Homeಅಂತರಾಷ್ಟ್ರೀಯನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ಗೆಲಾಕ್ಸಿ ಹಾಗೂ ಕಪ್ಪು ಕುಳಿ ಕುರಿತು ನಡೆಸಿದ ಅಧ್ಯಯನಕ್ಕೆ ಮೂರು ವಿಜ್ಞಾನಿಗಳಿಗೆ ಈ ಬಾರಿಯ ಭೌತಶಾಸ್ತ್ರದ ನೊಬೆಲ್ ಪುರಸ್ಕಾರವನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಘೋಷಿಸಿದೆ

- Advertisement -
- Advertisement -

ಮಹಿಳಾ ವಿಜ್ಞಾನಿ ಸೇರಿ ವಿಶ್ವದ ಆಳ ಗರ್ಭದಲ್ಲಿರುವ ರಹಸ್ಯಗಳನ್ನು ಅನಾವರಣ ಮಾಡಿದ ಮೂವರು ಭೌತವಿಜ್ಞಾನಿಗಳಿಗೆ ರಾಯಲ್‌ ಸ್ವೀಡಿಷ್‌ ಅಕಾಡೆಮಿ ಆಫ್‌ ಸೈನ್ಸ್‌ ನೀಡುವ ಪ್ರತಿಷ್ಠಿತ ಭೌತಶಾಸ್ತ್ರದ ನೊಬೆಲ್‌ ಪುರಸ್ಕಾರ ಲಭಿಸಿದೆ.

ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ರೋಜರ್‌ ಪೆನ್ರೋಸ್‌, ಆಲ್ಬರ್ಟ್‌ ಐನ್‌ಸ್ಟೀನ್‌ ಅವರ ಸಾಪೇಕ್ಷ ಸಿದ್ದಾಂತವನ್ನು ಅನ್ವೇಷಿಸುವುದಕ್ಕೆ ಗಣಿತದ ವಿನೂತನ ಪದ್ಧತಿಯನ್ನು ಕಂಡುಕೊಂಡವರು. ಈ ಪದ್ಧತಿಯ ಮೂಲಕ ಕಪ್ಪು ಕುಳಿ(black hole) ರೂಪ ಪಡೆಯುವ ಬಗೆಯನ್ನು ವಿವರಿಸಿದರು. ಇವರಿಗೆ ಪ್ರಶಸ್ತ್ರಿಯ ಒಂದು ಭಾಗವನ್ನು ನೀಡಲಾಗುತ್ತಿದೆ.

1965ರಲ್ಲಿ ರೋಜರ್‌ ಕಪ್ಪು ಕುಳಿಗಳು ನಿಜಕ್ಕೂ ಸೃಷ್ಟಿಯಾಗಬಹುದೆಂದು ನಿರೂಪಿಸಿದರು ಹಾಗೂ ಆ ಬಗ್ಗೆ ವಿವರವಾಗಿ ಉಲ್ಲೇಖಿಸಿದರು.

ಜರ್ಮನಿಯ ಮ್ಯಾಕ್ಸ್‌ಪ್ಲಾಂಕ್‌ ಇನ್‌ಸ್ಟ್ರಿಟ್ಯೂಟ್‌ ಆಫ್‌ ಎಕ್ಸ್‌ಟ್ರಾಟೆರಿಸ್ಟ್ರಿಯಲ್‌ ಫಿಸಿಕ್ಸ್‌ನಲ್ಲಿ ನಿರ್ದೇಶಕರಾಗಿರುವ ರೀನ್‌ಹಾರ್ಡ್‌ ಗೆಂಜೆಲ್‌ ಮತ್ತು ಲಾಸ್‌ ಏಂಜೆಲಿಸ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಆಂಡ್ರಿಯಾ ಘೆಜ್‌ ಪ್ರಶಸ್ತಿಯ ಇನ್ನೊಂದು ಭಾಗವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನೂತನ ಹೆಪಟೈಟಿಸ್‌ ‘ಸಿ’ ವೈರಸ್‌ ಬಗೆಗಿನ ಸಂಶೋಧನೆಗೆ 2020ರ ನೊಬೆಲ್‌ ಪ್ರಶಸ್ತಿ

ತೊಂಬತ್ತರ ದಶಕದಿಂದ ಈ ಇಬ್ಬರು ವಿಜ್ಞಾನಿಗಳು ತಮ್ಮದೇ ತಂಡದ ಮೂಲಕ ನಮ್ಮ ಸೌರಮಂಡಲದಲ್ಲಿರುವ ಮಿಲ್ಕಿ ವೇ ಗೆಲಾಕ್ಸಿಯನ್ನು ಅಧ್ಯಯನ ಮಾಡಲಾರಂಭಿಸಿದರು. ಈ ಇಬ್ಬರು ವಿಜ್ಞಾನಿಗಳ ತಂಡವು ಗೆಲಾಕ್ಸಿಯ ಕೇಂದ್ರದಲ್ಲಿ, ಅದೃಶ್ಯವೂ ಹಾಗೂ ಅತ್ಯಂತ ಭಾರತದ ಕಾಯವಿರುವುದನ್ನು ಗುರುತಿಸಿತು. ಇದು ಗೆಲಾಕ್ಸಿಯ ನಕ್ಷತ್ರಗಳನ್ನು ನಿಯಂತ್ರಿಸುತ್ತದೆ ಎಂಬುದು ತಿಳಿಯಿತು.

40 ಲಕ್ಷ ಸೂರ್ಯರ ಸಾಂದ್ರತೆಯನ್ನ ಒಟ್ಟು ಮಾಡಿದರೆ ಆಗಬಹುದಾದ ದೊಡ್ಡದಾದ ಕಾಯವಿದು ಎಂಬುದನ್ನು ಗೆಂಜೆಲ್‌ ಮತ್ತು ಘೆಜ್‌ ತಂಡಗಳು ಕಂಡುಕೊಂಡವು.

ವಿಶೇಷವೆಂದರೆ ಘೆಜ್‌ ಭೌತಶಾಸ್ತ್ರದಲ್ಲಿ ನೊಬೆಲ್‌ ಗೌರವಕ್ಕೆ ಭಾಜನರಾದ ನಾಲ್ಕನೆಯ ಮಹಿಳಾ ವಿಜ್ಞಾನಿಯಾಗಿದ್ದಾರೆ. 1903ರಲ್ಲಿ ಪೊಲ್ಯಾಂಡಿನ ಮೇರಿ ಸ್ಕೊಲೊಡೋಸ್ಕ್‌, 1963ರಲ್ಲಿ ಅಮೆರಿಕದ ಮಾರಿಯಾ ಗೋಪರ್ಟ್‌ ಮೇಯರ್‌, 2018ರಲ್ಲಿ ಕೆನಡಾದ ಡೊನಾ ಸ್ಟ್ರಿಕ್‌ಲ್ಯಾಂಡ್‌ ಈ ಗೌರವಕ್ಕೆ ಪಾತ್ರರಾಗಿದ್ದರು.

ಕೃಪೆ: ಟೆಕ್ ಕನ್ನಡ


 

ಇದನ್ನೂ ಓದಿ: ಕೊರೋನಾ – ಭಾರತದ ಆರ್ಥಿಕತೆ: ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರು ಏನೇಳ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...