Homeಅಂತರಾಷ್ಟ್ರೀಯಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟಕ್ಕಾಗಿ 20 ಕ್ಕೂ ಹೆಚ್ಚು ದೇಶಗಳಲ್ಲಿ ನಿಯೋಜಿಸಲಾಗಿರುವ ಕ್ಯೂಬಾದ ವೈದ್ಯಕೀಯ ದಳವಾದ ’ಹೆನ್ರಿ ರೀವ್‌’‌ಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವಂತೆ ಫ್ರೆಂಚ್ ಸಂಘ ಕ್ಯೂಬಾ ಲಿಂಡಾ ಪ್ರತಿಪಾದಿಸಿದೆ.

ಕೊರೊನಾ ಸಾಂಕ್ರಮಿಕ ಹರಡುತ್ತಿರುವಾಗ ಇತರ ದೇಶಗಳಿಗೆ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದ ಕ್ಯೂಬಾ ದೇಶವನ್ನು ವಿಶ್ವದಾದ್ಯಂತ ಜನರು ಅಭಿನಂಧಿಸಿದ್ದರು. ವೈದ್ಯಕೀಯ ನೆರವಿಗಾಗಿ ಕ್ಯೂಬಾ ಈ ಹಿಂದೆಯೂ ತನ್ನ ತಂಡವನ್ನು ಬೇರೆ ಬೇರೆ ಸಂದರ್ಭದಲ್ಲಿ ಕಳುಹಿಸಿತ್ತು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ, ಕ್ಯೂಬಾ ತನ್ನ ಮೊದಲ ಕಾರ್ಯಾಚರಣೆಯನ್ನು ಕೊರೊನಾ ಪೀಡಿತ ಪ್ರದೇಶವಾದ ಇಟಲಿಯ ಲೊಂಬಾರ್ಡಿಗೆ ಕಳುಹಿಸಿತ್ತು. ಇಟಲಿಯ ನಂತರ, ವೆನಿಜುವೆಲಾ, ನಿಕರಾಗುವಾ, ಬೆಲೀಜ್, ಸುರಿನಾಮ್, ಡೊಮಿನಿಕಾ, ಸೇಂಟ್ ಲೂಸಿಯಾ, ಮೆಕ್ಸಿಕೊ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಆಂಟಿಗುವಾ ಮತ್ತು ಬಾರ್ಬುಡಾ, ಜಮೈಕಾ, ಹೊಂಡುರಾಸ್, ಗ್ರೆನಡಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಬಾರ್ಬಡೋಸ್, ಹೈಟಿ, ಅಂಡೋರಾ, ಅಂಗೋಲಾ, ಟೋಗೊ, ಸೇಂಟ್ ಥಾಮಸ್ ಮತ್ತು ಪ್ರಿನ್ಸ್, ಕತಾರ್, ಕೇಪ್ ವರ್ಡೆ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ನರವಿಗಾಗಿ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದೆ.


ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?


ಕ್ಯೂಬಾ ಕ್ರಾಂತಿಕಾರಿ ಹಾಗೂ ಮಾಜಿ ಅಧ್ಯಕ್ಷರಾದ ಫಿಡೆಲ್ ಕ್ಯಾಸ್ಟ್ರೊ ಕ್ಯೂಬಾದ ವೈದ್ಯರನ್ನು ಕ್ಯೂಬಾದ “ಬಿಳಿ ಕೋಟುಗಳ ಸೈನ್ಯ” ಎಂದು ವ್ಯಾಖ್ಯಾನಿಸಿದ್ದರು. ಹಲವಾರು ವರ್ಷಗಳಿಂದ ಈ ಸೈನ್ಯವು ಸಾರ್ಸ್, ಎಬೋಲಾ, ಕಾಲರಾ ಮುಂತಾದ ಮಾರಣಾಂತಿಕ ವೈರಸ್‌ಗಳ ವಿರುದ್ದ ಹೋರಾಡಲು ಹಲವಾರು ದೇಶಗಳಿಗೆ ಸಹಾಯ ಮಾಡಿತ್ತು.

