Homeಅಂತರಾಷ್ಟ್ರೀಯನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ಗೆಲಾಕ್ಸಿ ಹಾಗೂ ಕಪ್ಪು ಕುಳಿ ಕುರಿತು ನಡೆಸಿದ ಅಧ್ಯಯನಕ್ಕೆ ಮೂರು ವಿಜ್ಞಾನಿಗಳಿಗೆ ಈ ಬಾರಿಯ ಭೌತಶಾಸ್ತ್ರದ ನೊಬೆಲ್ ಪುರಸ್ಕಾರವನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಘೋಷಿಸಿದೆ

- Advertisement -
- Advertisement -

ಮಹಿಳಾ ವಿಜ್ಞಾನಿ ಸೇರಿ ವಿಶ್ವದ ಆಳ ಗರ್ಭದಲ್ಲಿರುವ ರಹಸ್ಯಗಳನ್ನು ಅನಾವರಣ ಮಾಡಿದ ಮೂವರು ಭೌತವಿಜ್ಞಾನಿಗಳಿಗೆ ರಾಯಲ್‌ ಸ್ವೀಡಿಷ್‌ ಅಕಾಡೆಮಿ ಆಫ್‌ ಸೈನ್ಸ್‌ ನೀಡುವ ಪ್ರತಿಷ್ಠಿತ ಭೌತಶಾಸ್ತ್ರದ ನೊಬೆಲ್‌ ಪುರಸ್ಕಾರ ಲಭಿಸಿದೆ.

ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ರೋಜರ್‌ ಪೆನ್ರೋಸ್‌, ಆಲ್ಬರ್ಟ್‌ ಐನ್‌ಸ್ಟೀನ್‌ ಅವರ ಸಾಪೇಕ್ಷ ಸಿದ್ದಾಂತವನ್ನು ಅನ್ವೇಷಿಸುವುದಕ್ಕೆ ಗಣಿತದ ವಿನೂತನ ಪದ್ಧತಿಯನ್ನು ಕಂಡುಕೊಂಡವರು. ಈ ಪದ್ಧತಿಯ ಮೂಲಕ ಕಪ್ಪು ಕುಳಿ(black hole) ರೂಪ ಪಡೆಯುವ ಬಗೆಯನ್ನು ವಿವರಿಸಿದರು. ಇವರಿಗೆ ಪ್ರಶಸ್ತ್ರಿಯ ಒಂದು ಭಾಗವನ್ನು ನೀಡಲಾಗುತ್ತಿದೆ.

1965ರಲ್ಲಿ ರೋಜರ್‌ ಕಪ್ಪು ಕುಳಿಗಳು ನಿಜಕ್ಕೂ ಸೃಷ್ಟಿಯಾಗಬಹುದೆಂದು ನಿರೂಪಿಸಿದರು ಹಾಗೂ ಆ ಬಗ್ಗೆ ವಿವರವಾಗಿ ಉಲ್ಲೇಖಿಸಿದರು.

ಜರ್ಮನಿಯ ಮ್ಯಾಕ್ಸ್‌ಪ್ಲಾಂಕ್‌ ಇನ್‌ಸ್ಟ್ರಿಟ್ಯೂಟ್‌ ಆಫ್‌ ಎಕ್ಸ್‌ಟ್ರಾಟೆರಿಸ್ಟ್ರಿಯಲ್‌ ಫಿಸಿಕ್ಸ್‌ನಲ್ಲಿ ನಿರ್ದೇಶಕರಾಗಿರುವ ರೀನ್‌ಹಾರ್ಡ್‌ ಗೆಂಜೆಲ್‌ ಮತ್ತು ಲಾಸ್‌ ಏಂಜೆಲಿಸ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಆಂಡ್ರಿಯಾ ಘೆಜ್‌ ಪ್ರಶಸ್ತಿಯ ಇನ್ನೊಂದು ಭಾಗವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನೂತನ ಹೆಪಟೈಟಿಸ್‌ ‘ಸಿ’ ವೈರಸ್‌ ಬಗೆಗಿನ ಸಂಶೋಧನೆಗೆ 2020ರ ನೊಬೆಲ್‌ ಪ್ರಶಸ್ತಿ

ತೊಂಬತ್ತರ ದಶಕದಿಂದ ಈ ಇಬ್ಬರು ವಿಜ್ಞಾನಿಗಳು ತಮ್ಮದೇ ತಂಡದ ಮೂಲಕ ನಮ್ಮ ಸೌರಮಂಡಲದಲ್ಲಿರುವ ಮಿಲ್ಕಿ ವೇ ಗೆಲಾಕ್ಸಿಯನ್ನು ಅಧ್ಯಯನ ಮಾಡಲಾರಂಭಿಸಿದರು. ಈ ಇಬ್ಬರು ವಿಜ್ಞಾನಿಗಳ ತಂಡವು ಗೆಲಾಕ್ಸಿಯ ಕೇಂದ್ರದಲ್ಲಿ, ಅದೃಶ್ಯವೂ ಹಾಗೂ ಅತ್ಯಂತ ಭಾರತದ ಕಾಯವಿರುವುದನ್ನು ಗುರುತಿಸಿತು. ಇದು ಗೆಲಾಕ್ಸಿಯ ನಕ್ಷತ್ರಗಳನ್ನು ನಿಯಂತ್ರಿಸುತ್ತದೆ ಎಂಬುದು ತಿಳಿಯಿತು.

40 ಲಕ್ಷ ಸೂರ್ಯರ ಸಾಂದ್ರತೆಯನ್ನ ಒಟ್ಟು ಮಾಡಿದರೆ ಆಗಬಹುದಾದ ದೊಡ್ಡದಾದ ಕಾಯವಿದು ಎಂಬುದನ್ನು ಗೆಂಜೆಲ್‌ ಮತ್ತು ಘೆಜ್‌ ತಂಡಗಳು ಕಂಡುಕೊಂಡವು.

ವಿಶೇಷವೆಂದರೆ ಘೆಜ್‌ ಭೌತಶಾಸ್ತ್ರದಲ್ಲಿ ನೊಬೆಲ್‌ ಗೌರವಕ್ಕೆ ಭಾಜನರಾದ ನಾಲ್ಕನೆಯ ಮಹಿಳಾ ವಿಜ್ಞಾನಿಯಾಗಿದ್ದಾರೆ. 1903ರಲ್ಲಿ ಪೊಲ್ಯಾಂಡಿನ ಮೇರಿ ಸ್ಕೊಲೊಡೋಸ್ಕ್‌, 1963ರಲ್ಲಿ ಅಮೆರಿಕದ ಮಾರಿಯಾ ಗೋಪರ್ಟ್‌ ಮೇಯರ್‌, 2018ರಲ್ಲಿ ಕೆನಡಾದ ಡೊನಾ ಸ್ಟ್ರಿಕ್‌ಲ್ಯಾಂಡ್‌ ಈ ಗೌರವಕ್ಕೆ ಪಾತ್ರರಾಗಿದ್ದರು.

ಕೃಪೆ: ಟೆಕ್ ಕನ್ನಡ


 

ಇದನ್ನೂ ಓದಿ: ಕೊರೋನಾ – ಭಾರತದ ಆರ್ಥಿಕತೆ: ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರು ಏನೇಳ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...