Homeಅಂತರಾಷ್ಟ್ರೀಯಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟಕ್ಕಾಗಿ 20 ಕ್ಕೂ ಹೆಚ್ಚು ದೇಶಗಳಲ್ಲಿ ನಿಯೋಜಿಸಲಾಗಿರುವ ಕ್ಯೂಬಾದ ವೈದ್ಯಕೀಯ ದಳವಾದ ’ಹೆನ್ರಿ ರೀವ್‌’‌ಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವಂತೆ ಫ್ರೆಂಚ್ ಸಂಘ ಕ್ಯೂಬಾ ಲಿಂಡಾ ಪ್ರತಿಪಾದಿಸಿದೆ.

ಕೊರೊನಾ ಸಾಂಕ್ರಮಿಕ ಹರಡುತ್ತಿರುವಾಗ ಇತರ ದೇಶಗಳಿಗೆ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದ ಕ್ಯೂಬಾ ದೇಶವನ್ನು ವಿಶ್ವದಾದ್ಯಂತ ಜನರು ಅಭಿನಂಧಿಸಿದ್ದರು. ವೈದ್ಯಕೀಯ ನೆರವಿಗಾಗಿ ಕ್ಯೂಬಾ ಈ ಹಿಂದೆಯೂ ತನ್ನ ತಂಡವನ್ನು ಬೇರೆ ಬೇರೆ ಸಂದರ್ಭದಲ್ಲಿ ಕಳುಹಿಸಿತ್ತು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ, ಕ್ಯೂಬಾ ತನ್ನ ಮೊದಲ ಕಾರ್ಯಾಚರಣೆಯನ್ನು ಕೊರೊನಾ ಪೀಡಿತ ಪ್ರದೇಶವಾದ ಇಟಲಿಯ ಲೊಂಬಾರ್ಡಿಗೆ ಕಳುಹಿಸಿತ್ತು. ಇಟಲಿಯ ನಂತರ, ವೆನಿಜುವೆಲಾ, ನಿಕರಾಗುವಾ, ಬೆಲೀಜ್, ಸುರಿನಾಮ್, ಡೊಮಿನಿಕಾ, ಸೇಂಟ್ ಲೂಸಿಯಾ, ಮೆಕ್ಸಿಕೊ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಆಂಟಿಗುವಾ ಮತ್ತು ಬಾರ್ಬುಡಾ, ಜಮೈಕಾ, ಹೊಂಡುರಾಸ್, ಗ್ರೆನಡಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಬಾರ್ಬಡೋಸ್, ಹೈಟಿ, ಅಂಡೋರಾ, ಅಂಗೋಲಾ, ಟೋಗೊ, ಸೇಂಟ್ ಥಾಮಸ್ ಮತ್ತು ಪ್ರಿನ್ಸ್, ಕತಾರ್, ಕೇಪ್ ವರ್ಡೆ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ನರವಿಗಾಗಿ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದೆ.


ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?


ಕ್ಯೂಬಾ ಕ್ರಾಂತಿಕಾರಿ ಹಾಗೂ ಮಾಜಿ ಅಧ್ಯಕ್ಷರಾದ ಫಿಡೆಲ್ ಕ್ಯಾಸ್ಟ್ರೊ ಕ್ಯೂಬಾದ ವೈದ್ಯರನ್ನು ಕ್ಯೂಬಾದ “ಬಿಳಿ ಕೋಟುಗಳ ಸೈನ್ಯ” ಎಂದು ವ್ಯಾಖ್ಯಾನಿಸಿದ್ದರು. ಹಲವಾರು ವರ್ಷಗಳಿಂದ ಈ ಸೈನ್ಯವು ಸಾರ್ಸ್, ಎಬೋಲಾ, ಕಾಲರಾ ಮುಂತಾದ ಮಾರಣಾಂತಿಕ ವೈರಸ್‌ಗಳ ವಿರುದ್ದ ಹೋರಾಡಲು ಹಲವಾರು ದೇಶಗಳಿಗೆ ಸಹಾಯ ಮಾಡಿತ್ತು.

