ’ ಮಾಡಿದ ಮಾನವೀಯ ಕಾರ್ಯಗಳು ಮಹತ್ವದ್ದಾಗಿದೆ ಎಂದು ಅಂತರಾಷ್ಟೀಯ ಸಮುದಾಯ ಅಮೆರಿಕಾಕ್ಕೆ ತಿರುಗೆಟು ನೀಡಿತ್ತು.


ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ


ಇದೇ ಸುದ್ದಿಯನ್ನು ಇನ್ನಷ್ಟು ವಿಸ್ತಾರವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...