Homeಅಂತರಾಷ್ಟ್ರೀಯಜೈಲಿನಲ್ಲಿರುವ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಜೈಲಿನಲ್ಲಿರುವ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

- Advertisement -
- Advertisement -

ಜೈಲಿನಲ್ಲಿರುವ ಬೆಲರೂಸಿಯನ್ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಬೆಲಾರಸ್‌ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಲ್ಲಿ ಅಲೆಸ್ ಒಬ್ಬರಾಗಿದ್ದಾರೆ ಎಂದು ಬೆಲರೂಸಿಯನ್ ವಿರೋಧ ಪಕ್ಷದ ರಾಜಕಾರಣಿ ಪಾವೆಲ್ ಲತುಷ್ಕೊ ಶುಕ್ರವಾರ ಹೇಳಿದ್ದಾರೆ.

ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಮೆಮೋರಿಯಲ್ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ ಜೊತೆಗೆ ಶುಕ್ರವಾರ ಬೈಲ್ಯಾಟ್ಸ್ಕಿ ಅವರಿಗೂ ಪ್ರಶಸ್ತಿ ನೀಡಲಾಗಿದೆ.

“ಇದು ಅವರಿಗೆ ಮಾತ್ರವಲ್ಲ, ಈಗ ಬೆಲಾರಸ್‌ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಿಗೆ ಸಂದ ಪ್ರಶಸ್ತಿ” ಎಂದು ಲತುಷ್ಕೊ ಅಭಿಪ್ರಾಯಪಟ್ಟಿದ್ದಾರೆ. “ಇದು ನಮ್ಮೆಲ್ಲರನ್ನು ಹೋರಾಟಕ್ಕೆ ಪ್ರೇರೇಪಿಸುತ್ತದೆ. ನಾವು (ಅಲೆಕ್ಸಾಂಡರ್) ಲುಕಾಶೆಂಕೊ ಅವರ ಸರ್ವಾಧಿಕಾರವನ್ನು ಸೋಲಿಸುತ್ತೇವೆ ಎಂಬುದು ಖಚಿತವಾಗಿದೆ” ಎಂದು ತಿಳಿಸಿದ್ದಾರೆ.

ಫ್ರೆಂಚ್‌ ಲೇಖಕಿ ಅನ್ನಿ ಎರ್ನಾಕ್ಸ್‌ಗೆ ಪ್ರಶಸ್ತಿ

ಖ್ಯಾತ ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಅವರು 2022ರ ನೋಬೆಲ್ ಸಾಹಿತ್ಯ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು ತೀರ್ಪುಗಾರರು ಗುರುವಾರ ಹೇಳಿದ್ದಾರೆ. ಲೇಖಕಿಯು ವರ್ಗ ಮತ್ತು ಲಿಂಗ ತಾರತಮ್ಯದ ಬಗೆಗಿನ ಕಾದಂಬರಿಗಳಿಗೆ ಹೆಸರುವಾಸಿಯಾಗಿದ್ದಾರೆ.

82 ವರ್ಷದ ಎರ್ನಾಕ್ಸ್ ಅವರ ಧೈರ್ಯ ಮತ್ತು ಅವರ ಚಿಕಿತ್ಸಕ ದೃಷ್ಟಿಕೋನದ ಚುರುಕುತನಕ್ಕಾಗಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ತೀರ್ಪುಗಾರರು ಹೇಳಿದ್ದಾರೆ. ವಿಜೇತ ನೊಬೆಲ್ ಪ್ರಶಸ್ತಿಯು ಪದಕ ಮತ್ತು 10 ಮಿಲಿಯನ್ ಸ್ವೀಡಿಷ್ ಕ್ರೋನರ್ (ಸುಮಾರು 7.5 ಕೋಟಿ) ಮೊತ್ತವನ್ನು ಹೊಂದಿದೆ.

ಕಳೆದ ವರ್ಷ ಈ ಪ್ರಶಸ್ತಿಯು ಟಾಂಜೇನಿಯಾ ಮೂಲದ ಕಾದಂಬರಿಕಾರ ಅಬ್ದುಲ್‌ ರಜ್ಝಾಕ್‌ ಗುರ್ನಾ ಅವರಿಗೆ ನೀಡಲಾಗಿತ್ತು. ಅವರ ಸಾಹಿತ್ಯವು ನಿರಾಶ್ರಿತರು ಮತ್ತು ಗಡಿಪಾರು ಆಗಿರುವವರು, ವಸಾಹತುಶಾಹಿ ಮತ್ತು ವರ್ಣಭೇದ ನೀತಿಯ ಮೇಲೆ ಕೇಂದ್ರೀಕರಿಸಿತ್ತು.

ಹಲವಾರು ವರ್ಷಗಳಿಂದ ನೊಬೆಲ್ ಸ್ಪರ್ಧೆಯಲ್ಲಿ ಎರ್ನಾಕ್ಸ್ ಅವರ ಹೆಸರು ಕೇಳುತ್ತಲೆ ಬಂದಿದೆ. 1901 ರಲ್ಲಿ ಪ್ರಾರಂಭವಾದ ನೊಬೆಲ್ ಪ್ರಶಸ್ತಿಗಳಲ್ಲಿ 119 ಜನರಿಗೆ ಸಾಹಿತ್ಯ ನೋಬೆಲ್‌ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಮಹಿಳೆಯರಲ್ಲಿ ಅನ್ನಿ ಎರ್ನಾಕ್ಸ್‌ 17 ನೇ ಮಹಿಳೆಯಾಗಿದ್ದಾರೆ.

ಆಲ್ಟ್‌ನ್ಯೂಸ್‌ನ ಪ್ರತೀಕ್‌, ಜುಬೇರ್‌ ನಾಮನಿರ್ದೇಶನ

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕರು ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್‌ ಝುಬೇರ್‌ ಹಾಗೂ ಪ್ರತೀಕ್‌ ಸಿನ್ಹಾ ಅವರು 2022ರ ನೊಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ನೊಬೆಲ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವವರನ್ನು ಸಮಿತಿಯು ಬಹಿರಂಗಪಡಿಸಿಲ್ಲ. ಮೂಲಗಳ ಪ್ರಕಾರ, ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಪೋಪ್ ಫ್ರಾನ್ಸಿಸ್, ಟುವಾಲು ವಿದೇಶಾಂಗ ಸಚಿವ ಸೈಮನ್ ಕೋಫೆ ಸೇರಿ ಹಲವರು ನಾಮನಿರ್ದೇಶನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧೆ ಪಟ್ಟಿಯಲ್ಲಿ ಸುಮಾರು 343 ಅಭ್ಯರ್ಥಿಗಳಿದ್ದಾರೆ. ಈ ಪೈಕಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಪಟ್ಟಿಯಲ್ಲಿ ಝುಬೇರ್‌ ಮತ್ತು ಪ್ರತೀಕ್ ಸಿನ್ಹಾ ಹೆಸರು ಸೇರಿರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...