Homeಅಂತರಾಷ್ಟ್ರೀಯನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ಗೆಲಾಕ್ಸಿ ಹಾಗೂ ಕಪ್ಪು ಕುಳಿ ಕುರಿತು ನಡೆಸಿದ ಅಧ್ಯಯನಕ್ಕೆ ಮೂರು ವಿಜ್ಞಾನಿಗಳಿಗೆ ಈ ಬಾರಿಯ ಭೌತಶಾಸ್ತ್ರದ ನೊಬೆಲ್ ಪುರಸ್ಕಾರವನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಘೋಷಿಸಿದೆ

- Advertisement -
- Advertisement -

ಮಹಿಳಾ ವಿಜ್ಞಾನಿ ಸೇರಿ ವಿಶ್ವದ ಆಳ ಗರ್ಭದಲ್ಲಿರುವ ರಹಸ್ಯಗಳನ್ನು ಅನಾವರಣ ಮಾಡಿದ ಮೂವರು ಭೌತವಿಜ್ಞಾನಿಗಳಿಗೆ ರಾಯಲ್‌ ಸ್ವೀಡಿಷ್‌ ಅಕಾಡೆಮಿ ಆಫ್‌ ಸೈನ್ಸ್‌ ನೀಡುವ ಪ್ರತಿಷ್ಠಿತ ಭೌತಶಾಸ್ತ್ರದ ನೊಬೆಲ್‌ ಪುರಸ್ಕಾರ ಲಭಿಸಿದೆ.

ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ರೋಜರ್‌ ಪೆನ್ರೋಸ್‌, ಆಲ್ಬರ್ಟ್‌ ಐನ್‌ಸ್ಟೀನ್‌ ಅವರ ಸಾಪೇಕ್ಷ ಸಿದ್ದಾಂತವನ್ನು ಅನ್ವೇಷಿಸುವುದಕ್ಕೆ ಗಣಿತದ ವಿನೂತನ ಪದ್ಧತಿಯನ್ನು ಕಂಡುಕೊಂಡವರು. ಈ ಪದ್ಧತಿಯ ಮೂಲಕ ಕಪ್ಪು ಕುಳಿ(black hole) ರೂಪ ಪಡೆಯುವ ಬಗೆಯನ್ನು ವಿವರಿಸಿದರು. ಇವರಿಗೆ ಪ್ರಶಸ್ತ್ರಿಯ ಒಂದು ಭಾಗವನ್ನು ನೀಡಲಾಗುತ್ತಿದೆ.

1965ರಲ್ಲಿ ರೋಜರ್‌ ಕಪ್ಪು ಕುಳಿಗಳು ನಿಜಕ್ಕೂ ಸೃಷ್ಟಿಯಾಗಬಹುದೆಂದು ನಿರೂಪಿಸಿದರು ಹಾಗೂ ಆ ಬಗ್ಗೆ ವಿವರವಾಗಿ ಉಲ್ಲೇಖಿಸಿದರು.

ಜರ್ಮನಿಯ ಮ್ಯಾಕ್ಸ್‌ಪ್ಲಾಂಕ್‌ ಇನ್‌ಸ್ಟ್ರಿಟ್ಯೂಟ್‌ ಆಫ್‌ ಎಕ್ಸ್‌ಟ್ರಾಟೆರಿಸ್ಟ್ರಿಯಲ್‌ ಫಿಸಿಕ್ಸ್‌ನಲ್ಲಿ ನಿರ್ದೇಶಕರಾಗಿರುವ ರೀನ್‌ಹಾರ್ಡ್‌ ಗೆಂಜೆಲ್‌ ಮತ್ತು ಲಾಸ್‌ ಏಂಜೆಲಿಸ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಆಂಡ್ರಿಯಾ ಘೆಜ್‌ ಪ್ರಶಸ್ತಿಯ ಇನ್ನೊಂದು ಭಾಗವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನೂತನ ಹೆಪಟೈಟಿಸ್‌ ‘ಸಿ’ ವೈರಸ್‌ ಬಗೆಗಿನ ಸಂಶೋಧನೆಗೆ 2020ರ ನೊಬೆಲ್‌ ಪ್ರಶಸ್ತಿ

ತೊಂಬತ್ತರ ದಶಕದಿಂದ ಈ ಇಬ್ಬರು ವಿಜ್ಞಾನಿಗಳು ತಮ್ಮದೇ ತಂಡದ ಮೂಲಕ ನಮ್ಮ ಸೌರಮಂಡಲದಲ್ಲಿರುವ ಮಿಲ್ಕಿ ವೇ ಗೆಲಾಕ್ಸಿಯನ್ನು ಅಧ್ಯಯನ ಮಾಡಲಾರಂಭಿಸಿದರು. ಈ ಇಬ್ಬರು ವಿಜ್ಞಾನಿಗಳ ತಂಡವು ಗೆಲಾಕ್ಸಿಯ ಕೇಂದ್ರದಲ್ಲಿ, ಅದೃಶ್ಯವೂ ಹಾಗೂ ಅತ್ಯಂತ ಭಾರತದ ಕಾಯವಿರುವುದನ್ನು ಗುರುತಿಸಿತು. ಇದು ಗೆಲಾಕ್ಸಿಯ ನಕ್ಷತ್ರಗಳನ್ನು ನಿಯಂತ್ರಿಸುತ್ತದೆ ಎಂಬುದು ತಿಳಿಯಿತು.

40 ಲಕ್ಷ ಸೂರ್ಯರ ಸಾಂದ್ರತೆಯನ್ನ ಒಟ್ಟು ಮಾಡಿದರೆ ಆಗಬಹುದಾದ ದೊಡ್ಡದಾದ ಕಾಯವಿದು ಎಂಬುದನ್ನು ಗೆಂಜೆಲ್‌ ಮತ್ತು ಘೆಜ್‌ ತಂಡಗಳು ಕಂಡುಕೊಂಡವು.

ವಿಶೇಷವೆಂದರೆ ಘೆಜ್‌ ಭೌತಶಾಸ್ತ್ರದಲ್ಲಿ ನೊಬೆಲ್‌ ಗೌರವಕ್ಕೆ ಭಾಜನರಾದ ನಾಲ್ಕನೆಯ ಮಹಿಳಾ ವಿಜ್ಞಾನಿಯಾಗಿದ್ದಾರೆ. 1903ರಲ್ಲಿ ಪೊಲ್ಯಾಂಡಿನ ಮೇರಿ ಸ್ಕೊಲೊಡೋಸ್ಕ್‌, 1963ರಲ್ಲಿ ಅಮೆರಿಕದ ಮಾರಿಯಾ ಗೋಪರ್ಟ್‌ ಮೇಯರ್‌, 2018ರಲ್ಲಿ ಕೆನಡಾದ ಡೊನಾ ಸ್ಟ್ರಿಕ್‌ಲ್ಯಾಂಡ್‌ ಈ ಗೌರವಕ್ಕೆ ಪಾತ್ರರಾಗಿದ್ದರು.

ಕೃಪೆ: ಟೆಕ್ ಕನ್ನಡ


 

ಇದನ್ನೂ ಓದಿ: ಕೊರೋನಾ – ಭಾರತದ ಆರ್ಥಿಕತೆ: ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರು ಏನೇಳ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....