ಕ್ಯೂಬಾದ ಹೆನ್ರಿ ರೀವ್ ಅಂತರಾಷ್ಟ್ರೀಯ ವೈದ್ಯಕೀಯ ದಳ 2005 ಮತ್ತು 2017 ರ ನಡುವೆ 21 ದೇಶಗಳಲ್ಲಿ 3.5 ಮಿಲಿಯನ್ ಜನರಿಗೆ ಸಹಾಯ ಮಾಡಿದೆ.

ಕ್ಯೂಬನ್ ಕ್ರಾಂತಿಯ ಆರಂಭಿಕ ದಿನಗಳಿಂದಲೂ, ನಾಯಕ ಫಿಡೆಲ್ ಕ್ಯಾಸ್ಟ್ರೊ ದೇಶವನ್ನು ನಿರ್ಮಿಸುವಲ್ಲಿ ಸಾರ್ವತ್ರಿಕ ಮುಕ್ತ ಆರೋಗ್ಯ ರಕ್ಷಣೆ ಮತ್ತು ಶಿಕ್ಷಣವು ಪ್ರಮುಖ ತಂತ್ರವಾಗಿದೆ ಎಂದು ನಂಬಿದ್ದರು. ಕ್ಯೂಬಾದಲ್ಲಿ ಅಮೆರಿಕಾಗಿಂತ ತಲಾ ಮೂರು ಪಟ್ಟು ಹೆಚ್ಚು ವೈದ್ಯರಿದ್ದಾರೆ.

ಕ್ಯೂಬಾದ ಆರೋಗ್ಯ ಮಂತ್ರಿ ಜೋಸ್ ಏಂಜಲ್ ಪೋರ್ಟಲ್ ಮಿರಾಂಡಾ ಒಂದು ತಿಂಗಳ ಹಿಂದೆ ಟ್ವೀಟ್ ಮಾಡಿ ““ಕ್ಯೂಬಾ ಹಲವು ಬಾರಿ ಸಹಾಯಕ್ಕೆ ಕೈ ಚಾಚಿದೆ ಆದರೆ ಇಷ್ಟು ಕಡಿಮೆ ಸಮಯದಲ್ಲಿ ಇಷ್ಟು ಬಾರಿ ಸಹಾಯ ಮಾಡಿದ್ದು ಇದು ಮೊದಲ ಬಾರಿಯಗಿದೆ. ಕಳೆದ ವಾರದಲ್ಲಿ ಹೆನ್ರಿ ರೀವ್ ಬ್ರಿಗೇಡ್ ಪ್ರತಿ ಸೂರ್ಯೋದಯದೊಂದಿಗೆ ಹೊರಟಿದೆ. ಹೀಗಾಗಿದ್ದು ಇದುವೇ ಮೊದಲು, ಈಗಾಗಲೇ ಒಟ್ಟು 11 ಬಾರಿ ಅದು ಇಲ್ಲಿಂದ ಹೊರಟಿದೆ”

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು. ಜಗತ್ತು ಒಗ್ಗಟ್ಟಿನಲ್ಲಿ ನಿಲ್ಲಬೇಕಾದ ಈ ಕಾಲದಲ್ಲಿ, ‘ಬಿಳಿ ಕೋಟುಗಳ ಸೈನ್ಯ’ ಮಾಡಿದ ಮಾನವೀಯ ಕಾರ್ಯಗಳು ಮಹತ್ವದ್ದಾಗಿದೆ ಎಂದು ಅಂತರಾಷ್ಟೀಯ ಸಮುದಾಯ ಅಮೆರಿಕಾಕ್ಕೆ ತಿರುಗೆಟು ನೀಡಿತ್ತು.


ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ


ಇದೇ ಸುದ್ದಿಯನ್ನು ಇನ್ನಷ್ಟು ವಿಸ್ತಾರವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...