ಕ್ಯೂಬಾದ ಹೆನ್ರಿ ರೀವ್ ಅಂತರಾಷ್ಟ್ರೀಯ ವೈದ್ಯಕೀಯ ದಳ 2005 ಮತ್ತು 2017 ರ ನಡುವೆ 21 ದೇಶಗಳಲ್ಲಿ 3.5 ಮಿಲಿಯನ್ ಜನರಿಗೆ ಸಹಾಯ ಮಾಡಿದೆ.

ಕ್ಯೂಬನ್ ಕ್ರಾಂತಿಯ ಆರಂಭಿಕ ದಿನಗಳಿಂದಲೂ, ನಾಯಕ ಫಿಡೆಲ್ ಕ್ಯಾಸ್ಟ್ರೊ ದೇಶವನ್ನು ನಿರ್ಮಿಸುವಲ್ಲಿ ಸಾರ್ವತ್ರಿಕ ಮುಕ್ತ ಆರೋಗ್ಯ ರಕ್ಷಣೆ ಮತ್ತು ಶಿಕ್ಷಣವು ಪ್ರಮುಖ ತಂತ್ರವಾಗಿದೆ ಎಂದು ನಂಬಿದ್ದರು. ಕ್ಯೂಬಾದಲ್ಲಿ ಅಮೆರಿಕಾಗಿಂತ ತಲಾ ಮೂರು ಪಟ್ಟು ಹೆಚ್ಚು ವೈದ್ಯರಿದ್ದಾರೆ.

ಕ್ಯೂಬಾದ ಆರೋಗ್ಯ ಮಂತ್ರಿ ಜೋಸ್ ಏಂಜಲ್ ಪೋರ್ಟಲ್ ಮಿರಾಂಡಾ ಒಂದು ತಿಂಗಳ ಹಿಂದೆ ಟ್ವೀಟ್ ಮಾಡಿ ““ಕ್ಯೂಬಾ ಹಲವು ಬಾರಿ ಸಹಾಯಕ್ಕೆ ಕೈ ಚಾಚಿದೆ ಆದರೆ ಇಷ್ಟು ಕಡಿಮೆ ಸಮಯದಲ್ಲಿ ಇಷ್ಟು ಬಾರಿ ಸಹಾಯ ಮಾಡಿದ್ದು ಇದು ಮೊದಲ ಬಾರಿಯಗಿದೆ. ಕಳೆದ ವಾರದಲ್ಲಿ ಹೆನ್ರಿ ರೀವ್ ಬ್ರಿಗೇಡ್ ಪ್ರತಿ ಸೂರ್ಯೋದಯದೊಂದಿಗೆ ಹೊರಟಿದೆ. ಹೀಗಾಗಿದ್ದು ಇದುವೇ ಮೊದಲು, ಈಗಾಗಲೇ ಒಟ್ಟು 11 ಬಾರಿ ಅದು ಇಲ್ಲಿಂದ ಹೊರಟಿದೆ”

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು. ಜಗತ್ತು ಒಗ್ಗಟ್ಟಿನಲ್ಲಿ ನಿಲ್ಲಬೇಕಾದ ಈ ಕಾಲದಲ್ಲಿ, ‘ಬಿಳಿ ಕೋಟುಗಳ ಸೈನ್ಯ’ ಮಾಡಿದ ಮಾನವೀಯ ಕಾರ್ಯಗಳು ಮಹತ್ವದ್ದಾಗಿದೆ ಎಂದು ಅಂತರಾಷ್ಟೀಯ ಸಮುದಾಯ ಅಮೆರಿಕಾಕ್ಕೆ ತಿರುಗೆಟು ನೀಡಿತ್ತು.


ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ


ಇದೇ ಸುದ್ದಿಯನ್ನು ಇನ್ನಷ್ಟು ವಿಸ್ತಾರವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...