Homeಅಂತರಾಷ್ಟ್ರೀಯಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟಕ್ಕಾಗಿ 20 ಕ್ಕೂ ಹೆಚ್ಚು ದೇಶಗಳಲ್ಲಿ ನಿಯೋಜಿಸಲಾಗಿರುವ ಕ್ಯೂಬಾದ ವೈದ್ಯಕೀಯ ದಳವಾದ ’ಹೆನ್ರಿ ರೀವ್‌’‌ಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವಂತೆ ಫ್ರೆಂಚ್ ಸಂಘ ಕ್ಯೂಬಾ ಲಿಂಡಾ ಪ್ರತಿಪಾದಿಸಿದೆ.

ಕೊರೊನಾ ಸಾಂಕ್ರಮಿಕ ಹರಡುತ್ತಿರುವಾಗ ಇತರ ದೇಶಗಳಿಗೆ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದ ಕ್ಯೂಬಾ ದೇಶವನ್ನು ವಿಶ್ವದಾದ್ಯಂತ ಜನರು ಅಭಿನಂಧಿಸಿದ್ದರು. ವೈದ್ಯಕೀಯ ನೆರವಿಗಾಗಿ ಕ್ಯೂಬಾ ಈ ಹಿಂದೆಯೂ ತನ್ನ ತಂಡವನ್ನು ಬೇರೆ ಬೇರೆ ಸಂದರ್ಭದಲ್ಲಿ ಕಳುಹಿಸಿತ್ತು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ, ಕ್ಯೂಬಾ ತನ್ನ ಮೊದಲ ಕಾರ್ಯಾಚರಣೆಯನ್ನು ಕೊರೊನಾ ಪೀಡಿತ ಪ್ರದೇಶವಾದ ಇಟಲಿಯ ಲೊಂಬಾರ್ಡಿಗೆ ಕಳುಹಿಸಿತ್ತು. ಇಟಲಿಯ ನಂತರ, ವೆನಿಜುವೆಲಾ, ನಿಕರಾಗುವಾ, ಬೆಲೀಜ್, ಸುರಿನಾಮ್, ಡೊಮಿನಿಕಾ, ಸೇಂಟ್ ಲೂಸಿಯಾ, ಮೆಕ್ಸಿಕೊ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಆಂಟಿಗುವಾ ಮತ್ತು ಬಾರ್ಬುಡಾ, ಜಮೈಕಾ, ಹೊಂಡುರಾಸ್, ಗ್ರೆನಡಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಬಾರ್ಬಡೋಸ್, ಹೈಟಿ, ಅಂಡೋರಾ, ಅಂಗೋಲಾ, ಟೋಗೊ, ಸೇಂಟ್ ಥಾಮಸ್ ಮತ್ತು ಪ್ರಿನ್ಸ್, ಕತಾರ್, ಕೇಪ್ ವರ್ಡೆ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ನರವಿಗಾಗಿ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದೆ.


ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?


ಕ್ಯೂಬಾ ಕ್ರಾಂತಿಕಾರಿ ಹಾಗೂ ಮಾಜಿ ಅಧ್ಯಕ್ಷರಾದ ಫಿಡೆಲ್ ಕ್ಯಾಸ್ಟ್ರೊ ಕ್ಯೂಬಾದ ವೈದ್ಯರನ್ನು ಕ್ಯೂಬಾದ “ಬಿಳಿ ಕೋಟುಗಳ ಸೈನ್ಯ” ಎಂದು ವ್ಯಾಖ್ಯಾನಿಸಿದ್ದರು. ಹಲವಾರು ವರ್ಷಗಳಿಂದ ಈ ಸೈನ್ಯವು ಸಾರ್ಸ್, ಎಬೋಲಾ, ಕಾಲರಾ ಮುಂತಾದ ಮಾರಣಾಂತಿಕ ವೈರಸ್‌ಗಳ ವಿರುದ್ದ ಹೋರಾಡಲು ಹಲವಾರು ದೇಶಗಳಿಗೆ ಸಹಾಯ ಮಾಡಿತ್ತು.

ಕ್ಯೂಬಾದ ಹೆನ್ರಿ ರೀವ್ ಅಂತರಾಷ್ಟ್ರೀಯ ವೈದ್ಯಕೀಯ ದಳ 2005 ಮತ್ತು 2017 ರ ನಡುವೆ 21 ದೇಶಗಳಲ್ಲಿ 3.5 ಮಿಲಿಯನ್ ಜನರಿಗೆ ಸಹಾಯ ಮಾಡಿದೆ.

ಕ್ಯೂಬನ್ ಕ್ರಾಂತಿಯ ಆರಂಭಿಕ ದಿನಗಳಿಂದಲೂ, ನಾಯಕ ಫಿಡೆಲ್ ಕ್ಯಾಸ್ಟ್ರೊ ದೇಶವನ್ನು ನಿರ್ಮಿಸುವಲ್ಲಿ ಸಾರ್ವತ್ರಿಕ ಮುಕ್ತ ಆರೋಗ್ಯ ರಕ್ಷಣೆ ಮತ್ತು ಶಿಕ್ಷಣವು ಪ್ರಮುಖ ತಂತ್ರವಾಗಿದೆ ಎಂದು ನಂಬಿದ್ದರು. ಕ್ಯೂಬಾದಲ್ಲಿ ಅಮೆರಿಕಾಗಿಂತ ತಲಾ ಮೂರು ಪಟ್ಟು ಹೆಚ್ಚು ವೈದ್ಯರಿದ್ದಾರೆ.

ಕ್ಯೂಬಾದ ಆರೋಗ್ಯ ಮಂತ್ರಿ ಜೋಸ್ ಏಂಜಲ್ ಪೋರ್ಟಲ್ ಮಿರಾಂಡಾ ಒಂದು ತಿಂಗಳ ಹಿಂದೆ ಟ್ವೀಟ್ ಮಾಡಿ ““ಕ್ಯೂಬಾ ಹಲವು ಬಾರಿ ಸಹಾಯಕ್ಕೆ ಕೈ ಚಾಚಿದೆ ಆದರೆ ಇಷ್ಟು ಕಡಿಮೆ ಸಮಯದಲ್ಲಿ ಇಷ್ಟು ಬಾರಿ ಸಹಾಯ ಮಾಡಿದ್ದು ಇದು ಮೊದಲ ಬಾರಿಯಗಿದೆ. ಕಳೆದ ವಾರದಲ್ಲಿ ಹೆನ್ರಿ ರೀವ್ ಬ್ರಿಗೇಡ್ ಪ್ರತಿ ಸೂರ್ಯೋದಯದೊಂದಿಗೆ ಹೊರಟಿದೆ. ಹೀಗಾಗಿದ್ದು ಇದುವೇ ಮೊದಲು, ಈಗಾಗಲೇ ಒಟ್ಟು 11 ಬಾರಿ ಅದು ಇಲ್ಲಿಂದ ಹೊರಟಿದೆ”

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು. ಜಗತ್ತು ಒಗ್ಗಟ್ಟಿನಲ್ಲಿ ನಿಲ್ಲಬೇಕಾದ ಈ ಕಾಲದಲ್ಲಿ, ‘ಬಿಳಿ ಕೋಟುಗಳ ಸೈನ್ಯ’ ಮಾಡಿದ ಮಾನವೀಯ ಕಾರ್ಯಗಳು ಮಹತ್ವದ್ದಾಗಿದೆ ಎಂದು ಅಂತರಾಷ್ಟೀಯ ಸಮುದಾಯ ಅಮೆರಿಕಾಕ್ಕೆ ತಿರುಗೆಟು ನೀಡಿತ್ತು.


ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ


ಇದೇ ಸುದ್ದಿಯನ್ನು ಇನ್ನಷ್ಟು ವಿಸ್ತಾರವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...